ಆಪರೇಷನ್ ಕಮಲಕ್ಕೆ ನನ್ನ ಸಹಕಾರವಿಲ್ಲ : ಮಾಜಿ ಸಚಿವ ಚೆಲುವರಾಯಸ್ವಾಮಿ
Team Udayavani, Jan 17, 2019, 12:55 AM IST
ಮದ್ದೂರು: ಆಪರೇಷನ್ ಕಮಲಕ್ಕೆ ನಾನು ಯಾವುದೇ ರೀತಿಯ ಸಹಕಾರ ನೀಡಿಲ್ಲ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದರು.
ಆಪರೇಷನ್ ಕಮಲಕ್ಕೆ ಸೋತ ಕೈ ನಾಯಕರು ಸಾಥ್ ನೀಡಿದ್ದಾರೆ ಎಂಬ ಶಾಸಕ ಸುರೇಶ್ಗೌಡ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇದು ಕೇವಲ ಊಹಾಪೋಹ ಮಾತ್ರ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಕಾರಣಕ್ಕೂ ಪತನವಾಗುವುದಿಲ್ಲ. ಮೂರ್ನಾಲ್ಕು ಶಾಸಕರು ಅಸಮಾಧಾನಗೊಂಡಿದ್ದಾರೆ. ಅವರನ್ನು ಸಮಾಧಾನಪಡಿಸುವ ಕೆಲಸಕ್ಕೆ ನಾಯಕರು ಮುಂದಾಗಿದ್ದಾರೆ. ಕಾಂಗ್ರೆಸ್ ಶಾಸಕರು ಎಲ್ಲೂ ಹೋಗೋಲ್ಲ. ಪಕ್ಷದಲ್ಲೇ ಇರುತ್ತಾರೆ ಎಂದರು. ಅಂಬರೀಶ್ ಕುಟುಂಬದವರು ರಾಜಕೀಯ ಪ್ರವೇಶಕ್ಕೆ ಇಚ್ಛಿಸಿದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದರೆ ನಮಗೂ ಸಂತಸವಾಗುತ್ತದೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ