ಮಹಾಂತ ವಿದ್ಯಾದಾಸ ಬಾಬಾರಿಂದ ಪೂಜೆ
Team Udayavani, Jan 2, 2019, 2:16 AM IST
ಗಂಗಾವತಿ: ತಾಲೂಕಿನ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿಯ ಅರ್ಚಕ ಸ್ಥಾನದಿಂದ ಪದಚ್ಯುತಿಗೊಂಡಿದ್ದ ಮಹಾಂತ ವಿದ್ಯಾದಾಸ ಬಾಬಾ ಅವರು ಮಂಗಳವಾರ ಅಂಜನಾದ್ರಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.
ಕಳೆದ 8 ತಿಂಗಳ ಹಿಂದೆ ಆನೆಗೊಂದಿ ರಾಜವಂಶಸ್ಥರ ನೇತೃತ್ವದ ಟ್ರಸ್ಟ್ ಕಮಿಟಿ ಮಹಾಂತ ವಿದ್ಯಾದಾಸ ಬಾಬಾ ಅವರನ್ನು ಅರ್ಚಕ ಸ್ಥಾನದಿಂದ ಪದಚ್ಯುತಿಗೊಳಿಸಿ ಬೇರೆ ಅರ್ಚಕರನ್ನು ನೇಮಿಸಿದ್ದರು. ಬಾಬಾ ಹಾಗೂ ಟ್ರಸ್ಟ್ ಕಮಿಟಿ ಸಂಘರ್ಷದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂಬ ಪೊಲೀಸ್ ಇಲಾಖೆ ವರದಿ ಹಿನ್ನೆಲೆಯಲ್ಲಿ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯವನ್ನು ಜಿಲ್ಲಾಡಳಿತ ಸರಕಾರದ ವಶಕ್ಕೆ ಪಡೆದಿತ್ತು. ತಹಸೀಲ್ದಾರ್ ನೇತೃತ್ವದಲ್ಲಿ ನೇಮಕಗೊಂಡಿದ್ದ ಅರ್ಚಕರಿಂದ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆದಿದ್ದವು.
ಜಿಲ್ಲಾಡಳಿತ ಕ್ರಮ ಪ್ರಶ್ನಿಸಿ ಮಹಾಂತ ವಿದ್ಯಾದಾಸ ಬಾಬಾ ಅವರು ಧಾರವಾಡ ಹೈಕೋರ್ಟ್ ಸಂಚಾರಿ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಯುತ್ತಿದ್ದು, ಡಿ.21ರಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿ, ಪುನಃ ಪೂಜೆ ಅರ್ಚನೆ ಕಾರ್ಯ ಮಾಡಲು ಅವಕಾಶ ನೀಡುವಂತೆ ಜಿಲ್ಲಾ ಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿತ್ತು.
ಅಂಜನಾದ್ರಿಬೆಟ್ಟದ ಶ್ರೀ ಆಂಜನೇಯಸ್ವಾಮಿ ಪೂಜಾ ಕಾರ್ಯ ಮಾಡಲು ಸರಕಾರದಿಂದ ತಾತ್ಕಾಲಿಕವಾಗಿ ಬೇರೆಯವರನ್ನು ನಿಯೋಜಿಸಲಾಗಿದೆ. ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಅವರು ಅಕ್ರಮವಾಗಿ ದೇವಾಲಯ ಪ್ರವೇಶಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುತ್ತದೆ.
●ವೀರೇಶ ಬಿರಾದಾರ್, ತಹಸೀಲ್ದಾರ್
8 ತಿಂಗಳ ಹಿಂದೆ ತಮ್ಮನ್ನು ಅರ್ಚಕ ಸ್ಥಾನದಿಂದ ಪದಚ್ಯುತಿ ಮಾಡಿದ್ದು ಷಡ್ಯಂತ್ರದಿಂದ ಕೂಡಿದೆ. ಭಕ್ತರು ನೀಡುವ ಹುಂಡಿ ಹಣ ಒಂದು ವರ್ಷದಿಂದ ಎಲ್ಲಿಗೆ ಹೋಗಿದೆ? ಕೋರ್ಟ್ ಮಧ್ಯಂತರ ಆದೇಶ ನೀಡಿದರೂ ಡೀಸಿ, ಎಸ್ಪಿಯವರು ಸ್ಪಂದಿಸಿಲ್ಲ. ಕೋರ್ಟ್ನ ಆದೇಶದಂತೆ ಮಂಗಳವಾರ ಅರ್ಚನೆ ಕಾರ್ಯ ಆರಂಭಿಸಿದ್ದೇನೆ.
●ಮಹಾಂತ ವಿದ್ಯಾದಾಸ ಬಾಬಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!