ಮೂರು ದಿನಗಳ ಹವ್ಯಕ ಸಮ್ಮೇಳನಕ್ಕೆ ಸಂಭ್ರಮದ ತೆರೆ


Team Udayavani, Dec 31, 2018, 12:30 AM IST

havyakamahasabha-samaropa-goodana.jpg

ಬೆಂಗಳೂರು: ಮೂರು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆದ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನಕ್ಕೆ
ಭಾನುವಾರ ಅದೂಟಛಿರಿ ತೆರೆಬಿದ್ದಿತು. ಕೊನೆಯ ದಿನ ಸಮ್ಮೇಳನಕ್ಕೆ ದೇಶ-ವಿದೇಶಗಳಲ್ಲಿ ನೆಲೆಸಿರುವ ಸಮುದಾಯ
ಬಾಂಧವರು ಸಮಾಗಮಗೊಂಡರು. ಇದರಿಂದ ಹವ್ಯಕರ ವಿರಾಟ ರೂಪ ಅನಾವರಣಗೊಂಡಿತು.

ವಿವಿಧ ಉದ್ದೇಶಗಳಿಗೆ ಹರಿದುಹಂಚಿಹೋಗಿದ್ದ ಹವ್ಯಕರು ಸಮ್ಮೇಳನದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದರು. ಆ ಸಂಘಟನೆಯ ಶಕ್ತಿ ಪ್ರದರ್ಶಿಸಿದ ಸಹಸ್ರಾರು ಹವ್ಯಕರು, ಯಾವುದೇ ಕಾರಣಕ್ಕೂ ಮಠ-ಮಾನ್ಯಗಳು, ದೇವಸ್ಥಾನಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಬಿಡುವುದಿಲ್ಲ ಎಂಬ ಒಕ್ಕೊರಲ ಸಂದೇಶ ರವಾನಿಸಿದರು.

ವಿರೋಧಗಳು ಸ್ವಾಭಾವಿಕ-ಬಿಎಸ್‌ವೈ: ಸಮ್ಮೇಳನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಮಾಜದಲ್ಲಿ ವಿರೋಧಗಳು ಮತ್ತು ಸಂಘರ್ಷಗಳು ಸ್ವಾಭಾವಿಕ. ಕಾಲೆಳೆಯುವವರು ಎಲ್ಲ ಕಾಲದಲ್ಲೂ ಇದ್ದಾರೆ. ಅದನ್ನು ಮೀರಿದ ನೈತಿಕ ಶಕ್ತಿ ಮತ್ತು ಸಂಘಟನಾತ್ಮಕ ಹೋರಾಟ ಇರಬೇಕು. ಈ ನಿಟ್ಟಿನಲ್ಲಿ ಹವ್ಯಕ ಸಮಾಜ ಸಂಘಟನೆಗೊಳ್ಳಲಿ ಎಂದು ಹೇಳಿದರು.

ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಮಾತನಾಡಿ, ಕೇವಲ ವ್ಯಕ್ತಿ ಅಥವಾ ವಿಷಯ ಆರಾಧನೆ ಬ್ರಾಹ್ಮಣ್ಯ ಅಲ್ಲ; ಇಡೀ ಸಮಷ್ಠಿಯ ಆರಾಧನೆಯೇ ಬ್ರಾಹ್ಮಣ್ಯ. ಇದನ್ನು ಜಗತ್ತಿಗೆ ತೋರಿಸಬೇಕಿದೆ ಎಂದು ಸಲಹೆ ಮಾಡಿದರು. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಇದೇ ಸಂದರ್ಭದಲ್ಲಿ ಮಾತನಾಡಿದರು.

ನ್ಯಾಯಾಂಗಕ್ಕೂ ಬೇಕಿದೆ ಹೊಣೆಗಾರಿಕೆ: “ಉಳಿದೆರಡು ಅಂಗಗಳಿಗೆ ಇದ್ದಂತೆ ನ್ಯಾಯಾಂಗದಲ್ಲೂ ಹೊಣೆಗಾರಿಕೆ
(ಅಕೌಂಟಬಿಲಿಟಿ)ಬರಬೇಕು’ ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶೈಲೇಂದ್ರಕುಮಾರ್‌ ತಿಳಿಸಿದರು. ನ್ಯಾಯಾಂಗ ಅಥವಾ ನ್ಯಾಯಾಧೀಶರಿಗೆ ಹೊಣೆಗಾರಿಕೆ ಎಂಬುದು ಇಲ್ಲವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಹೊಣೆಗಾರಿಕೆ ಇರಬೇಕಾಗುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಅಖೀಲ ಹವ್ಯಕ ಮಹಾಸಭಾದ ಅಮೃತ ಮಹೋತ್ಸವದ ಅಂಗವಾಗಿ 75 ಹವ್ಯಕ ಕುಟುಂಬಗಳಿಗೆ ಗೋದಾನ ಮಾಡಲಾಯಿತು. ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ, ಕೂಡಲಿ ಶೃಂಗೇರಿ
ಮಹಾಸಂಸ್ಥಾನದ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸದ ಬಿ.ವೈ. ರಾಘವೇಂದ್ರ,ಶಾಸಕರಾದ ನಳೀನ್‌ ಕುಮಾರ್‌ ಕಟೀಲು, ರವಿ ಸುಬ್ರಹ್ಮಣ್ಯ,ಡಾ.ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.

ನಿರ್ಣಯಗಳು
ದೇಶದ ಸಂಸ್ಕೃತಿ, ಸಂಸ್ಕಾರಗಳ ಸಂರಕ್ಷಣೆ ಹಾಗೂ ಸಂವರ್ಧನೆಯಲ್ಲಿ ತ್ರಿಕರಣಪೂರ್ವಕವಾಗಿ ಕಂಕಣ ಬದ್ಧ.
– ಸನಾತನಧರ್ಮದ ಪ್ರಾವಿತ್ರ್ಯತೆ, ಶ್ರೇಷ್ಠತೆ ಹಾಗೂ ಸರ್ವಮಾನ್ಯತೆ ಕಾಪಾಡುವಲ್ಲಿ ಸದಾ ಸಿದ್ಧ.
– ರಾಮಚಂದ್ರಾಪುರ ಮಠ ಅಥವಾ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮೇಲೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಮಾಡಿದ ಎಲ್ಲಾ ಮಿಥ್ಯಾರೋಪಗಳನ್ನು ಹಾಗೂ ಅವಹೇಳನಕಾರಿ ಕೃತ್ಯಗಳು ಖಂಡನೀಯ. ಇನ್ಮುಂದೆ ಯಾವತ್ತೂ ಅಂತಹ ಮಿಥ್ಯಾರೋಪಗಳಿಗೆ ಯಾವುದೇ ವ್ಯಕ್ತಿ, ಸಂಘಟನೆ, ಮಠಗಳು ನೀಡಿದಲ್ಲಿ ಅವುಗಳ ವಿರುದ್ಧ ಸಂಘಟಿತರಾಗಿ ಹೋರಾಟ
– ಯಾವುದೇ ಕಾರಣಕ್ಕೂ ಮಠಮಾನ್ಯ, ದೇವಸ್ಥಾನಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳುವುದು ಖಂಡನೀಯ. ಅವುಗಳಿಗೆ ಮೊದಲಿನಂತೆ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಯನ್ನು ಮುಂದುವರಿಸಲು ಸರ್ಕಾರಕ್ಕೆ ಆಗ್ರಹ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.