ವಿದೇಶಿ ಭಾಷೆಗಳಿಗೂ ಸಿದ್ಧಾಂತ ಶಿಖಾಮಣಿ ಅನುವಾದ: ಕಾಶಿ ಶ್ರೀ
Team Udayavani, Jan 13, 2019, 12:55 AM IST
ಚಿಕ್ಕಮಗಳೂರು: ವೀರಶೈವ ಧರ್ಮದ ಪ್ರಮುಖ ಗ್ರಂಥವಾದ ಸಿದ್ಧಾಂತ ಶಿಖಾಮಣಿಯನ್ನು ಒಂದು ವರ್ಷದೊಳಗೆ ಎಲ್ಲಾ ವಿದೇಶಿ ಭಾಷೆಗಳಿಗೂ ಅನುವಾದ ಮಾಡಲಾಗುವುದು ಎಂದು ಕಾಶಿ ಜಂಗಮವಾಡಿ ಮಠಾಧೀಶ ಜಗದ್ಗುರು ಡಾ|ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆದ ಧರ್ಮಸಮ್ಮೇಳನದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಸಿದ್ಧಾಂತ ಶಿಖಾಮಣಿ ಗ್ರಂಥವನ್ನು ಈಗಾಗಲೇ ಕನ್ನಡ, ತೆಲುಗು, ಮರಾಠಿ, ಮಲಯಾಳಂ, ಇಂಗ್ಲಿಷ್ ಸೇರಿ 18 ಭಾಷೆಗಳಿಗೆ ಅನುವಾದಿಸಲಾಗಿದೆ. ಇನ್ನು ಒಂದು ವರ್ಷದೊಳಗೆ ಎಲ್ಲಾ ವಿದೇಶಿ ಭಾಷೆಗಳಿಗೂ ಅನುವಾದಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಸಿದ್ಧಾಂತ ಶಿಖಾಮಣಿಯ ಆ್ಯಪ್ ಮತ್ತು ಅದರ ಪಾರಾಯಣದ ಧ್ವನಿ ಮುದ್ರಿಕೆಯನ್ನೂ ಹೊರ ತಂದು ವೆಬ್ಸೈಟ್ನಲ್ಲಿ ಹಾಕಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿಯವರರಿಂದ ಆ್ಯಪ್, ಧ್ವನಿಮುದ್ರಿಕೆ ಬಿಡುಗಡೆ ಮಾಡಿಸಲಾಗುವುದು ಎಂದರು.
ಇದರಿಂದಾಗಿ ಭಕ್ತರು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಉಚಿತವಾಗಿ ತಮ್ಮ ಮೊಬೈಲ್ನಲ್ಲೇ ಸಿದ್ಧಾಂತ ಶಿಖಾಮಣಿ ಓದಬಹುದು ಅಥವಾ ಕೇಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ