24 ಹೆಣ್ಣು ಕೂಸಿಗೆ ಪಾಲಿಕೆಯಿಂದ 5ಲಕ್ಷ


Team Udayavani, Dec 27, 2018, 12:00 PM IST

bbmp.jpg

ಬೆಂಗಳೂರು: ಹೊಸ ವರ್ಷದ ದಿನ ಬಿಬಿಎಂಪಿ ಆಸ್ಪತ್ರೆಗಳಲ್ಲಿ ಸಹಜ ಹೆರಿಗೆ ಮೂಲಕ ಜನಿಸುವ 24 ಅದೃಷ್ಟಶಾಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತಲಾ 5 ಲಕ್ಷ ರೂ. ವ್ಯಯಿಸಲು ಪಾಲಿಕೆ ಮುಂದಾಗಿದೆ.

ಭ್ರೂಣ ಹತ್ಯೆ ನಿಯಂತ್ರಣ ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ “ಪಿಂಕ್‌ ಬೇಬಿ’ ಯೋಜನೆಯನ್ನು ಪಾಲಿಕೆ ಕಳೆದ ವರ್ಷ ಆರಂಭಿಸಿ ಒಂದು ಮಗುವಿಗೆ ಮಾತ್ರ ಯೋಜನೆ
ಜಾರಿಗೊಳಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿಯೂ ಯೋಜನೆ ಮುಂದುವರಿಸಲು ಮೇಯರ್‌ ಗಂಗಾಂಬಿಕೆ ತೀರ್ಮಾನಿಸಿದ್ದು, ಪ್ರಸಕ್ತ ಸಾಲಿನಿಂದ 24 ಹೆಣ್ಣು ಮಕ್ಕಳಿಗೆ ಯೋಜನೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ನಗರದಲ್ಲಿ ಪಾಲಿಕೆಯ 24 ಹೆರಿಗೆ ಆಸ್ಪತ್ರೆಗಳಿದ್ದು ಜನವರಿ 1ನೇ ತಾರೀಖು ಸಹಜ ಹೆರಿಗೆ ಮೂಲಕ ಜನಿಸುವ ಮೊದಲ ಹೆಣ್ಣು ಮಗುವಿನ ಶಿಕ್ಷಣಕ್ಕಾಗಿ5 ಲಕ್ಷ ರೂ. ಗಳನ್ನು ಪಾಲಿಕೆಯಿಂದ ಠೇವಣಿ ಇಡಲಾಗುತ್ತದೆ. ಮಗು ಶಾಲೆಗೆ ಸೇರುವ ವಯಸ್ಸಿಗೆ ವಾರ್ಷಿಕ ಇಂತಿಷ್ಟು ಪ್ರಮಾಣ ಹಣ ಪೋಷಕರಿಗೆ ದೊರೆಯಲಿದ್ದು, ಆ ಹಣದಿಂದ
ಮಗುವಿಗೆ ಉತ್ತಮ ಶಿಕ್ಷಣ ಕೊಡಿಸುವುದು ಯೋಜನೆಯ ಉದ್ದೇಶವಾಗಿದೆ.

ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್‌ ಗಂಗಾಂಬಿಕೆ, ಬೆಂಗಳೂರು ನಗರದಲ್ಲಿ ಪಾಲಿಕೆಯ 24 ಹೆರಿಗೆ ಆಸ್ಪತ್ರೆಗಳಿವೆ. ಆ ಆಸ್ಪತ್ರೆಗಳಲ್ಲಿ ಜನವರಿ 1 ರಂದು ಸಹಜ ಹೆರಿಗೆ ಮೂಲಕ ಜನಿಸುವ ಮೊದಲ ಹೆಣ್ಣು ಮಗುವಿಗೆ ಪಿಂಕ್‌ ಯೋಜನೆಯಡಿ 5 ಲಕ್ಷ ರೂ. ಠೇವಣಿ ಇರಿಸುವ ಯೋಜನೆ ಈ ಬಾರಿ
ಮುಂದುವರಿಸಲಾಗುತ್ತಿದೆ. ಆದರೆ, ಇದೇ ಮೊದಲ ಬಾರಿಗೆ 24 ಮಕ್ಕಳಿಗೆ ತಲಾ 5 ಲಕ್ಷ ರೂ. ನೀಡಲು ನಿರ್ಧರಿಸಿದ್ದು, ಅದಕ್ಕಾಗಿ 1.20 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು. ಪಾಲಿಕೆಯ ಹೆರಿಗೆ ಆಸ್ಪತ್ರೆಗಳಲ್ಲಿ ಬಡ,
ಮಧ್ಯಮ ವರ್ಗವರು ಹೆಚ್ಚು ಚಿಕಿತ್ಸೆ ಪಡೆಯುತ್ತಾರೆ. ಜತೆಗೆ ಹೆಣ್ಣು ಮಗು ಜನಿಸಿದಾಗ ಅವರಿಗೆ ಶಿಕ್ಷಣ, ಮದುವೆ ಹೀಗೆ ಭವಿಷ್ಯದ ಬಗ್ಗೆ ಯೋಚಿಸಿ, ಕೆಲವರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುವುದಿಲ್ಲ. ಹೆಣ್ಣು ಮಕ್ಕಳಿಗೂ
ಶಿಕ್ಷಣ ಕೊಡಿಸಲು ಉತ್ತೇಜನ ನೀಡುವ ಉದ್ದೇಶದಿಂದ ಯೋಜನೆ ಮುಂದುವರಿಸಲಾಗುತ್ತಿದೆ ಎಂದರು.

ಪಾಲಿಕೆಯ ಎಲ್ಲ ಆಸ್ಪತ್ರೆಗಳ ವೈದ್ಯಾಧಿಕಾರಿಗಳಿಗೆ ಪಿಂಕ್‌ ಬೇಬಿ ಯೋಜನೆಯ ಕುರಿತು ಮಾಹಿತಿ ನೀಡಲಾಗಿದ್ದು, ಹೆಣ್ಣು ಮಗು ಜನಿಸಿದ ಕೂಡಲೇ ಹಿರಿಯ ಅಧಿಕಾರಿಗಳು ಹಾಗೂ ತಮಗೆ ಮಾಹಿತಿ ನೀಡಲಿದ್ದಾರೆ. ಮಗು ಹಾಗೂ ಪೋಷಕರ ಸಂಪೂರ್ಣ ಮಾಹಿತಿಯನ್ನು ಪಡೆಯಲಿದ್ದಾರೆ. ಆ ಮೂಲಕ ಪಾರದರ್ಶಕವಾಗಿ ಮೊದಲು ಜನಿಸುವ ಮಗುವಿಗೆ ಯೋಜನೆಯ ಸೌಲಭ್ಯ ದೊರೆಯಲಿದೆ ಎಂದು ಗಂಗಾಂಬಿಕೆ ಹೇಳಿದರು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.