ಬಿಜೆಪಿಯಿಂದ ಶಾಸಕರನ್ನು ಸೆಳೆಯುವ ಯತ್ನ ನಡೆದಿಲ್ಲ: ಬಿಎಸ್ವೈ
Team Udayavani, Jan 4, 2019, 12:40 AM IST
ಶಿವಮೊಗ್ಗ: ಬಿಜೆಪಿಯಿಂದ ಯಾವುದೇ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಿಂದ ಯಾವುದೇ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆದಿಲ್ಲ. ಆದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರೇ ಬಿಜೆಪಿ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ ಎಂದರು.
ರಮೇಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ನಡುವಿನ ಗೊಂದಲಕ್ಕೂ, ಬಿಜೆಪಿಗೂ ಸಂಬಂಧವಿಲ್ಲ. ಅವರ ಪಕ್ಷದಲ್ಲಿ ಉಂಟಾಗಿರುವ ಗೊಂದಲ ಮುಚ್ಚಿ ಹಾಕಿಕೊಳ್ಳಲು ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದರು. ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಹೊಸ ವರ್ಷ ಆಚರಣೆ ಶುಭಾಶಯ ತಿಳಿಸಿದ್ದೇನೆ. ಮುಂದಿನ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲು ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದರು.