ಮುಂಬೈ ಯುವತಿಯ ಮಾನಭಂಗ


Team Udayavani, Dec 27, 2018, 11:25 AM IST

rape.jpg

ಬೆಂಗಳೂರು: ವೀಕೆಂಡ್‌ ಪಾರ್ಟಿ ಬಳಿಕ ಮುಂಬೈ ಮೂಲದ ಹೋಟೆಲ್‌ ಮ್ಯಾನೇಜ್‌ಮೆಂಟ್‌ ಪದವೀಧರ ಯುವತಿಯನ್ನು ತನ್ನ ಮನೆಗೆ ಕರೆದೊಯ್ದು ಪ್ರತಿಷ್ಠಿತ ಹೋಟೆಲ್‌ನ ಮುಖ್ಯ ಶೆಫ್ (ಬಾಣಸಿಗ) ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನವೆಂಬರ್‌ 18ರಂದು ಘಟನೆ ನಡೆದಿದ್ದು, ಅತ್ಯಾಚಾರ ಘಟನೆಯಿಂದ ಮಾನಸಿಕ ಖನ್ನತೆಗೆ ಒಳಗಾಗಿದ್ದ ಯುವತಿ, ವೈದ್ಯರ ಬಳಿ ಕೌನ್ಸೆಲಿಂಗ್‌ ಪಡೆದು ಚೇತರಿಸಿಕೊಂಡಿದ್ದು, ತಡವಾಗಿ ದೂರು ನೀಡಿದ್ದಾರೆ. ಯುವತಿ ದೂರು ಆಧರಿಸಿ ಕೇರಳ ಮೂಲದ ಹಯಾನ್‌ ಬಬೂಲ್‌ (33) ಎಂಬಾತನ್ನು ಬಂಧಿಸಿರುವ ಅಶೋಕ್‌ ನಗರ ಠಾಣೆ ಪೊಲೀಸರು
ತನಿಖೆ ಮುಂದುವರಿಸಿದ್ದಾರೆ.

ನವೆಂಬರ್‌ 18ರಂದು ಘಟನೆ ನಡೆದಿದ್ದು, ಅತ್ಯಾಚಾರ ಘಟನೆಯಿಂದ ಮಾನಸಿಕ ಖನ್ನತೆಗೆ ಒಳಗಾಗಿದ್ದ ಯುವತಿ ವೈದ್ಯರ ಬಳಿ ಕೌನ್ಸಿಲಿಂಗ್‌ ಪಡೆದು ಚೇತರಿಸಿಕೊಂಡಿದ್ದು, ತಡವಾಗಿ ದೂರು ನೀಡಿರುವುದಾಗಿ ಯುವತಿ ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆನಡಾಗೆ ಹಾರುವ ಆಸೆ!: ಸಂತ್ರಸ್ತೆ ಯುವತಿ ಹೋಟೆಲ್‌ ಮ್ಯಾನೇಜ್‌ಮೆಂಟ್‌ ಪದವಿ ಪೂರ್ಣಗೊಳಿಸಿ ಕಳೆದ ಆಗಸ್ಟ್‌ ತಿಂಗಳಿನಲ್ಲಿ ಆಸ್ಟಿನ್‌ ಟೌನ್‌ನಲ್ಲಿರುವ ಹೋಟೆಲ್‌ ಒಂದರಲ್ಲಿ ಆರು ತಿಂಗಳ ಅಪ್ರಂಟೀಸ್‌ (ತರಬೇತಿ)ಗಾಗಿ ಕಳೆದ ಆಗಸ್ಟ್‌ ತಿಂಗಳಿನಲ್ಲಿ ಸೇರಿಕೊಂಡಿದ್ದರು. ಹೋಟೆಲ್‌ನ ಮುಖ್ಯ ಶೆಫ್ ಆಗಿದ್ದ ಹಯಾನ್‌ ಬಬೂಲ್‌, ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದರು. ಹೀಗಾಗಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿದೆ. ಇಬ್ಬರೂ ಆಗಾಗ ಊಟಕ್ಕೆ ಒಟ್ಟಿಗೇ ಹೋಗುತ್ತಿದ್ದರು ಎಂದು ತಿಳಿದುಬಂದಿದೆ.

“ನವೆಂಬರ್‌ 18ರಂದು ರಾತ್ರಿ ವೀಕೆಂಡ್‌ ಪಾರ್ಟಿಗಾಗಿ ಮನೆಗೆ ಬರುವಂತೆ ಹಯಾನ್‌ ಆಹ್ವಾನಿಸಿದ್ದ. ಅದರಂತೆ ನಾನು ಆಸ್ಟಿನ್‌ಟೌನ್‌ನಲ್ಲಿರುವ ಆತನ ಮನೆಗೆ ತೆರಳಿದ್ದೆ. ಪಾರ್ಟಿ ಮುಗಿದಾಗ ತಡರಾತ್ರಿಯಾಗಿತ್ತು. ಹೀಗಾಗಿ ಅವರ ಮನೆಯಲ್ಲೇ ಇದ್ದ ಪ್ರತ್ಯೇಕ ಕೋಣೆಯಲ್ಲಿ ಉಳಿದುಕೊಂಡಿದ್ದೆ’. ಮುಂಜಾನೆ ಮೂರು ಗಂಟೆ ಸುಮಾರಿಗೆ ನಿದ್ರೆಯಲ್ಲಿದ್ದ ಯಾರೋ ನನಗೆ ಮುತ್ತು ನೀಡಿದ ಅನುಭವ ಆಯಿತು. ಎಚ್ಚರಗೊಂಡು ನೋಡಿದರೆ,
ಹಯಾನ್‌ ನನ್ನ ಪಕ್ಕದಲ್ಲಿದ್ದ. ಗಾಬರಿಗೊಂಡು ಆತನಿಂದ ತಪ್ಪಿಸಿಕೊಳ್ಳಲು ಯತ್ನಿಸಿದೆ. ಆದರೆ ಆತ ನನ್ನನ್ನು ಬಿಡದೇ, ಬಲವಂತವಾಗಿ ಅತ್ಯಾಚಾರ ಎಸಗಿದ,’ ಎಂದು ಯುವತಿ ಆರೋಪಿಸಿದ್ದಾಳೆ ಎಂದು
ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಘಟನೆಯಿಂದ ಖನ್ನತೆ, ಕೌನ್ಸೆಲಿಂಗ್‌: “ತರಬೇತಿ ಪೂರ್ಣಗೊಂಡ ಬಳಿಕ ಕೆನಡಾಗೆ ತೆರಳಲು ಸಜ್ಜಾಗಿದ್ದ ನಾನು, ಹಯಾನ್‌ ಎಸಗಿದ ಕೃತ್ಯದಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದೆ. ಹೀಗಾಗಿ, ಅಂದಿನಿಂದ ಕೆಲಸಕ್ಕೆ ಹೋಗುವುದನ್ನೇ ನಿಲ್ಲಿಸಿಬಿಟ್ಟೆ. ಬಳಿಕ, ಆಪ್ತ ಸಮಾಲೋಚಕರ ಬಳಿ ತೆರಳಿ ಕೌನ್ಸೆಲಿಂಗ್‌ಗೆ ಒಳಗಾದೆ. ನಂತರ ಪೋಷಕರ ಜತೆ ಚರ್ಚಿಸಿ ದೂರು ನೀಡಿದೆ,’ ಎಂದು ಯುವತಿ ಹೇಳಿದ್ದಾರೆ.

ಆರೋಪಿ ಹಯಾತ್‌ ವಿರುದ್ಧ ಸಂತ್ರಸ್ತೆ ನೀಡಿದ ದೂರಿನ ಅನ್ವಯ ಹೋಟೆಲ್‌ ಆತನನ್ನು ಕೆಲಸದಿಂದ ತೆಗೆದು ಹಾಕಿತ್ತು. ಆರೋಪಿಗೆ ವಿವಾಹವಾಗಿದ್ದು, ಪತ್ನಿ ಹಾಗೂ ಎರಡು ತಿಂಗಳ ಮಗು ಇದ್ದು, ಅವರು ಕೇರಳಕ್ಕೆ ತೆರಳಿದ್ದರು. ಈ ಸಂಧರ್ಭದಲ್ಲಿ ಯುವತಿಯನ್ನು ಹಯಾತ್‌ ಮನೆಗೆ ಕರೆಸಿಕೊಂಡಿದ್ದ. ಪಾರ್ಟಿ ಬಳಿಕ ಮದ್ಯದ ಅಮಲಿನಲ್ಲಿ ತಪ್ಪು ನಡೆದಿದೆ ಎಂದು ಆರೋಪಿ ಹೇಳುತ್ತಿದ್ದಾನೆ ಎಂದು ಅಧಿಕಾರಿ ಹೇಳಿದರು.

ಯುವತಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
 ಡಿ.ದೇವರಾಜು, ಕೇಂದ್ರ ವಿಭಾಗದ ಡಿಸಿಪಿ

 ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.