ರಾಜ್ಯಕ್ಕೂ ಕಾಲಿಟ್ಟ ಜುಂದ್‌-ಅಲ್‌ -ಅಕ್ಸಾ


Team Udayavani, Jan 11, 2019, 12:30 AM IST

terrorist-ss.jpg

ಬೆಂಗಳೂರು: ಸಿರಿಯಾದ ಜುಂದ್‌ -ಅಲ್‌ – ಅಕ್ಸಾ  ಅಥವಾ ಅಲ್‌- ನುಸ್ರಾ – ಫ್ರಂಟ್‌ ಉಗ್ರಸಂಘಟನೆ ಸೇರಿದ್ದಾರೆ ಎನ್ನಲಾದ ಕೇರಳ ಹಾಗೂ ರಾಜ್ಯದ ಯುವಕರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಭದ್ರತಾ ತನಿಖಾ ದಳ( ಎನ್‌ಐಎ) ತನಿಖೆ ಚುರುಕುಗೊಳಿಸಿದ ಬೆನ್ನಲ್ಲೇ, ರಾಜ್ಯದಲ್ಲಿ ಉಗ್ರ ಸಂಘಟನೆ ಬೇರುಗಳಿರುವುದಕ್ಕೆ ಪುಷ್ಠಿ ದೊರೆತಂತಾಗಿದೆ.

ಉದ್ಯೋಗ ಸಲುವಾಗಿ ಕತಾರ್‌ ಸೇರಿದ ಯುವಕರು ಬಳಿಕ ಐಸಿಸ್‌ ಹಾಗೂ ಜುಂದ್‌ ಅಲ್‌ ಅಕ್ಸಾ ಸಂಘಟನೆಯಲ್ಲಿ ಸಕ್ರಿಯವಾಗಿರುವ ಹಲವರ ಸಂಪರ್ಕಕ್ಕೆ ಬಂದಿದ್ದು, ಅಂತಿಮವಾಗಿ 2013ರಲ್ಲಿ ಸಿರಿಯಾ ಪ್ರವೇಶಿಸಿ  ಜುಂದ್‌ ಅಲ್‌ ಅಕ್ಸಾ ಸಂಘಟನೆಗೆ ಸೇರಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಯವಕರ ಹೆಸರನ್ನು ಎನ್‌ಐಎ ಬಹಿರಂಗಪಡಿಸದಿದ್ದರೂ, ಕರಾವಳಿ ಭಾಗದ ಕೆಲವು ಯುವಕರೇ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

2016ರಲ್ಲಿ ಐಸಿಸ್‌ ಸಂಘಟನೆ ಸೇರಲು ಸಜ್ಜಾಗಿದ್ದ ಆರು ಮಂದಿ ಆರೋಪಿಗಳನ್ನು ಎನ್‌ಐಎ ಬಂಧಿಸಿದ ಬಳಿಕ ಮತ್ತೂಮ್ಮೆ, ಕತಾರ್‌ನಲ್ಲಿದ್ದುಕೊಂಡೇ ರಾಜ್ಯದ ಹಲವು ಯುವಕರನ್ನು ಉಗ್ರಸಂಘಟನೆಗೆ ಸೇರಲು ಪ್ರೇರೇಪಿಸಿದ ಅಂಶ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಆರೋಪಿ ಯುವಕರ ಹಿನ್ನೆಲೆ ಅವರ ಬೆಂಬಲಿಗರು, ರಾಜ್ಯದಲ್ಲಿ ಉಗ್ರ ಚಟುವಟಿಕೆಗೆ ಬೆಂಬಲ ನೀಡುತ್ತಿದ್ದರೇ ಎಂಬ ಶಂಕೆ ವ್ಯಕ್ತವಾಗಿದೆ. ಜತೆಗೆ ಆರೋಪಿತ ಯುವಕರು ಬಳಸುತ್ತಿದ್ದ ಫೇಸ್‌ಬುಕ್‌, ವ್ಯಾಟ್ಸಾಪ್‌ ಗ್ರೂಪ್‌ಗ್ಳ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಮತ್ತೂಂದೆಡೆ ಎನ್‌ಐಎ ತನಿಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಲೇ ಎಚ್ಚೆತ್ತುಕೊಂಡಿರುವ ರಾಜ್ಯ ಪೊಲೀಸ್‌ ಇಲಾಖೆಯೂ ರಾಜ್ಯದಲ್ಲಿರಬಹುದಾದ ಉಗ್ರರ ಸ್ಲಿàಪರ್‌ಸೆಲ್‌ಗ‌ಳ ಬಗ್ಗೆ ಆಂತರಿಕ ತನಿಖೆ ಆರಂಭಿಸಿದೆ. ಜತೆಗೆ, ಈ ಹಿಂದೆ ಬಂಧನವಾಗಿದ್ದ ಉಗ್ರರನ್ನು ವಿಚಾರಣೆಗೊಳಪಡಿಸಲಿದೆ ಎಂದು ತಿಳಿದು ಬಂದಿದೆ.

ಇತರೆ ಉಗ್ರರ ಜತೆ ನಂಟು?
ದುಬೈನಲ್ಲಿದ್ದು ಐಸಿಸ್‌ ಉಗ್ರ ಸಂಘಟನೆ ಪರ ಫೇಸ್‌ಬುಕ್‌, ವ್ಯಾಟ್ಸಾಪ್‌, ಟ್ವಿಟರ್‌ ಸೇರಿದಂತೆ ವ್ಯಾಪಕ ಪ್ರಚಾರ ನಡೆಸಿ ಸಾವಿರಾರು ಮಂದಿ ಯುವಕರನ್ನು ಐಸಿಸ್‌ ಸೇರಲು ಪ್ರೇರೆಪಿಸಿದ ಆರೋಪದಲ್ಲಿ 2016ರಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಭಟ್ಕಳದ ಅದ್ನಾನ್‌ ಹಸ್ಸನ್‌ ಜತೆ ಜುಂದ್‌ ಅಲ್‌ ಅಕ್ಸಾ ಸಂಘಟನೆ ಸೇರಿರುವ ಯುವಕರಿಗೆ ನಂಟಿರುವ ಸಾಧ್ಯತೆಯಿದೆ.

ದುಬೈನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅದ್ನಾನ್‌, ಸೌದಿಅರೆಬಿಯಾ, ಫಿಲಿಡೆಲ್ಫಿಯಾ, ಶ್ರೀಲಂಕಾ ಸೇರಿ ವಿವಿಧ ದೇಶಗಳ ಸಾವಿರಾರು ಯುವಕರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ. ಆತ ರಚಿಸಿದ್ದ ವ್ಯಾಟ್ಸಾಪ್‌ ಗ್ರೂಪ್‌ನಲ್ಲಿ ಕರ್ನಾಟಕದ ಹಲವು ಯುವಕರು ಇರುವ ಶಂಕೆಯನ್ನು ಎನ್‌ಐಎ ವ್ಯಕ್ತಪಡಿಸಿತ್ತು. ಅದೇ ಯುವಕರು ಮತ್ತೂಂದು ಜುಂದ್‌ ಅಲ್‌ ಅಕ್ಸಾ ಸೇರಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ವಿದೇಶಿ ಯುವಕರೇ ಟಾರ್ಗೆಟ್‌ 
ಐಸಿಸ್‌ ಉಗ್ರ ಸಂಘಟನೆಗೆ ಪರ್ಯಾಯವಾಗಿ ಸಲಾಫಿ ಜಿಹಾದಿಗಳು ಕಟ್ಟಿಕೊಂಡ ಸಂಘಟನೆ  ಜುಂದ್‌- ಅಲ್‌- ಅಕ್ಸಾ ಸಿರಿಯಾ ನಾಗರಿಕ ಯುದ್ಧದ ವೇಳೆ ಬೆಳಕಿಗೆ ಬಂದಿತ್ತು. ಈ ಹಿಂದೆ ಇದೇ ಸಂಘಟನೆಯನ್ನು ಶರಿಯತ್‌ ಅಲ್‌ ಕೈದಾ ಎಂದು ಕರೆಯಲಾಗುತ್ತಿದ್ದು,ಅದರ ಅಂಗ ಸಂಸ್ಥೆಯಾಗಿ ಅಲ್‌- ನುಸ್ರಾ – ಫ್ರಂಟ್‌ ಕಾರ್ಯನಿರ್ವಹಿಸುತ್ತಿತ್ತು. ಸಿರಿಯಾದಲ್ಲಿ ಷರಿಯತ್‌ ಕಾನೂನು ಜಾರಿಗೊಳಿಸುವ ಗುರಿ ಸಂಘಟನೆಯದ್ದಾಗಿತ್ತು. ಈ ಸಂಘಟನೆ ವಿದೇಶಗಳ ಯುವಕರನ್ನು ಪ್ರಭಾವಿಸಿ ಅವರನ್ನು ತನ್ನ ಗುಂಪಿಗೆ ಸೇರಿಸಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ. 

– ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.