ಬೆಂಕಿ ಹಚ್ಚಿಕೊಂಡಿದ್ದ ಅಭಿಮಾನಿ ಸಾವು; ಇದು ಅಭಿಮಾನವಲ್ಲ ಎಂದ ಯಶ್
Team Udayavani, Jan 9, 2019, 5:22 AM IST
ಬೆಂಗಳೂರು: ನಟ ಯಶ್ ಮನೆ ಎದುರು ಮಂಗಳವಾರ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ರವಿ (28) ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಹೊಸಕೆರೆಹಳ್ಳಿಯಲ್ಲಿರುವ ಯಶ್ ನಿವಾಸದ ಎದುರು ಲಗ್ಗೆರೆಯ ನಿವಾಸಿ ರವಿ ಮಧ್ಯಾಹ್ನ ಬೆಂಕಿ ಹಚ್ಚಿಕೊಂಡಿದ್ದ,ಶೇ.80ರಷ್ಟು ಸುಟ್ಟ ಗಾಯಗಳಾಗಿದ್ದ ಆತನನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಹಿರಿಯ ನಟ ಅಂಬರೀಷ್ ನಿಧನ ಹಿನ್ನೆಲೆಯಲ್ಲಿ ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ನಟ ಯಶ್ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದರು. ಆದರೂ ಮಂಗಳವಾರ ಬೆಳಗ್ಗೆ ಹೊಸಕೆರೆಹಳ್ಳಿಯಲ್ಲಿರುವ ಯಶ್ ಮನೆ ಎದುರು ಬಂದ ರವಿ, ತಾನು ಯಶ್ರನ್ನು ನೋಡಬೇಕೆಂದು ಹಠ ಮಾಡಿದ್ದ. ಭದ್ರತಾ ಸಿಬ್ಬಂದಿ ಒಳಗಡೆ ಬಿಡಲಿಲ್ಲ, ನೆಚ್ಚಿನ ನಟ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಬೇಸರಗೊಂಡ ರವಿ, ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ.
ಇದು ಅಭಿಮಾನವಲ್ಲ
ವಿಷಯ ತಿಳಿಯುತ್ತಿದ್ದಂತೆ ನಟ ಯಶ್ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ರವಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಭಿಮಾನಿಯ ಈ ವರ್ತನೆ ಬಹಳ ಬೇಸರವಾಗಿದೆ.
ಇದನ್ನು ಅಭಿಮಾನ ವೆಂದು ಹೇಳುವುದಿಲ್ಲ. ಪ್ರತಿ ವರ್ಷ ಅಂಬಿ ಅಣ್ಣನ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೆ. ಈ ವರ್ಷ ಅಂಬಿ ಅಣ್ಣ ನಮ್ಮೊಡನೆ ಇಲ್ಲ ಎಂದು ಹುಟ್ಟುಹಬ್ಬ ಬೇಡ ಎಂದು ಹೇಳಿದ್ದೆ. ಇದೇ ಕೊನೆ, ಯಾರೇ ಅಭಿಮಾನಿಗಳು ಈ ರೀತಿ ಮಾಡಿಕೊಂಡರೆ ಮತ್ತೂಮ್ಮೆ ನಾನು ಎಲ್ಲಿಗೂ ಬರುವುದಿಲ್ಲ ಎಂದು ಯಶ್ ಖಡಕ್ ಆಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ