ಚಂ”ಧನ” ಮೇಲೆ ಇನ್ನು ಇ.ಡಿ. ತನಿಖೆ?
Team Udayavani, Jan 7, 2019, 3:15 AM IST
ಬೆಂಗಳೂರು: ಕನ್ನಡ ಚಲನಚಿತ್ರರಂಗದಲ್ಲಿ ಅನಧಿಕೃತ ಹಣಕಾಸು ವ್ಯವಹಾರ ನಡೆಯುತ್ತಿದ್ದ ಗುಮಾನಿ ಮೇಲೆ ಏಕಕಾಲದಲ್ಲಿ ಸ್ಯಾಂಡಲ್ವುಡ್ ನಟರು ಮತ್ತು ನಿರ್ಮಾಪಕರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಒಟ್ಟಾರೆಯಾಗಿ 109 ಕೋಟಿ ರೂ. ದಾಖಲೆ ರಹಿತ ಆದಾಯ ಪತ್ತೆ ಮಾಡಿದೆ. ಜತೆಗೆ 11 ಕೋಟಿ ರೂ. ಮೌಲ್ಯದ ಅಘೋಷಿತ ಅಸ್ತಿ ಜಪ್ತಿ ಮಾಡಿಕೊಂಡಿದೆ.
ಕಲಾವಿದರು ಮತ್ತು ನಿರ್ಮಾಪಕರ ಬಳಿ ಪತ್ತೆಯಾದ ಕೋಟ್ಯಂತರ ರೂ. ಮೌಲ್ಯದ ದಾಖಲೆಯಿಲ್ಲದ ಹಾಗೂ ಚಿತ್ರಮಂದಿರಗಳಲ್ಲಿ ಸಂಗ್ರಹವಾದ ಹಣವನ್ನು ಬೇರೆಡೆ ವರ್ಗಾಯಿಸಿರುವುದಕ್ಕೆ ಕೆಲವು ಸಾಕ್ಷ್ಯಾಧಾರಗಳು ಸಿಕ್ಕಿವೆ. ಈ ಮಾಹಿತಿಯನ್ನು ಸಂಬಂಧಿಸಿದ ಕಂದಾಯ ಮತ್ತು ಇತರ ಆರ್ಥಿಕ ತನಿಖಾ ಸಂಸ್ಥೆಗಳ ಜತೆ ಹಂಚಿಕೊಳ್ಳಲಾಗುವುದು.
ತೆರಿಗೆ ವಂಚಿಸಿರುವ ನಟ, ನಿರ್ಮಾಪಕರನ್ನು ಶೀಘ್ರ ವಿಚಾರಣೆಗೆ ಒಳಪಡಿಸಲಾಗುವುದು. ತೆರಿಗೆ ಬಾಕಿ ಇರಿಸಿರುವ ನಟ, ನಿರ್ಮಾಪಕರು ಕೂಡಲೇ ಪಾವತಿಸಲು ಸೂಚಿಸಲಾಗುವುದು ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಆದಾಯ ತೆರಿಗೆ ಇಲಾಖೆ, ಡಿಆರ್ಐ (ಕಂದಾಯ ಜಾರಿ ನಿರ್ದೇಶನಾಲಯ) ಅಥವಾ ಇ.ಡಿ. (ಜಾರಿ ನಿರ್ದೇಶನಾಲಯ) ಜತೆ ಮಾಹಿತಿ ವಿನಿಮಯ ಮಾಡಿ ಕೊಳ್ಳಲಿದೆ. ಇದು ಸ್ಯಾಂಡಲ್ವುಡ್ನ ನಟ, ನಿರ್ಮಾಪಕರ ಪಾಲಿಗೆ ಇನ್ನಷ್ಟು ಕಗ್ಗಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಜ.3ರಂದು ಬೆಳಗ್ಗೆ 6 ಗಂಟೆಯಿಂದ ಜ.5ರ ಸಂಜೆ ವರೆಗೆ ನಟರಾದ ಶಿವರಾಜ್ಕುಮಾರ್, ಪುನೀತ್ ರಾಜ್ಕುಮಾರ್, ಸುದೀಪ್, ಯಶ್ ಹಾಗೂ ರಾಧಿಕಾ ಪಂಡಿತ್ ಮನೆ, ನಿರ್ಮಾಪಕರಾದ ರಾಕ್ಲೈನ್ ವೆಂಕಟೇಶ್, ವಿಜಯ್ ಕಿರಗಂದೂರು ಹಾಗೂ ಜಯಣ್ಣ ಮನೆ, ವಿಧಾನಪರಿಷತ್ ಸದಸ್ಯ, ನಿರ್ಮಾಪಕ ಸಿ.ಆರ್. ಮನೋಹರ್ ಮನೆ ಮತ್ತು ಕಚೇರಿಗಳ ಮೇಲೆ ಕರ್ನಾಟಕ, ಗೋವಾ ವಿಭಾಗಗಳ 180 ಮಂದಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದರು.
ಆ ವೇಳೆ ನಟರು, ನಿರ್ಮಾಪಕರಿಗೆ ಸೇರಿದ 11 ಕೋಟಿ ರೂ. ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿದ್ದು, ಈ ಪೈಕಿ 2.85 ಕೋಟಿ ರೂ. ನಗದು ಮತ್ತು 25.3 ಕೆ.ಜಿ. ಚಿನ್ನಾಭರಣ ವಶಪಡಿಸಿಕೊಂಡಿದೆ. ಅಲ್ಲದೆ, ನಿಗದಿತ ಸಮಯದಲ್ಲಿ ಆದಾಯ ತೆರಿಗೆ ಕಟ್ಟದೆ ಒಟ್ಟಾರೆ 109 ಕೋಟಿ ರೂ. ದಾಖಲೆರಹಿತ ಆದಾಯ ಹೊಂದಿರುವುದು ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಆದರೆ ವೈಯಕ್ತಿಕವಾಗಿ ಯಾವುದೇ ನಟ, ನಿರ್ಮಾಪಕರ ಮನೆಯಲ್ಲಿ ಎಷ್ಟು ಪ್ರಮಾಣದಲ್ಲಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿವೆ ಎಂಬುದನ್ನು ಐಟಿ ಉಲ್ಲೇಖೀಸಿಲ್ಲ.
ಐಟಿ ಇಲಾಖೆ ಮನವಿ
ಕನ್ನಡ ಚಿತ್ರರಂಗ ಮತ್ತು ಮನೋರಂಜನ ಕ್ಷೇತ್ರದ ಎಲ್ಲ ವ್ಯವಹಾರಗಳನ್ನು ದಾಖಲೆಗಳಲ್ಲಿ ನಮೂದಿಸಬೇಕು. ಜತೆಗೆ ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ಕೂಡಲೇ ಪಾವತಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ