ಮಂಗನ ಕಾಯಿಲೆ ಭೀತಿಗೆ ಮನೆ ಖಾಲಿ,ಖಾಲಿ;ಕಂಡ್ಲೂರಿನಲ್ಲಿ ಮಂಗನ ಶವ ಪತ್ತೆ
Team Udayavani, Jan 11, 2019, 12:46 PM IST
ಶಿವಮೊಗ್ಗ:ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಂಡು ಬಂದಿದ್ದ ಮಂಗನ ಕಾಯಿಲೆ ಇದೀಗ ಉಡುಪಿ ಜಿಲ್ಲೆಗೂ ಹಬ್ಬತೊಡಗಿದೆ. ಹೊಸಂಗಡಿ, ಕಂಡ್ಲೂರಿನಲ್ಲಿ ಮಂಗನ ಶವ ಪತ್ತೆಯಾಗಿದ್ದು, ಮತ್ತೊಂದೆಡೆ ಉಜಿರೆಯಲ್ಲೂ ಮಂಗನ ಶವ ಪತ್ತೆಯಾಗಿದ್ದು, ಇದು ಕಾಳಗದಿಂದ ಸತ್ತಿರಬಹುದೆಂದು ವೈದ್ಯರು ತಿಳಿಸಿದ್ದಾರೆ.
ಮಂಗನ ಕಾಯಿಲೆ ಭೀತಿಗೆ ಮನೆ ಬಿಟ್ಟ ಗ್ರಾಮಸ್ಥರು:
ಸಾಗರದ ಅರಳಗೋಡು ಗ್ರಾಮದಲ್ಲಿ ಮಂಗನ ಕಾಯಿಲೆ ಭೀತಿಯಿಂದಾಗಿ ಗ್ರಾಮಸ್ಥರು ಮನೆ ಖಾಲಿ ಮಾಡಿ ಬೇರೆಡೆಗೆ ತೆರಳಿದ್ದಾರೆ. ಅಷ್ಟೇ ಅಲ್ಲ ಕಳೆದ ಒಂದು ವಾರದಿಂದ ಶಾಲೆಗೂ ವಿದ್ಯಾರ್ಥಿಗಳು ತೆರಳಿಲ್ಲ ಎಂದು ಮಾಧ್ಯಮದ ವರದಿ ತಿಳಿಸಿದೆ.
ಮಂಗನ ಕಾಯಿಲೆ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಭೀತಿಯಿಂದಾಗಿ ಪೋಷಕರು ಮಕ್ಕಳನ್ನು ಬೇರೆ ಊರಿಗೆ ಕಳುಹಿಸಿಕೊಟ್ಟಿರುವುದಾಗಿ ವರದಿ ವಿವರಿಸಿದೆ. ಮಂಗನ ಕಾಯಿಲೆ ಭೀತಿಯಿಂದಾಗಿ ಗ್ರಾಮಸ್ಥರು ಕೂಲಿ ಕೆಲಸಕ್ಕೂ ಹೋಗುತ್ತಿಲ್ಲ ಎಂದು ವರದಿ ಹೇಳಿದೆ.
ಈಗಾಗಲೇ ಮಂಗನ ಕಾಯಿಲೆಗೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮಂಗನ ಕಾಯಿಲೆಗೆ ತುತ್ತಾದ 35 ಮಂದಿ ಶಿವಮೊಗ್ಗ ಮತ್ತು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ