ರಾಜ್ಯಕ್ಕೂ ಕಾಲಿಟ್ಟ ಜುಂದ್‌-ಅಲ್‌ -ಅಕ್ಸಾ


Team Udayavani, Jan 11, 2019, 12:30 AM IST

terrorist-ss.jpg

ಬೆಂಗಳೂರು: ಸಿರಿಯಾದ ಜುಂದ್‌ -ಅಲ್‌ – ಅಕ್ಸಾ  ಅಥವಾ ಅಲ್‌- ನುಸ್ರಾ – ಫ್ರಂಟ್‌ ಉಗ್ರಸಂಘಟನೆ ಸೇರಿದ್ದಾರೆ ಎನ್ನಲಾದ ಕೇರಳ ಹಾಗೂ ರಾಜ್ಯದ ಯುವಕರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಭದ್ರತಾ ತನಿಖಾ ದಳ( ಎನ್‌ಐಎ) ತನಿಖೆ ಚುರುಕುಗೊಳಿಸಿದ ಬೆನ್ನಲ್ಲೇ, ರಾಜ್ಯದಲ್ಲಿ ಉಗ್ರ ಸಂಘಟನೆ ಬೇರುಗಳಿರುವುದಕ್ಕೆ ಪುಷ್ಠಿ ದೊರೆತಂತಾಗಿದೆ.

ಉದ್ಯೋಗ ಸಲುವಾಗಿ ಕತಾರ್‌ ಸೇರಿದ ಯುವಕರು ಬಳಿಕ ಐಸಿಸ್‌ ಹಾಗೂ ಜುಂದ್‌ ಅಲ್‌ ಅಕ್ಸಾ ಸಂಘಟನೆಯಲ್ಲಿ ಸಕ್ರಿಯವಾಗಿರುವ ಹಲವರ ಸಂಪರ್ಕಕ್ಕೆ ಬಂದಿದ್ದು, ಅಂತಿಮವಾಗಿ 2013ರಲ್ಲಿ ಸಿರಿಯಾ ಪ್ರವೇಶಿಸಿ  ಜುಂದ್‌ ಅಲ್‌ ಅಕ್ಸಾ ಸಂಘಟನೆಗೆ ಸೇರಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಯವಕರ ಹೆಸರನ್ನು ಎನ್‌ಐಎ ಬಹಿರಂಗಪಡಿಸದಿದ್ದರೂ, ಕರಾವಳಿ ಭಾಗದ ಕೆಲವು ಯುವಕರೇ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

2016ರಲ್ಲಿ ಐಸಿಸ್‌ ಸಂಘಟನೆ ಸೇರಲು ಸಜ್ಜಾಗಿದ್ದ ಆರು ಮಂದಿ ಆರೋಪಿಗಳನ್ನು ಎನ್‌ಐಎ ಬಂಧಿಸಿದ ಬಳಿಕ ಮತ್ತೂಮ್ಮೆ, ಕತಾರ್‌ನಲ್ಲಿದ್ದುಕೊಂಡೇ ರಾಜ್ಯದ ಹಲವು ಯುವಕರನ್ನು ಉಗ್ರಸಂಘಟನೆಗೆ ಸೇರಲು ಪ್ರೇರೇಪಿಸಿದ ಅಂಶ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಆರೋಪಿ ಯುವಕರ ಹಿನ್ನೆಲೆ ಅವರ ಬೆಂಬಲಿಗರು, ರಾಜ್ಯದಲ್ಲಿ ಉಗ್ರ ಚಟುವಟಿಕೆಗೆ ಬೆಂಬಲ ನೀಡುತ್ತಿದ್ದರೇ ಎಂಬ ಶಂಕೆ ವ್ಯಕ್ತವಾಗಿದೆ. ಜತೆಗೆ ಆರೋಪಿತ ಯುವಕರು ಬಳಸುತ್ತಿದ್ದ ಫೇಸ್‌ಬುಕ್‌, ವ್ಯಾಟ್ಸಾಪ್‌ ಗ್ರೂಪ್‌ಗ್ಳ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಮತ್ತೂಂದೆಡೆ ಎನ್‌ಐಎ ತನಿಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಲೇ ಎಚ್ಚೆತ್ತುಕೊಂಡಿರುವ ರಾಜ್ಯ ಪೊಲೀಸ್‌ ಇಲಾಖೆಯೂ ರಾಜ್ಯದಲ್ಲಿರಬಹುದಾದ ಉಗ್ರರ ಸ್ಲಿàಪರ್‌ಸೆಲ್‌ಗ‌ಳ ಬಗ್ಗೆ ಆಂತರಿಕ ತನಿಖೆ ಆರಂಭಿಸಿದೆ. ಜತೆಗೆ, ಈ ಹಿಂದೆ ಬಂಧನವಾಗಿದ್ದ ಉಗ್ರರನ್ನು ವಿಚಾರಣೆಗೊಳಪಡಿಸಲಿದೆ ಎಂದು ತಿಳಿದು ಬಂದಿದೆ.

ಇತರೆ ಉಗ್ರರ ಜತೆ ನಂಟು?
ದುಬೈನಲ್ಲಿದ್ದು ಐಸಿಸ್‌ ಉಗ್ರ ಸಂಘಟನೆ ಪರ ಫೇಸ್‌ಬುಕ್‌, ವ್ಯಾಟ್ಸಾಪ್‌, ಟ್ವಿಟರ್‌ ಸೇರಿದಂತೆ ವ್ಯಾಪಕ ಪ್ರಚಾರ ನಡೆಸಿ ಸಾವಿರಾರು ಮಂದಿ ಯುವಕರನ್ನು ಐಸಿಸ್‌ ಸೇರಲು ಪ್ರೇರೆಪಿಸಿದ ಆರೋಪದಲ್ಲಿ 2016ರಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಭಟ್ಕಳದ ಅದ್ನಾನ್‌ ಹಸ್ಸನ್‌ ಜತೆ ಜುಂದ್‌ ಅಲ್‌ ಅಕ್ಸಾ ಸಂಘಟನೆ ಸೇರಿರುವ ಯುವಕರಿಗೆ ನಂಟಿರುವ ಸಾಧ್ಯತೆಯಿದೆ.

ದುಬೈನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅದ್ನಾನ್‌, ಸೌದಿಅರೆಬಿಯಾ, ಫಿಲಿಡೆಲ್ಫಿಯಾ, ಶ್ರೀಲಂಕಾ ಸೇರಿ ವಿವಿಧ ದೇಶಗಳ ಸಾವಿರಾರು ಯುವಕರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ. ಆತ ರಚಿಸಿದ್ದ ವ್ಯಾಟ್ಸಾಪ್‌ ಗ್ರೂಪ್‌ನಲ್ಲಿ ಕರ್ನಾಟಕದ ಹಲವು ಯುವಕರು ಇರುವ ಶಂಕೆಯನ್ನು ಎನ್‌ಐಎ ವ್ಯಕ್ತಪಡಿಸಿತ್ತು. ಅದೇ ಯುವಕರು ಮತ್ತೂಂದು ಜುಂದ್‌ ಅಲ್‌ ಅಕ್ಸಾ ಸೇರಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ವಿದೇಶಿ ಯುವಕರೇ ಟಾರ್ಗೆಟ್‌ 
ಐಸಿಸ್‌ ಉಗ್ರ ಸಂಘಟನೆಗೆ ಪರ್ಯಾಯವಾಗಿ ಸಲಾಫಿ ಜಿಹಾದಿಗಳು ಕಟ್ಟಿಕೊಂಡ ಸಂಘಟನೆ  ಜುಂದ್‌- ಅಲ್‌- ಅಕ್ಸಾ ಸಿರಿಯಾ ನಾಗರಿಕ ಯುದ್ಧದ ವೇಳೆ ಬೆಳಕಿಗೆ ಬಂದಿತ್ತು. ಈ ಹಿಂದೆ ಇದೇ ಸಂಘಟನೆಯನ್ನು ಶರಿಯತ್‌ ಅಲ್‌ ಕೈದಾ ಎಂದು ಕರೆಯಲಾಗುತ್ತಿದ್ದು,ಅದರ ಅಂಗ ಸಂಸ್ಥೆಯಾಗಿ ಅಲ್‌- ನುಸ್ರಾ – ಫ್ರಂಟ್‌ ಕಾರ್ಯನಿರ್ವಹಿಸುತ್ತಿತ್ತು. ಸಿರಿಯಾದಲ್ಲಿ ಷರಿಯತ್‌ ಕಾನೂನು ಜಾರಿಗೊಳಿಸುವ ಗುರಿ ಸಂಘಟನೆಯದ್ದಾಗಿತ್ತು. ಈ ಸಂಘಟನೆ ವಿದೇಶಗಳ ಯುವಕರನ್ನು ಪ್ರಭಾವಿಸಿ ಅವರನ್ನು ತನ್ನ ಗುಂಪಿಗೆ ಸೇರಿಸಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ. 

– ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.