ಮಂಗನಕಾಯಿಲೆಗೆ ಮತ್ತಿಬ್ಬರು ಬಲಿ


Team Udayavani, Jan 6, 2019, 1:25 AM IST

monkey.jpg

ಸಾಗರ: ಮಾರಣಾಂತಿಕ ಮಂಗನ ಕಾಯಿಲೆಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಅಲ್ಲದೆ ತಾಲೂಕಿನ ಕೆಲವೆಡೆ ಮಂಗಗಳ ಸಾವೂ ಸಹ ಮುಂದುವರಿದಿದ್ದು, ಕಾಡುಗಳಲ್ಲಿ ಮಂಗನ ಮೃತದೇಹಗಳು ಪತ್ತೆಯಾಗುತ್ತಲೇ ಇವೆ.

ನಾಲ್ಕು ದಿನಗಳ ಹಿಂದೆ ಮಗ ಮಂಜುನಾಥ್‌ನನ್ನು ಕಳೆದುಕೊಂಡಿದ್ದ ಜ್ವರದಿಂದ ಬಳಲಿ ಮಂಗನಕಾಯಿಲೆಗೆ ತುತ್ತಾಗಿದ್ದ ಅರಳಗೋಡು ಗ್ರಾಪಂ ವ್ಯಾಪ್ತಿಯ ಭಾರಂಗಿ ಹೋಬಳಿಯ ಕಂಚಿಕೈ ಗ್ರಾಮದ ರಾಮವ್ವ (56) ಶುಕ್ರವಾರ ರಾತ್ರಿ ಹಾಗೂ ಜೀಗಳದ ಶ್ವೇತಾ ಜೈನ್‌ (17) ಶನಿವಾರ ಮೃತಪಟ್ಟಿದ್ದಾರೆ.

ರಾಮವ್ವರ ಪುತ್ರ ಮಂಜುನಾಥ್‌ ಕಳೆದ ನಾಲ್ಕು ದಿನದ ಹಿಂದೆ ಇದೇ ಕಾಯಿಲೆಯಿಂದ ಮೃತಪಟ್ಟಿದ್ದರು. ಮಂಗಳವಾರ ಮಗ ಸತ್ತ ದಿನವೇ ರಾಮವ್ವ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿನ ಚಿಕಿತ್ಸೆಗೆ ಸ್ಪಂದಿಸದ ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ತೀವ್ರ ಜ್ವರಕ್ಕೆ ತುತ್ತಾಗಿ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೀಗಳದ ದೇವರಾಜ್‌- ಲತಾ ಅವರ ಪುತ್ರಿ ಶ್ವೇತಾ ಜೈನ್‌ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಸಾಗರದಲ್ಲಿ ಓದುತ್ತಿದ್ದ ಶ್ವೇತಾ ರಜೆಯ ಹಿನ್ನೆಲೆಯಲ್ಲಿ ವಾರದ ಹಿಂದೆ ಮನೆಗೆ ತೆರಳಿದ್ದಳು. ಇದರಿಂದ ಸಾಗರ ತಾಲೂಕಿನಲ್ಲಿ ಮಂಗನ ಕಾಯಿಲೆಗೆ ಒಟ್ಟು ಏಳು ಮಂದಿ ಮೃತಪಟ್ಟಂತಾಗಿದೆ. ಈ ಮಧ್ಯೆ ತಾಲೂಕಿನ ಕೆಲವೆಡೆ ಶನಿವಾರವೂ ಮೃತ ಮಂಗಗಳು ಪತ್ತೆಯಾಗಿವೆ.

ಭಾನುಳಿ ಗ್ರಾಪಂ ವ್ಯಾಪ್ತಿಯ ಕೊಂಚವಳ್ಳಿ ಗಣಪಗಾರುವಿನಲ್ಲಿ ಮಂಗವೊಂದು ಮೃತಪಟ್ಟ ಮಾಹಿತಿ ಪಡೆದ ಅರಣ್ಯ ಹಾಗೂ ಪಶು ಸಂಗೋಪನಾ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಕಾರ್ಗಲ್‌ನಲ್ಲಿ ಇನ್ನೊಂದು ಮೃತ ಮಂಗ ಪತ್ತೆಯಾಗಿದೆ.
ಮಂಗನ ಕಾಯಿಲೆ ಸಂಬಂಧ ಕೆಎಫ್‌ಡಿ ಶಿವಮೊಗ್ಗ ವಿಭಾಗದ ಉಪ ನಿರ್ದೇಶಕ ಡಾ.ರವಿಕುಮಾರ್‌ ಉದಯವಾಣಿಯೊಂದಿಗೆ ಮಾತನಾಡಿ, ಈವರೆಗೆ 18 ಪ್ರಕರಣಗಳು ಖಚಿತಪಟ್ಟಿವೆ. ಅದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಉಳಿದ 15 ಜನ ಈಗಾಗಲೇ ಗುಣಮುಖರಾಗಿದ್ದಾರೆ. ಇನ್ನೂ 20 ರೋಗಿಗಳ ರಕ್ತ ಪರೀಕ್ಷೆ ವರದಿ ಇನ್ನಷ್ಟೇ ಬರಬೇಕಿದೆ. ಈ ಮಾಹಿತಿಯನ್ನು ಆದಷ್ಟು ಕ್ಷಿಪ್ರವಾಗಿ ಪಡೆಯುವ ಪ್ರಯತ್ನ ನಡೆಸಿದ್ದು, ಇಂದೇ ಲಭ್ಯವಾಗುವ ಸಾಧ್ಯತೆಯಿದೆ ಎಂದರು.

ಪ್ರಸ್ತುತ ಮೆಗ್ಗಾನ್‌ನಲ್ಲಿ ಮೂವರು ಮತ್ತು ಸಾಗರದಲ್ಲಿ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಣಿಪಾಲ್‌ ಅಥವಾ ಇನ್ನಾವುದೇ ಬೇರೆ ಆಸ್ಪತ್ರೆಗೆ ಶಂಕಿತ ಕೆಎಫ್‌ಡಿ ರೋಗಿಗಳು ಚಿಕಿತ್ಸೆಗೆ ತೆರಳಿರುವ ಕುರಿತು ನಮಗೆ ಮಾಹಿತಿಯಿಲ್ಲ ಎಂದರು.

ಸ್ಥಳೀಯ ಜನರ ಮಾಹಿತಿಯ ಪ್ರಕಾರ 12 ಜನರನ್ನು ಜ್ವರದ ಹಿನ್ನೆಲೆಯಲ್ಲಿ ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿದೆ. ಶನಿವಾರ ಅರಳಗೋಡಿನಲ್ಲಿ ಒಂದು ಜ್ವರದ ಪ್ರಕರಣ ಕಾಣಿಸಿಕೊಂಡಿದೆ. ಆ ಭಾಗದ ಬಹುತೇಕ ಜನ ಜೀವಭಯಕ್ಕೊಳಗಾಗಿದ್ದು ಪರ ಊರುಗಳಿಗೆ ತೆರಳಿದ್ದಾರೆ.ಶನಿವಾರ ಶಾಸಕ ಹಾಲಪ್ಪ ಅರಳಗೋಡಿಗೆ ಭೇಟಿ ನೀಡಿ ಸ್ಥಳ ಸಮೀಕ್ಷೆ ನಡೆಸಿದರು. ಸಾಗರದಲ್ಲೂ ತಾಯಿ ಮಗು ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಯದರ್ಶಿ, ಜಿಪಂ ಸಿಇಒ ಹಾಗೂ ಇತರ ಅ ಧಿಕಾರಿಗಳ ಜೊತೆ ಸಭೆ ನಡೆಸಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಇಲ್ಲ!
ಕೆಎಫ್‌ಡಿ ಪ್ರತಿಬಂಧಕ ಚುಚ್ಚುಮದ್ದು ಅಗತ್ಯವಿದ್ದಷ್ಟು ಲಭ್ಯವಿದೆ ಎಂಬ ಮಾಹಿತಿಯನ್ನು ಕ್ಯಾಸನೂರು ಅರಣ್ಯ ರೋಗದ ವಿಭಾಗ ಹೇಳುತ್ತಿದೆಯಾದರೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಲಸಿಕೆ ಕೇಳಿಕೊಂಡು ಬಂದವರನ್ನು ಬರಿಗೈಯಲ್ಲಿ ವಾಪಸ್‌ ಕಳಿಸಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ಲಸಿಕೆ ಕೊಡುವುದಿಲ್ಲ, ಬೇಕಾದವರೂ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ತೆಗೆದುಕೊಳ್ಳಬೇಕು ಎಂದು ತಿಳಿಸುತ್ತಿರುವ ಕುರಿತು ಹಲವರು ಆಕ್ಷೇಪಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.