ಆನೆ ಓಡಿಸಲು ಹೊಡೆದ ಗುಂಡು ತಗುಲಿ ಗಾಯ


Team Udayavani, Dec 27, 2018, 7:29 AM IST

36.jpg

ಚಾಮರಾಜನಗರ/ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಸಮೀಪ ಜಮೀನಿಗೆ ನುಗ್ಗಿದ್ದ ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಡಬಲ್‌ ಬ್ಯಾರೆಲ್‌ ಗನ್‌ನಿಂದ ಶೂಟ್‌ ಮಾಡಿದಾಗ ಸಣ್ಣ, ಸಣ್ಣ ಗುಂಡುಗಳು (ಪೆಲ್ಲೆಟ್ಸ್‌) ತಗುಲಿ ಆರು ಮಂದಿಗೆ ಗಾಯಗಳಾಗಿದೆ. ಸಿದ್ದಾರ್ಥ (20), ರಾಜಶೇಖರ್‌  (22) ಸುಜಿತ್‌ (15) ರಘುವೀರ್‌ (21) ದರ್ಶನ್‌ (17) ಪ್ರವೀಣ್‌ (18) ಗಾಯಗೊಂಡವರು. ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಅರಣ್ಯ ಪ್ರದೇಶದಿಂದ ಬಂದ ಕಾಡಾನೆಗಳು ಮಧುವನಹಳ್ಳಿ ಗ್ರಾಮದ ಸುಬ್ಬಶೆಟ್ಟಿ ಮತ್ತು ಹೊಂಗಶೆಟ್ಟಿ ಎಂಬುವರ ಕಬ್ಬಿನ ಗದ್ದೆ ಮೇಲೆ ಬುಧವಾರ ದಾಳಿ ನಡೆಸಿ, ಕಬ್ಬಿನ ಫ‌ಸಲನ್ನು ನಾಶಪಡಿಸಿವೆ.

ಗುಂಪಿನಲ್ಲಿ ಎರಡು ಮರಿಯಾನೆ ಸೇರಿ ಆರು ಆನೆಗಳಿದ್ದವು. ಗ್ರಾಮಸ್ಥರು ಅರಣ್ಯಾಧಿಕಾರಿ ಗಳಿಗೆ ವಿಷಯ ತಿಳಿಸಿದಾಗ ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಆರ್‌ಎಫ್ಒಗಳಾದ ಧನುಷ್‌, ಮಹದೇವ ಸ್ವಾಮಿ, ಡಿಆರ್‌ ಎಫ್ಒ ಬೋಜಪ್ಪ ಮತ್ತು ಬಿಆರ್‌ಟಿ ಹಾಗೂ ಮಲೆ ಮಹದೇಶ್ವರ ವನ್ಯಜೀವಿ ಸಿಬ್ಬಂದಿ ಆಗಮಿಸಿದರು. ಕಬ್ಬಿನ ಗದ್ದೆಯ ಮಧ್ಯಭಾಗದಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಬೇರೆಡೆಗೆ ಓಡಿಸಲು ಅಧಿಕಾರಿಗಳು ಮತ್ತು ಗ್ರಾಮಸ್ಥರು ಹರಸಾಹಸ ಪಟ್ಟರು. ಆದರೂ ಜಗ್ಗದೆ ಆನೆಗಳು ಕಬ್ಬಿನ ಗದ್ದೆಯಲ್ಲೆ ಬೀಡುಬಿಟ್ಟವು. ಒಂದೆಡೆ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಆನೆಗಳತ್ತ ಕಲ್ಲು ತೂರಲಾರಂಭಿಸಿದರು.

ಮತ್ತೂಂದೆಡೆ, ಅರಣ್ಯಾಧಿಕಾರಿಗಳು ಸುಮಾರು 10 ರಿಂದ 12 ಬಾರಿ ಗುಂಡು ಮತ್ತು ಪಟಾಕಿ ಸಿಡಿಸಿದರು. ಇದಕ್ಕೂ ಆನೆಗಳು ಜಗ್ಗದಿದ್ದಾಗ ಡಬಲ್‌ ಬ್ಯಾರೆಲ್‌ ಗನ್‌ನಿಂದ ಶೂಟ್‌ ಮಾಡಿದರು. ಈ ಸಂದರ್ಭದಲ್ಲಿ ಕಾಡತೂಸಿನೊಳಗಿರುವ ಪೆಲೆಟ್ಸ್‌ (ಸಣ್ಣ ಗುಂಡುಗಳು) ಆನೆಗಳನ್ನು ನೋಡಲು ಮರದ ಮೇಲೆ ಕುಳಿತಿದ್ದ 6 ಮಂದಿ ಯುವಕರಿಗೆ ತಗುಲಿವೆ. ಯುವಕರ ಹೊಟ್ಟೆ, ಕೈ, ಕತ್ತಿನ ಕೆಳಬಾಗ, ಎದೆ ಭಾಗ ಸೇರಿದಂತೆ ಹಲವೆಡೆ ತಗುಲಿದ ಪರಿಣಾಮ ಗಾಯಗಳಾಗಿವೆ. ತಕ್ಷಣವೆ ಅರಣ್ಯಾಧಿಕಾರಿಗಳು ಯುವಕರನ್ನು ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಿದರು. ಇಬ್ಬರು ಅಪಾಯದಿಂದ ಪಾರಾಗಿದ್ದು, ನಾಲ್ವರನ್ನು ಹೆಚ್ಚಿನ
ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿದೆ. 

ನಾಗರಿಕರು ಹಾಗೂ ನಮ್ಮ ಸಿಬ್ಬಂದಿಯತ್ತ ನುಗ್ಗಿ ಬರುತ್ತಿದ್ದ ಕಾಡಾನೆಗಳಿಂದ ಪ್ರಾಣ ರಕ್ಷಣೆಗಾಗಿ ಶೂಟ್‌ ಮಾಡಲಾಯಿತು. ಇದರಿಂದ ಮರದ ಮೇಲೆ ಕುಳಿತಿದ್ದ ಆರು ಮಂದಿಗೆ ಪೆಲೆಟ್ಸ್‌ ತಗುಲಿದೆ. ಇಬ್ಬರಿಗೆ ಯಾವುದೇ ತೊಂದರೆ ಇಲ್ಲ. ನಾಲ್ಕು ಮಂದಿಯನ್ನು ಎಕ್ಸ್‌ ರೇ ಹಾಗೂ ಇನ್ನಿತರ ತಪಾಸಣೆಗಾಗಿ ಕೆ.ಆರ್‌. ಆಸ್ಪತ್ರೆಗೆ ಕಳುಹಿಸಲಾಗಿದೆ. ಯಾವುದೇ ಅಪಾಯವಾಗಿಲ್ಲ..
 ● ಏಡುಕೊಂಡಲು, ಡಿಸಿಎಫ್, ಮಹದೇಶ್ವರ ವನ್ಯಜೀವಿ ಧಾಮ. 

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.