ಮಂಗನ ಕಾಯಿಲೆ ಉಲ್ಬಣ: ಮತ್ತಿಬ್ಬರ ಸ್ಥಿತಿ ಗಂಭೀರ
Team Udayavani, Jan 8, 2019, 12:30 AM IST
ಸಾಗರ: ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು ಸಾಗರ ತಾಲೂಕಿನ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಸೋಮವಾರ ಜ್ವರದಿಂದ ಬಳಲುತ್ತಿರುವ ನಾಲ್ವರು ಅರಳಗೋಡು ಪ್ರಾಥಮಿಕ ಕೇಂದ್ರಕ್ಕೆ ದಾಖಲಾಗಿದ್ದಾರೆ. ಈವರೆಗೆ ಒಟ್ಟು 21 ಜನರಲ್ಲಿ ಜ್ವರ ಕಾಣಿಸಿಕೊಂಡಿದೆ. ಅರಳಗೋಡಿನ ಸವಿತಾ ಹಾಗೂ ಶನಿವಾರ ಕೊನೆಯುಸಿರೆಳೆದ ಜೀಗಳದ ಶ್ವೇತಾ ಅವರ ತಂದೆ ದೇವರಾಜ್ ಜೈನ್ ಅವರ ಆರೋಗ್ಯ ಸೂಕ್ಷವಾಗಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಶನಿವಾರದಿಂದಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತೆರಳುವವರ ಸಂಖ್ಯೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಅಲ್ಲಿ ಗುಣಮುಖರಾಗದವರನ್ನೂ ಮಣಿಪಾಲ್ನ ಕೆಎಂಸಿಗೆ ರವಾನಿಸಲಾಗಿದೆ. ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ವಿವಿಧ ಆಸ್ಪತ್ರೆಗಳಲ್ಲಿ 38 ಶಂಕಿತ ಕೆಎಫ್ಡಿ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಭಾನುವಾರ ದಿಂದ 11 ಜನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಎಫ್ಡಿ ನಿರೋಧಕ ಘಟಕದ ಉಪನಿರ್ದೇಶಕ ಡಾಣ ರವಿಕುಮಾರ್ “ಉದಯವಾಣಿ’ಯೊಂದಿಗೆ ಮಾತನಾಡಿ, “ಸೋಮವಾರದಿಂದ ಶಿವಮೊಗ್ಗದಲ್ಲಿ ರಕ್ತ ಪರೀಕ್ಷೆ ಕೇಂದ್ರ ಕಾರ್ಯಾರಂಭ ಮಾಡಿದೆ.
ಮೊದಲ ದಿನ ಹತ್ತು ಜನರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಡ್ಡಲಾಗಿದ್ದು, ಮಂಗಳವಾರ ಮಧ್ಯಾಹ್ನದ ವೇಳೆಗೆ ಫಲಿತಾಂಶ ಬರಲಿದೆ. ಇಂದು ಸಾಗರ ತಾಲೂಕಿನಲ್ಲಿ ಸಂಗ್ರಹವಾದ ರಕ್ತದ ಸ್ಯಾಂಪಲ್ಗಳು ಸಂಜೆ ಕೇಂದ್ರ ತಲುಪಲಿದ್ದು ಅವುಗಳ ಪರೀಕ್ಷಾ ವರದಿ ಬುಧವಾರವಷ್ಟೇ ಸಿಗಲಿದೆ’ ಎಂದರು.
34 ಜನರಲ್ಲಿ ಕೆಎಫ್ಡಿ ವೈರಸ್: ಮೂರು ತಿಂಗಳಿನಿಂದ ಒಟ್ಟು 36 ಮಂಗಗಳು ಮೃತಪಟ್ಟಿದ್ದು, ಅದರಲ್ಲಿ ಆರು ಮಂಗಗಳ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ ನಾಲ್ಕು ಮಂಗಗಳಲ್ಲಿ ಕೆಎಫ್ಡಿ ವೈರಸ್ ಇರುವುದು ದೃಢಪಟ್ಟಿದೆ.
ಈವರೆಗೆ 83 ಜನರಿಗೆ ಮಂಗನ ಕಾಯಿಲೆಯ ಶಂಕೆ ವ್ಯಕ್ತವಾಗಿದ್ದು, 34 ಜನರಲ್ಲಿ ವೈರಸ್ ಪತ್ತೆಯಾಗಿದೆ. ಸೋಮವಾರ ಐದು ಮಂಗಗಳ ಶವ ತಾಲೂಕಿನ ಬೇರೆ ಬೇರೆ ಭಾಗಗಳಲ್ಲಿ ಪತ್ತೆಯಾಗಿದೆ. ಎಂ.ಎಲ್.ಹಳ್ಳಿ,ಕರೂರು, ಬ್ಯಾಡಗೋಡು, ಆನಂದಪುರ ಸಮೀಪದ ಇರುವಕ್ಕಿಯಲ್ಲಿ ಮಂಗನ ಮೃತ ದೇಹ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ