ಟೊಮೆಟೋ ಬೆಲೆ ದಿಢೀರ್‌ ಏರಿಕೆ


Team Udayavani, Jan 11, 2019, 12:30 AM IST

tomato-ss.jpg

ಬೆಂಗಳೂರು: ಕೆಲವೇ ದಿನಗಳ ಹಿಂದಿನ ಮಾತು, ಟೊಮೆಟೋ ಕೇಳ್ಳೋರಿಲ್ಲ ಎಂಬ ಕಾರಣಕ್ಕೆ ರೈತರು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದ್ದರು. ಈಗ ಎಲ್ಲಿಲ್ಲದ ಬೇಡಿಕೆ ಬಂದಿದೆ. ಆದರೆ, ಟೊಮೆಟೋ ಸಿಗುತ್ತಿಲ್ಲ!

ಕಳೆದ ಆರು ತಿಂಗಳಿಂದ ಟೊಮೆಟೋ ಬೆಲೆ ಕೆಜಿಗೆ 20 ರೂ. ಕೂಡ ದಾಟಿರಲಿಲ್ಲ. ಇದೇ ಕಾರಣಕ್ಕೆ ರೈತರು ಪ್ರತಿಭಟನೆ ಕೂಡ ನಡೆಸಿದರು. ಆದರೆ, ಕಳೆದ ಮೂರ್‍ನಾಲ್ಕು ದಿನಗಳಿಂದ ಏಕಾಏಕಿ ಪೂರೈಕೆಯಲ್ಲಿ ಖೋತಾ ಆಗಿದೆ.  ನಿತ್ಯ ಬೆಂಗಳೂರಿಗೇ 200 ಲೋಡ್‌ ಬರುತ್ತಿದ್ದ ಟೊಮೆಟೋ ಕಳೆದ ಒಂದು ವಾರದಿಂದ ಅಬ್ಬಬ್ಟಾ ಎಂದರೆ 30ರಿಂದ 40 ಲೋಡ್‌ ಬರುತ್ತಿದೆ. ಇದರ ಪರಿಣಾಮ ಬೇಡಿಕೆ ಹೆಚ್ಚಿದ್ದು, ಸಹಜವಾಗಿ ಬೆಲೆ ಗಗನಕ್ಕೇರಿದೆ.

ರಾಜ್ಯದ ಮಾರುಕಟ್ಟೆಗಳಲ್ಲಿ ಟೊಮೆಟೊಗೆ ಬೇಡಿಕೆ ಬರುತ್ತಿದ್ದಂತೆ ನಾಸಿಕ್‌ ಸೇರಿದಂತೆ ಹೊರ ರಾಜ್ಯಗಳಿಂದ ಇಲ್ಲಿಗೆ ಪೂರೈಕೆ ಆಗುತ್ತಿದೆ. ಪ್ರತಿ ದಿನ ಕಲಾಸಿಪಾಳ್ಯ ಸಗಟು ಮಾರುಕಟ್ಟೆಗೆ ಸರಿಸುಮಾರು 15-20 ಲೋಡ್‌ ಬರುತ್ತಿದೆ. ಹೀಗೆ ಹೊರಗಡೆಯಿಂದ ಬರುವುದರಿಂದ ಬೆಲೆ ಏರಿಕೆಯಾಗಿದ್ದು, ಸಗಟು ಕೆಜಿಗೆ 50ರಿಂದ 60 ರೂ. ಇದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ 70 ರೂ. ತಲುಪಿದೆ. ಇನ್ನೂ 10-15 ದಿನಗಳು ಇದೇ ಸ್ಥಿತಿ ಇರಲಿದೆ ಎಂದು ಕಲಾಸಿಪಾಳ್ಯ ಸಗಟು ತರಕಾರಿ ಮಾರುಕಟ್ಟೆ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಆರ್‌. ಮಂಜುನಾಥ್‌ ಅಭಿಪ್ರಾಯಪಡುತ್ತಾರೆ.

ನಗರಕ್ಕೆ ಕೋಲಾರ, ಹೊಸಕೋಟೆ, ಚನ್ನಪಟ್ಟಣ, ಚನ್ನರಾಯಪಟ್ಟಣ, ಕನಕಪುರ, ಆನೇಕಲ್‌ ಸೇರಿದಂತೆ ಸುತ್ತಲಿನ ಭಾಗದಿಂದ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬರುತ್ತಿತ್ತು. ವಾರದಿಂದ ಎಂದಿಗಿಂತ ಶೇ. 20ರಷ್ಟೂ ಬರುತ್ತಿಲ್ಲ ಎಂದೂ ಅವರು ಹೇಳುತ್ತಾರೆ.

ಉತ್ಪಾದನೆ ಕಡಿಮೆ
ಸಾಮಾನ್ಯವಾಗಿ ಚಳಿಗಾಲದಲ್ಲಿ ಟೊಮೆಟೊ ಉತ್ಪಾದನೆ ಕಡಿಮೆ ಇರುತ್ತದೆ. ಇಡೀ ವರ್ಷದಲ್ಲಿ ಮುಂಗಾರಿಗೆ ಶೇ. 45ರಷ್ಟು ಹಾಗೂ ಹಿಂಗಾರಿನಲ್ಲಿ ಶೇ. 35 ಮತ್ತು ಬೇಸಿಗೆಯಲ್ಲಿ ಶೇ. 10ರಷ್ಟು ಟೊಮೆಟೊ ಉತ್ಪಾದನೆಯಾಗುತ್ತದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬೆಲೆ ಕುಸಿತ ಕಂಡಿತ್ತು. ಈ ರೀತಿಯ “ಟ್ರೆಂಡ್‌’ ಇತ್ತೀಚಿನ ವರ್ಷಗಳಲ್ಲಿ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಇದೇ ಕಾರಣಕ್ಕೆ ರೈತರು ಹಿಂದೇಟು ಹಾಕುತ್ತಿದ್ದಾರೆ. ಪಯಾರ್ಯ ಬೆಳೆಗಳ ಕಡೆಗೂ ಮುಖಮಾಡುತ್ತಿದ್ದಾರೆ. ಇದು ಕೂಡ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್‌ಆರ್‌)ಯ ಪ್ರಧಾನ ವಿಜ್ಞಾನಿ ಟಿ.ಎಂ. ಗಜಾನನ ಅಭಿಪ್ರಾಯಪಡುತ್ತಾರೆ.

ಕೋಲಾರದಲ್ಲೂ ದುಬಾರಿ
ಟೊಮೆಟೋ ದರದಲ್ಲಿ ಹೆಚ್ಚಳವಾಗಿರುವುದು ಕೋಲಾರ ರೈತರಲ್ಲಿ ಹರ್ಷ ತಂದಿದೆ. ಪ್ರಸಕ್ತ ವರ್ಷದ ಆರಂಭದಲ್ಲೇ ಟೊಮೆಟೋ  ಬಾಕ್ಸ್‌ಗೆ 700 ರೂ. ದೊರೆಯುತ್ತಿರುವುದು ರೈತರ ಪಾಲಿಗೆ ಸಂಕ್ರಾಂತಿ ಸುಗ್ಗಿಯಾಗಿದೆ. ಆದರೆ, ಖರೀದಿ ಮಾಡುವ ಗ್ರಾಹಕನಿಗೆ ಕಣ್ಣೀರು ಬರಿಸುತ್ತಿದೆ. ಕಿಲೋ ಟೊಮೆಟೋಗೆ ಬರೋಬರಿ 70 ರೂ ನೀಡಿ ಇಂದು ಗ್ರಾಹಕ ಖರೀದಿಸುವಂತಾಗಿದೆ. ಟೊಮೇಟೊ ಬೆಲೆಯಲ್ಲಿ ದಿಢೀರ್‌ ಬೆಲೆ ಏರಿಕೆ ಕಾಣಲು ಅಗತ್ಯವಿರುವಷ್ಟು ಪೂರೈಕೆ ಇಲ್ಲವಾಗಿರುವುದು ಕಾರಣವಾಗಿದೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.