ಸಿದ್ದು ಮತ್ತೆ ಸಿಎಂ ಆದರೂ ಅಚ್ಚರಿ ಇಲ್ಲ
Team Udayavani, Jan 1, 2019, 12:30 AM IST
ಲಿಂಗಸುಗೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಹೋಗುವ ಆಸಕ್ತಿಯಿಲ್ಲ. ರಾಜ್ಯದಲ್ಲೇ ಉಳಿಯುವ ಆಸೆ ಹೆಚ್ಚಾಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಮತ್ತೂಮ್ಮೆ ಸಿಎಂ ಆದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ಮುಖಂಡ, ಕೇಂದ್ರ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ. 30 ಕೋಟಿ ರೂ. ಕೊಟ್ಟು ಶಾಸಕರನ್ನು ಖರೀದಿಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಅವರು ಈ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ವೇಳೆ ತಮ್ಮ ಜತೆ ಏಳು ಶಾಸಕರನ್ನು ಕಾಂಗ್ರೆಸ್ಗೆ ಸೇರಿಸಿದ್ದರು. ಆಗ ಆ ಶಾಸಕರಿಗೆ ಅವರು ಎಷ್ಟು ಹಣ ಕೊಟ್ಟಿದ್ದರು?. ಸಮ್ಮಿಶ್ರ ಸರ್ಕಾರ ನಡೆಸಲಾಗದೇ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ. ಸರ್ಕಾರ ಬೀಳಿಸುವ ಸಾಹಸಕ್ಕೆ ಬಿಜೆಪಿ ಕೈ ಹಾಕಿಲ್ಲ. ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದೆ. ಪಕ್ಷದ ಹೈಕಮಾಂಡ್ ಬಯಸಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ ಎಂದರು.