ಟೊಮೆಟೋ ಬೆಲೆ ದಿಢೀರ್‌ ಏರಿಕೆ


Team Udayavani, Jan 11, 2019, 12:30 AM IST

tomato-ss.jpg

ಬೆಂಗಳೂರು: ಕೆಲವೇ ದಿನಗಳ ಹಿಂದಿನ ಮಾತು, ಟೊಮೆಟೋ ಕೇಳ್ಳೋರಿಲ್ಲ ಎಂಬ ಕಾರಣಕ್ಕೆ ರೈತರು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದ್ದರು. ಈಗ ಎಲ್ಲಿಲ್ಲದ ಬೇಡಿಕೆ ಬಂದಿದೆ. ಆದರೆ, ಟೊಮೆಟೋ ಸಿಗುತ್ತಿಲ್ಲ!

ಕಳೆದ ಆರು ತಿಂಗಳಿಂದ ಟೊಮೆಟೋ ಬೆಲೆ ಕೆಜಿಗೆ 20 ರೂ. ಕೂಡ ದಾಟಿರಲಿಲ್ಲ. ಇದೇ ಕಾರಣಕ್ಕೆ ರೈತರು ಪ್ರತಿಭಟನೆ ಕೂಡ ನಡೆಸಿದರು. ಆದರೆ, ಕಳೆದ ಮೂರ್‍ನಾಲ್ಕು ದಿನಗಳಿಂದ ಏಕಾಏಕಿ ಪೂರೈಕೆಯಲ್ಲಿ ಖೋತಾ ಆಗಿದೆ.  ನಿತ್ಯ ಬೆಂಗಳೂರಿಗೇ 200 ಲೋಡ್‌ ಬರುತ್ತಿದ್ದ ಟೊಮೆಟೋ ಕಳೆದ ಒಂದು ವಾರದಿಂದ ಅಬ್ಬಬ್ಟಾ ಎಂದರೆ 30ರಿಂದ 40 ಲೋಡ್‌ ಬರುತ್ತಿದೆ. ಇದರ ಪರಿಣಾಮ ಬೇಡಿಕೆ ಹೆಚ್ಚಿದ್ದು, ಸಹಜವಾಗಿ ಬೆಲೆ ಗಗನಕ್ಕೇರಿದೆ.

ರಾಜ್ಯದ ಮಾರುಕಟ್ಟೆಗಳಲ್ಲಿ ಟೊಮೆಟೊಗೆ ಬೇಡಿಕೆ ಬರುತ್ತಿದ್ದಂತೆ ನಾಸಿಕ್‌ ಸೇರಿದಂತೆ ಹೊರ ರಾಜ್ಯಗಳಿಂದ ಇಲ್ಲಿಗೆ ಪೂರೈಕೆ ಆಗುತ್ತಿದೆ. ಪ್ರತಿ ದಿನ ಕಲಾಸಿಪಾಳ್ಯ ಸಗಟು ಮಾರುಕಟ್ಟೆಗೆ ಸರಿಸುಮಾರು 15-20 ಲೋಡ್‌ ಬರುತ್ತಿದೆ. ಹೀಗೆ ಹೊರಗಡೆಯಿಂದ ಬರುವುದರಿಂದ ಬೆಲೆ ಏರಿಕೆಯಾಗಿದ್ದು, ಸಗಟು ಕೆಜಿಗೆ 50ರಿಂದ 60 ರೂ. ಇದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ 70 ರೂ. ತಲುಪಿದೆ. ಇನ್ನೂ 10-15 ದಿನಗಳು ಇದೇ ಸ್ಥಿತಿ ಇರಲಿದೆ ಎಂದು ಕಲಾಸಿಪಾಳ್ಯ ಸಗಟು ತರಕಾರಿ ಮಾರುಕಟ್ಟೆ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಆರ್‌. ಮಂಜುನಾಥ್‌ ಅಭಿಪ್ರಾಯಪಡುತ್ತಾರೆ.

ನಗರಕ್ಕೆ ಕೋಲಾರ, ಹೊಸಕೋಟೆ, ಚನ್ನಪಟ್ಟಣ, ಚನ್ನರಾಯಪಟ್ಟಣ, ಕನಕಪುರ, ಆನೇಕಲ್‌ ಸೇರಿದಂತೆ ಸುತ್ತಲಿನ ಭಾಗದಿಂದ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬರುತ್ತಿತ್ತು. ವಾರದಿಂದ ಎಂದಿಗಿಂತ ಶೇ. 20ರಷ್ಟೂ ಬರುತ್ತಿಲ್ಲ ಎಂದೂ ಅವರು ಹೇಳುತ್ತಾರೆ.

ಉತ್ಪಾದನೆ ಕಡಿಮೆ
ಸಾಮಾನ್ಯವಾಗಿ ಚಳಿಗಾಲದಲ್ಲಿ ಟೊಮೆಟೊ ಉತ್ಪಾದನೆ ಕಡಿಮೆ ಇರುತ್ತದೆ. ಇಡೀ ವರ್ಷದಲ್ಲಿ ಮುಂಗಾರಿಗೆ ಶೇ. 45ರಷ್ಟು ಹಾಗೂ ಹಿಂಗಾರಿನಲ್ಲಿ ಶೇ. 35 ಮತ್ತು ಬೇಸಿಗೆಯಲ್ಲಿ ಶೇ. 10ರಷ್ಟು ಟೊಮೆಟೊ ಉತ್ಪಾದನೆಯಾಗುತ್ತದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬೆಲೆ ಕುಸಿತ ಕಂಡಿತ್ತು. ಈ ರೀತಿಯ “ಟ್ರೆಂಡ್‌’ ಇತ್ತೀಚಿನ ವರ್ಷಗಳಲ್ಲಿ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಇದೇ ಕಾರಣಕ್ಕೆ ರೈತರು ಹಿಂದೇಟು ಹಾಕುತ್ತಿದ್ದಾರೆ. ಪಯಾರ್ಯ ಬೆಳೆಗಳ ಕಡೆಗೂ ಮುಖಮಾಡುತ್ತಿದ್ದಾರೆ. ಇದು ಕೂಡ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್‌ಆರ್‌)ಯ ಪ್ರಧಾನ ವಿಜ್ಞಾನಿ ಟಿ.ಎಂ. ಗಜಾನನ ಅಭಿಪ್ರಾಯಪಡುತ್ತಾರೆ.

ಕೋಲಾರದಲ್ಲೂ ದುಬಾರಿ
ಟೊಮೆಟೋ ದರದಲ್ಲಿ ಹೆಚ್ಚಳವಾಗಿರುವುದು ಕೋಲಾರ ರೈತರಲ್ಲಿ ಹರ್ಷ ತಂದಿದೆ. ಪ್ರಸಕ್ತ ವರ್ಷದ ಆರಂಭದಲ್ಲೇ ಟೊಮೆಟೋ  ಬಾಕ್ಸ್‌ಗೆ 700 ರೂ. ದೊರೆಯುತ್ತಿರುವುದು ರೈತರ ಪಾಲಿಗೆ ಸಂಕ್ರಾಂತಿ ಸುಗ್ಗಿಯಾಗಿದೆ. ಆದರೆ, ಖರೀದಿ ಮಾಡುವ ಗ್ರಾಹಕನಿಗೆ ಕಣ್ಣೀರು ಬರಿಸುತ್ತಿದೆ. ಕಿಲೋ ಟೊಮೆಟೋಗೆ ಬರೋಬರಿ 70 ರೂ ನೀಡಿ ಇಂದು ಗ್ರಾಹಕ ಖರೀದಿಸುವಂತಾಗಿದೆ. ಟೊಮೇಟೊ ಬೆಲೆಯಲ್ಲಿ ದಿಢೀರ್‌ ಬೆಲೆ ಏರಿಕೆ ಕಾಣಲು ಅಗತ್ಯವಿರುವಷ್ಟು ಪೂರೈಕೆ ಇಲ್ಲವಾಗಿರುವುದು ಕಾರಣವಾಗಿದೆ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.