ರೇವಣ್ಣ ಹೇಳಿಕೆಗೆ ಕೈ ತಿರುಗೇಟು
Team Udayavani, Dec 30, 2018, 12:30 AM IST
ಬೆಂಗಳೂರು: ಡಾ.ಜಿ.ಪರಮೇಶ್ವರ್ ಅವರನ್ನು ಗೃಹ ಖಾತೆಯಿಂದ ಕೈಬಿಡಬಾರದಿತ್ತು ಎಂಬ ಸಚಿವ ಎಚ್ಡಿ ರೇವಣ್ಣ ಹೇಳಿಕೆಗೆ ಕಾಂಗ್ರೆಸ್ನ ಸಚಿವರು ಬಹಿರಂಗವಾಗಿ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ದಲಿತರು ಸೇರಿದಂತೆ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುತ್ತಾ ಬಂದಿದ್ದು, ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಸಚಿವ ಎಚ್.ಡಿ.ರೇವಣ್ಣ ಅವರು ತಮ್ಮ ಪಕ್ಷದಿಂದ ಎಷ್ಟು ಮಂದಿ ದಲಿತರನ್ನು ಸಚಿವರನ್ನಾಗಿ ಮಾಡಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಸಮಾನತೆಯ ತತ್ವದಲ್ಲಿ ನಂಬಿಕೆ ಇಟ್ಟಿದೆ. ಹಾಗಾಗಿ ರೇವಣ್ಣ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಹೇಳಿದ್ದಾರೆ.
ದೇಶಪಾಂಡೆ ಹೇಳಿಕೆಗೆ ದನಿಗೂಡಿಸಿರುವ ಸಕ್ಕರೆ ಖಾತೆ ಸಚಿವ ಆರ್.ಬಿ.ತಿಮ್ಮಾಪುರ, ಸಂಪುಟ ವಿಸ್ತರಣೆಯಲ್ಲಿ ಜೆಡಿಎಸ್ನ ದಲಿತ ಶಾಸಕರೊಬ್ಬರನ್ನು ಸಚಿವರನ್ನಾಗಿ ಮಾಡುವ ಕೆಲಸ ರೇವಣ್ಣ ಅವರ ಕಡೆಯಿಂದ ಆಗಲಿ ಎಂದಿದ್ದಾರೆ. ದಲಿತರು ಎನ್ನುವ ಕಾರಣಕ್ಕೆ ಡಾ.ಜಿ.ಪರಮೇಶ್ವರ ಅವರನ್ನು ಕಾಂಗ್ರೆಸ್ನಲ್ಲಿ ತುಳಿಯಲಾಗುತ್ತಿದೆ ಎನ್ನುವ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ದಲಿತ ಮೇಲಿನ ಪ್ರೀತಿಯನ್ನು ತೋರಿಸಿದಂತಿದೆ. ಆಗಾಗ ರೇವಣ್ಣ ಅವರಿಗೆ ದಲಿತರ ಮೇಲೆ ಪ್ರೀತಿ ಹೆಚ್ಚಾಗುತ್ತದೆ. ಈ ಪ್ರೀತಿಗೆ ನಾವು ಧನ್ಯವಾದ ಅರ್ಪಿಸುತ್ತೇವೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ