4 ನಿಗಮಗಳಿಗೆ ಅಧ್ಯಕ್ಷರ ನೇಮಕ
Team Udayavani, Jan 10, 2019, 12:30 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿ ತಡೆ ಹಿಡಿಯಲಾಗಿದ್ದ 4 ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಸಿಎಂ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ನಾಯಕರ ಒತ್ತಾಯದ ಮೇರೆಗೆ ಬೆಂಗಳೂರು ಅಭಿವೃದಿಟಛಿ ಪ್ರಾಧಿಕಾರ ಅಧ್ಯಕ್ಷರಾಗಿ ಎಸ್.ಟಿ. ಸೋಮಶೇಖರ್, ಬಿಎಂಟಿಸಿ ಅಧ್ಯಕ್ಷ ರಾಗಿ ಎನ್.ಎ. ಹ್ಯಾರೀಸ್, ಕರ್ನಾಟಕ ರೇಷ್ಮೆ ಕೈಗಾರಿಕೆ ಮಂಡಳಿ ಅಧ್ಯಕ್ಷರಾಗಿ ಕೆ.ಎನ್.ಸುಬ್ಟಾರೆಡ್ಡಿ ಹಾಗೂ ಡಾ. ಜಗಜೀವನ್ ರಾಮ್ ಕೈಗಾರಿಕಾ ಚರ್ಮ ಅಭಿವೃದಿಟಛಿ ನಿಗಮದ ಅಧ್ಯಕ್ಷರಾಗಿ ಶಾಸಕ ಪ್ರಸಾದ್ ಅಬ್ಬಯ್ಯ ಅವರನ್ನು ನೇಮಕ ಮಾಡಲಾಗಿದೆ.
ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದಿಟಛಿ ಮಂಡಳಿ ಅಧ್ಯಕ್ಷರ ನೇಮಕವನ್ನು ತಡೆ ಹಿಡಿಯಲಾಗಿದೆ. ಅಲ್ಲದೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ದೆಹಲಿ ಪ್ರತಿನಿಧಿ,ಹಾಗೂ ಹಾಸನದ ಪರಿಷತ್ ಸದಸ್ಯ ಗೋಪಾಲ ಸ್ವಾಮಿ ಅವರ ಸಂಸದೀಯ ಕಾರ್ಯದರ್ಶಿ ಹುದ್ದೆ ನೇಮಕ ತಡೆ ಹಿಡಿಯಲಾಗಿದೆ.