ಮೂವ್ವತ್ತು ಬಯಲಾಟ ಕಲಾವಿದರಿಗೆ ರಾಜ್ಯ ಪ್ರಶಸ್ತಿ


Team Udayavani, Dec 27, 2018, 7:39 AM IST

39.jpg

ಬಾಗಲಕೋಟೆ: ಕರ್ನಾಟಕ ಬಯಲಾಟ ಅಕಾಡೆಮಿ 2017-18 ಮತ್ತು 2018-19ನೇ ಸಾಲಿನ ಪ್ರಶಸ್ತಿ ಪ್ರಕಟಿಸಿದ್ದು, ಇಬ್ಬರು ಅಂಗವಿಕಲ ಕಲಾವಿದರು ಸೇರಿ ಒಟ್ಟು 30 ಜನರಿಗೆ ಪ್ರಶಸ್ತಿ ಲಭಿಸಿದೆ. ವಿವಿಧ ಅಕಾಡೆಮಿಗಳ ಸಂಯುಕ್ತವಾಗಿದ್ದ ಬಯಲಾಟ ವಿಭಾಗವನ್ನು ವಿಂಗಡಿಸಿ ಕರ್ನಾಟಕ ಬಯಲಾಟ ಅಕಾಡೆಮಿ ಎಂದು ಪ್ರತ್ಯೇಕ ಅಕಾಡೆಮಿ ಸ್ಥಾಪಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಶಸ್ತಿಗೆ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಕೇಂದ್ರ ಕಚೇರಿಯಲ್ಲಿ ಅಕಾಡೆಮಿ ಅಧ್ಯಕ್ಷ ಡಾ.ಶ್ರೀರಾಮ ಇಟ್ಟಣ್ಣವರ, ರಿಜಿಸ್ಟ್ರಾರ್‌ ಶಶಿಕಲಾ ಹುಡೇದ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಮಾಡಿದರು. 

2017-18ನೇ ಸಾಲಿಗೆ 15 ಜನ ಹಾಗೂ 2018-19ನೇ ಸಾಲಿಗೆ 15 ಜನ ಸೇರಿ ಒಟ್ಟು 30 ಮಂದಿ ಆಯ್ಕೆ ಮಾಡಲಾಗಿದೆ. ಅಕಾಡೆಮಿಯ ಗೌರವ ಪ್ರಶಸ್ತಿಗೆ ತಲಾ ಐವರನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿ ತಲಾ 50 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ವಾರ್ಷಿಕ ಪ್ರಶಸ್ತಿಗೆ ತಲಾ 10 ಜನ ಹಿರಿಯ ಕಲಾವಿರದನ್ನು ಆಯ್ಕೆ ಮಾಡಿದ್ದು, ತಲಾ 25 ಸಾವಿರ ನಗದು, ಪ್ರಶಸ್ತಿ ಒಳಗೊಂಡಿದೆ. ಪ್ರಶಸ್ತಿ ಪುರಸತರಲ್ಲಿ ಇಬ್ಬರು ಅಂಗವಿ ಕಲರು ಸಹಿತ ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಅನುಗುಣವಾಗಿ
ಅರ್ಜಿ ಸಲ್ಲಿಸದೇ ಇದ್ದರೂ ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷ ಡಾ.ಶ್ರೀರಾಮ ತಿಳಿಸಿದರು.

2017ರ ಸಾಲಿನ ಗೌರವ ಪ್ರಶಸ್ತಿ: ಬೆಳಗಾವಿ ರಾಯಬಾಗ ತಾಲೂಕಿನ ಖೇಮಲಾಪುರದ ಸಂತ್ರಾಮ ಬಡಿಗೇರ (ಶ್ರೀಕೃಷ್ಣ ಪಾರಿಜಾತ), ಬಾಗಲಕೋಟೆಯ ಬೀಳಗಿ ತಾಲೂಕಿನ ಚಿಕ್ಕ ಹಂಚಿನಾಳ ಗ್ರಾಮದ ಶಿವಪ್ಪ ಕಾಟಪ್ಪನವರ (ಸಣ್ಣಾಟ), ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂ ಕಿನ ಬೊಮ್ಮಾಲಾಟಪುರದ ಶಂಕ್ರಪ್ಪ (ಸೂತ್ರಗೊಂಬೆ ಯಾಟ), ಮಂಡ್ಯದ ಕೋಣನೂರು ನಾಗರಾಜ
(ತೊಗಲು ಗೊಂಬೆಯಾಟ), ಬಳ್ಳಾರಿಯ ಕಾರೇಕಲ್ಲು ವೀರಾಪುರದ ರಂಗಾರೆಡ್ಡಿ ವೈ. (ದೊಡ್ಡಾಟ).

2017ರ ಸಾಲಿನ ವಾರ್ಷಿಕ ಪ್ರಶಸ್ತಿ: ಬೆಳಗಾವಿ ರಾಮದುರ್ಗ ತಾಲೂಕಿನ ಹೊಸಕೋಟಿಯ ಪಾರವ್ವ ತಳಗೇರಿ (ಶ್ರೀಕೃಷ್ಣ ಪಾರಿಜಾತ), ಬಾಗಲಕೋಟೆ ರಬಕವಿ-ಬನಹಟ್ಟಿ ನಾವಲಗಿ ಗ್ರಾಮದ ಚಂದ್ರವ್ವ ಗುಡ್ಲಮನಿ (ಶ್ರೀಕೃಷ್ಣ ಪಾರಿಜಾತ) ಹಾಗೂ ಹೊಸೂರ ಗ್ರಾಮದ ಕಲ್ಲಪ್ಪ ತೇಲಿ (ಸಣ್ಣಾಟ) ಬೆಳಗಾವಿಯ ಬಸಪ್ಪ ಕಲ್ಲಪ್ಪ ಕುಂಬಾರ (ಶ್ರೀಕೃಷ್ಣ ಪಾರಿಜಾತ) ಮತ್ತು ಬಸವರಾಜ ಖೇಮಲಾಪುರ
(ಸಣ್ಣಾಟ), ಹಾಸನದ ಎಸ್‌.ನಾಗರಾಜ (ತೊಗಲು ಗೊಂಬೆಯಾಟ), ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಹಾದಿಕೇರಿಯ ಎಚ್‌.ಬಿ. ರಮೇಶ (ದೊಡ್ಡಾಟ), ದಾವಣಗೆರೆ ಜಿಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಎಚ್‌.ಆರ್‌.ರೇವಣ್ಣ (ದೊಡ್ಡಾಟ),
ಧಾರವಾಡದ ತಿಮ್ಮರೆಡ್ಡಿ ಭೀಮರೆಡ್ಡಿ ಮೇಟಿ (ದೊಡ್ಡಾಟ), ಕಲಬುರಗಿಯ ಚಿತ್ತಾಪುರ ತಾಲೂಕಿನ ಕೊಲ್ಲೂರ ಗ್ರಾಮದ ರಾಮಲಿಂಗ ಪೇಟಿ(ದೊಡ್ಡಾಟ).

2018ರ ಸಾಲಿನ ಗೌರವ ಪ್ರಶಸ್ತಿ: ವಿಜಯಪುರದ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಗುರಪಾದಯ್ಯ ಧಾರವಾಡಮಠ (ಶ್ರೀಕೃಷ್ಣ ಪಾರಿಜಾತ), ಶಿವಮೊಗ್ಗದ ಪರಿಸರ ಶಿವರಾಮ್‌(ಸಣ್ಣಾಟ), ಬೆಳಗಾವಿಯ ಗೋಕಾಕ ತಾಲೂಕಿನ ಅರಭಾವಿ ಗ್ರಾಮದ ಕೆಂಪ್ಪ ಹರಿಜನ (ಸಣ್ಣಾಟ), ಚಿತ್ರದುರ್ಗಯ ಮೊಳಕಾಲ್ಮೂರು ತಾಲೂಕಿನ ಎರೇನಹಳ್ಳಿ ಗ್ರಾಮದ ಬಿ. ಮಾರಣ್ಣ (ದೊಡ್ಡಾಟ), ಗದಗದ ಚನ್ನಬಸವಯ್ಯ ಕಾಡಸಿದ್ದೇಶ್ವರ ಮಠ (ದೊಡ್ಡಾಟ). 

2018ರ ಸಾಲಿನ ವಾರ್ಷಿಕ ಪ್ರಶಸ್ತಿ: ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ತಳೇವಾಡದ ಶ್ರೀಶೈಲ ಹನಮಂತ ಬಳೂತಿ (ಶ್ರೀಕೃಷ್ಣ ಪಾರಿಜಾತ), ಬಾಗಲಕೋಟೆಯ ಮುಧೋಳ ತಾಲೂಕಿನ ದಾದನಟ್ಟಿಯ ಸಿದ್ದಪ್ಪ ಕುರಿ (ಶ್ರೀಕೃಷ್ಣ ಪಾರಿಜಾತ), ಬೆಳಗಾವಿಯ ದಸ್ತಗೀರ ಸಾಬ್‌ ಮೌಲಾಶೇಖ್‌ (ಶ್ರೀಕೃಷ್ಣ ಪಾರಿಜಾತ), ವಿಜಯ ಪುರ ಜಿಲ್ಲೆಯ ಸಾರವಾಡ ಗ್ರಾಮದ ಶಾಂತಾಪ್ಪ ಎಂ.
ಕೋಟಿ (ಸಣ್ಣಾಟ), ಬೀದರ್‌ನ ಮಹಾದೇವಮ್ಮ (ಸಣ್ಣಾಟ), ರಾಮನಗರದ ಲಕ್ಷಮ್ಮ (ತೊಗಲು ಗೊಂಬೆಯಾಟ) ಹಾವೇರಿಯ ಶಂಕರ ಅರ್ಕಸಾಲಿ (ದೊಡ್ಡಾಟ), ಕೊಪ್ಪಳದ ಮುರನಾಳ ಗ್ರಾಮದ ಶಂಕ್ರಪ್ಪ ಕೊಪ್ಪಳ (ದೊಡ್ಡಾಟ), ರಾಯಚೂರಿನ ಸಣ್ಣಬಾಬು (ದೊಡ್ಡಾಟ),
ಯಾದಗಿರಿಯ ಬಸನಗೌಡ ಮಾಸ್ತರ ತಳವಾರಗೇರಿ (ದೊಡ್ಡಾಟ) ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರತ್ಯೇಕ ಅಕಾಡೆಮಿ ಸ್ಥಾಪನೆಯಾದ ಬಳಿಕ ಇದೇ ಮೊದಲ ಬಾರಿಗೆ 2017-18, 2018-19ನೇ ಸಾಲಿನ ವಾರ್ಷಿಕ ಹಾಗೂ ಗೌರವ ಪ್ರಶಸ್ತಿಗೆ ಒಟ್ಟು 30 ಜನ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಜನವರಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
 ● ಡಾ. ಶ್ರೀರಾಮ ಇಟ್ಟಣ್ಣವರ, ಅಧ್ಯಕ್ಷರು
ಕರ್ನಾಟಕ ಬಯಲಾಟ ಅಕಾಡೆಮಿ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.