ಉತ್ತರ ಕನ್ನಡಕ್ಕೂ ವ್ಯಾಪಿಸಿದ ಮಂಗನ ಕಾಯಿಲೆ
Team Udayavani, Jan 15, 2019, 12:30 AM IST
ಹೊನ್ನಾವರ/ಉಡುಪಿ: ಸಾಗರ ಸೀಮೆಯಲ್ಲಿ ಆತಂಕ ಉಂಟು ಮಾಡಿರುವ ಮಂಗನ ಕಾಯಿಲೆ ಈಗ ಉತ್ತರ ಕನ್ನಡ ಜಿಲ್ಲೆಗೂ ವ್ಯಾಪಿಸುವ ಲಕ್ಷಣ ಕಂಡುಬರುತ್ತಿದೆ. ಉಡುಪಿ ಜಿಲ್ಲೆಯ ವಿವಿಧೆಡೆ ಕೂಡ ಮಂಗಗಳ ಸಾವಿನಿಂದಾಗಿ ಜನರು ಆತಂಕಕ್ಕೊಳಗಾಗಿದ್ದಾರೆ. ಸೋಮವಾರವೂ 5 ಮಂಗಗಳ ಮೃತದೇಹಗಳು ಪತ್ತೆಯಾಗಿವೆ.
ಹೊನ್ನಾವರ ತಾಲೂಕಿನ ಸಾಲಕೋಡು, ಶಿರಸಿಯ ಬನವಾಸಿ, ಭಟ್ಕಳದ ಮುಡೇìಶ್ವರ, ಸಿದ್ದಾ ಪುರ, ಜೋಯಿಡಾ, ಕಾರವಾರದ ಕಾಡಿನಲ್ಲೂ ಮಂಗಗಳು ಮೃತಪಟ್ಟ ವರದಿಯಾಗಿದೆ. ಕೆಲವರು ಈಗಾಗಲೇ ಜ್ವರ ಪೀಡಿತರಾಗಿದ್ದಾರೆ. ಅದು ಮಂಗನ ಕಾಯಿಲೆ ಎಂಬುದು ಖಚಿತಪಟ್ಟಿಲ್ಲ. ರಕ್ತ ಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲಲ್ಲಿ ಸತ್ತು ಬಿದ್ದಿರುವ ಮಂಗ ಗಳನ್ನು ಸುಟ್ಟು ಹಾಕಲಾಗುತ್ತಿದೆ. ಈ ಬಾರಿ ಮಂಗನ ಕಾಯಿಲೆ ತೀವ್ರತೆ ಪಡೆದಿರುವಂತಿದೆ. 25 ವರ್ಷಗಳ ಹಿಂದೆಯೂ ಕಾಯಿಲೆ ತೀವ್ರಗೊಂಡಿತ್ತು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಆಸುಪಾಸಿನ 73 ಜನ ಶಂಕಿತ ಮಂಗನ ಕಾಯಿಲೆ ರೋಗಿಗಳು ದಾಖಲಾಗಿದ್ದಾರೆ. ಇವರಲ್ಲಿ 27 ಜನರಿಗೆ ಮಂಗನ ಕಾಯಿಲೆ ಇರುವುದು ಖಚಿತಪಟ್ಟಿದೆ. 46 ಜನರಿಗೆ ಮಂಗನ ಕಾಯಿಲೆ ಇಲ್ಲ ಎಂಬುದು ಖಚಿತಪಟ್ಟಿದೆ. ನಾಲ್ವರ ಪರೀಕ್ಷಾ ವರದಿ ಬರುವುದು ಬಾಕಿ ಇದೆ. 57 ಜನ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. 16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಣಿಪಾಲ ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ನಡುವೆ ಮಣಿಪಾಲ ಆಸ್ಪತ್ರೆಯಲ್ಲಿ ರೋಗ ಸಂಶಯದಿಂದ ಮಹಿಳೆ ಸಾವಿಗೀಡಾಗಿದ್ದರೂ ಆಕೆಗೆ ಮಂಗನ ಕಾಯಿಲೆ ಇರಲಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.ಸಾಗರದಲ್ಲಿ ಸೋಮವಾರವೂ ಕೆಲವು ಮಂಗಗಳು ಅಸುನೀಗಿವೆ. ಈ ಪರಿಸರದಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ