ರಾಜ್ಯಕ್ಕೂ ಕಾಲಿಟ್ಟ ಜುಂದ್‌-ಅಲ್‌ -ಅಕ್ಸಾ


Team Udayavani, Jan 11, 2019, 12:30 AM IST

terrorist-ss.jpg

ಬೆಂಗಳೂರು: ಸಿರಿಯಾದ ಜುಂದ್‌ -ಅಲ್‌ – ಅಕ್ಸಾ  ಅಥವಾ ಅಲ್‌- ನುಸ್ರಾ – ಫ್ರಂಟ್‌ ಉಗ್ರಸಂಘಟನೆ ಸೇರಿದ್ದಾರೆ ಎನ್ನಲಾದ ಕೇರಳ ಹಾಗೂ ರಾಜ್ಯದ ಯುವಕರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಭದ್ರತಾ ತನಿಖಾ ದಳ( ಎನ್‌ಐಎ) ತನಿಖೆ ಚುರುಕುಗೊಳಿಸಿದ ಬೆನ್ನಲ್ಲೇ, ರಾಜ್ಯದಲ್ಲಿ ಉಗ್ರ ಸಂಘಟನೆ ಬೇರುಗಳಿರುವುದಕ್ಕೆ ಪುಷ್ಠಿ ದೊರೆತಂತಾಗಿದೆ.

ಉದ್ಯೋಗ ಸಲುವಾಗಿ ಕತಾರ್‌ ಸೇರಿದ ಯುವಕರು ಬಳಿಕ ಐಸಿಸ್‌ ಹಾಗೂ ಜುಂದ್‌ ಅಲ್‌ ಅಕ್ಸಾ ಸಂಘಟನೆಯಲ್ಲಿ ಸಕ್ರಿಯವಾಗಿರುವ ಹಲವರ ಸಂಪರ್ಕಕ್ಕೆ ಬಂದಿದ್ದು, ಅಂತಿಮವಾಗಿ 2013ರಲ್ಲಿ ಸಿರಿಯಾ ಪ್ರವೇಶಿಸಿ  ಜುಂದ್‌ ಅಲ್‌ ಅಕ್ಸಾ ಸಂಘಟನೆಗೆ ಸೇರಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಯವಕರ ಹೆಸರನ್ನು ಎನ್‌ಐಎ ಬಹಿರಂಗಪಡಿಸದಿದ್ದರೂ, ಕರಾವಳಿ ಭಾಗದ ಕೆಲವು ಯುವಕರೇ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

2016ರಲ್ಲಿ ಐಸಿಸ್‌ ಸಂಘಟನೆ ಸೇರಲು ಸಜ್ಜಾಗಿದ್ದ ಆರು ಮಂದಿ ಆರೋಪಿಗಳನ್ನು ಎನ್‌ಐಎ ಬಂಧಿಸಿದ ಬಳಿಕ ಮತ್ತೂಮ್ಮೆ, ಕತಾರ್‌ನಲ್ಲಿದ್ದುಕೊಂಡೇ ರಾಜ್ಯದ ಹಲವು ಯುವಕರನ್ನು ಉಗ್ರಸಂಘಟನೆಗೆ ಸೇರಲು ಪ್ರೇರೇಪಿಸಿದ ಅಂಶ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಆರೋಪಿ ಯುವಕರ ಹಿನ್ನೆಲೆ ಅವರ ಬೆಂಬಲಿಗರು, ರಾಜ್ಯದಲ್ಲಿ ಉಗ್ರ ಚಟುವಟಿಕೆಗೆ ಬೆಂಬಲ ನೀಡುತ್ತಿದ್ದರೇ ಎಂಬ ಶಂಕೆ ವ್ಯಕ್ತವಾಗಿದೆ. ಜತೆಗೆ ಆರೋಪಿತ ಯುವಕರು ಬಳಸುತ್ತಿದ್ದ ಫೇಸ್‌ಬುಕ್‌, ವ್ಯಾಟ್ಸಾಪ್‌ ಗ್ರೂಪ್‌ಗ್ಳ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಮತ್ತೂಂದೆಡೆ ಎನ್‌ಐಎ ತನಿಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಲೇ ಎಚ್ಚೆತ್ತುಕೊಂಡಿರುವ ರಾಜ್ಯ ಪೊಲೀಸ್‌ ಇಲಾಖೆಯೂ ರಾಜ್ಯದಲ್ಲಿರಬಹುದಾದ ಉಗ್ರರ ಸ್ಲಿàಪರ್‌ಸೆಲ್‌ಗ‌ಳ ಬಗ್ಗೆ ಆಂತರಿಕ ತನಿಖೆ ಆರಂಭಿಸಿದೆ. ಜತೆಗೆ, ಈ ಹಿಂದೆ ಬಂಧನವಾಗಿದ್ದ ಉಗ್ರರನ್ನು ವಿಚಾರಣೆಗೊಳಪಡಿಸಲಿದೆ ಎಂದು ತಿಳಿದು ಬಂದಿದೆ.

ಇತರೆ ಉಗ್ರರ ಜತೆ ನಂಟು?
ದುಬೈನಲ್ಲಿದ್ದು ಐಸಿಸ್‌ ಉಗ್ರ ಸಂಘಟನೆ ಪರ ಫೇಸ್‌ಬುಕ್‌, ವ್ಯಾಟ್ಸಾಪ್‌, ಟ್ವಿಟರ್‌ ಸೇರಿದಂತೆ ವ್ಯಾಪಕ ಪ್ರಚಾರ ನಡೆಸಿ ಸಾವಿರಾರು ಮಂದಿ ಯುವಕರನ್ನು ಐಸಿಸ್‌ ಸೇರಲು ಪ್ರೇರೆಪಿಸಿದ ಆರೋಪದಲ್ಲಿ 2016ರಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಭಟ್ಕಳದ ಅದ್ನಾನ್‌ ಹಸ್ಸನ್‌ ಜತೆ ಜುಂದ್‌ ಅಲ್‌ ಅಕ್ಸಾ ಸಂಘಟನೆ ಸೇರಿರುವ ಯುವಕರಿಗೆ ನಂಟಿರುವ ಸಾಧ್ಯತೆಯಿದೆ.

ದುಬೈನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅದ್ನಾನ್‌, ಸೌದಿಅರೆಬಿಯಾ, ಫಿಲಿಡೆಲ್ಫಿಯಾ, ಶ್ರೀಲಂಕಾ ಸೇರಿ ವಿವಿಧ ದೇಶಗಳ ಸಾವಿರಾರು ಯುವಕರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ. ಆತ ರಚಿಸಿದ್ದ ವ್ಯಾಟ್ಸಾಪ್‌ ಗ್ರೂಪ್‌ನಲ್ಲಿ ಕರ್ನಾಟಕದ ಹಲವು ಯುವಕರು ಇರುವ ಶಂಕೆಯನ್ನು ಎನ್‌ಐಎ ವ್ಯಕ್ತಪಡಿಸಿತ್ತು. ಅದೇ ಯುವಕರು ಮತ್ತೂಂದು ಜುಂದ್‌ ಅಲ್‌ ಅಕ್ಸಾ ಸೇರಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ವಿದೇಶಿ ಯುವಕರೇ ಟಾರ್ಗೆಟ್‌ 
ಐಸಿಸ್‌ ಉಗ್ರ ಸಂಘಟನೆಗೆ ಪರ್ಯಾಯವಾಗಿ ಸಲಾಫಿ ಜಿಹಾದಿಗಳು ಕಟ್ಟಿಕೊಂಡ ಸಂಘಟನೆ  ಜುಂದ್‌- ಅಲ್‌- ಅಕ್ಸಾ ಸಿರಿಯಾ ನಾಗರಿಕ ಯುದ್ಧದ ವೇಳೆ ಬೆಳಕಿಗೆ ಬಂದಿತ್ತು. ಈ ಹಿಂದೆ ಇದೇ ಸಂಘಟನೆಯನ್ನು ಶರಿಯತ್‌ ಅಲ್‌ ಕೈದಾ ಎಂದು ಕರೆಯಲಾಗುತ್ತಿದ್ದು,ಅದರ ಅಂಗ ಸಂಸ್ಥೆಯಾಗಿ ಅಲ್‌- ನುಸ್ರಾ – ಫ್ರಂಟ್‌ ಕಾರ್ಯನಿರ್ವಹಿಸುತ್ತಿತ್ತು. ಸಿರಿಯಾದಲ್ಲಿ ಷರಿಯತ್‌ ಕಾನೂನು ಜಾರಿಗೊಳಿಸುವ ಗುರಿ ಸಂಘಟನೆಯದ್ದಾಗಿತ್ತು. ಈ ಸಂಘಟನೆ ವಿದೇಶಗಳ ಯುವಕರನ್ನು ಪ್ರಭಾವಿಸಿ ಅವರನ್ನು ತನ್ನ ಗುಂಪಿಗೆ ಸೇರಿಸಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ. 

– ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.