ಕೀ ಉತ್ತರದಲ್ಲಿ ಫೇಲಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ!


Team Udayavani, Jan 19, 2019, 12:50 AM IST

19.jpg

ರಾಯಚೂರು: ಪಿಯು ಉಪನ್ಯಾಸಕರ ನೇಮಕಾತಿ ಗೊಂದಲಗಳಿಗೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣ ಕಾಣುತ್ತಿಲ್ಲ. ಕಳೆದ ಐದು ವರ್ಷದಿಂದ ಒಂದಿಲ್ಲೊಂದು ಗೊಂದಲದ ಮಧ್ಯೆ ಕೊನೆಗೂ ಪರೀಕ್ಷೆ ನಡೆಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಈಗ ಪ್ರಕಟಿಸಿರುವ ಕೀ ಉತ್ತರಗಳಲ್ಲೂ ಸಾಕಷ್ಟುತಪ್ಪು ಗಳು ನುಸುಳುವಂತೆ ಮಾಡಿದೆ.

ರಾಜ್ಯದ ವಿವಿಧೆಡೆ ಖಾಲಿಯಿರುವ 1,130 ಹುದ್ದೆಗಳ ಭರ್ತಿಗೆ 2015ರಲ್ಲಿ ಅಧಿಸೂಚನೆ ಹೊರಡಿಸಿದ್ದ ಪ್ರಾ ಧಿಕಾರ,4 ವರ್ಷಗಳಿಂದ ಹಲವು ಬಾರಿ ಪ್ರಕ್ರಿಯೆ ಪ್ರಾರಂಭಿಸಿ, ನಿಲ್ಲಿಸುವ ಮೂಲಕ ಚಲ್ಲಾಟವಾಡಿತ್ತು. ಕೊನೆಗೆ 2018ರ ನ.29ರಿಂದ ಡಿ.8ರವರೆಗೆ ಪರೀಕ್ಷೆಗಳನ್ನು ನಡೆಸಿತ್ತು.

ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಇತಿಹಾಸ, ಹಿಂದಿ, ಇಂಗ್ಲಿಷ್‌, ಸಮಾಜಶಾಸ್ತ್ರ, ಉರ್ದು, ಸಂಖ್ಯಾಶಾಸ್ತ್ರ ಹೀಗೆ 25 ವಿಷಯಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಪ್ರಾ ಧಿಕಾರ ಬಿಡುಗಡೆ ಮಾಡುವ ಕೀ ಉತ್ತರಗಳಿಗೆ ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದರು. ಜ.14ರಂದು ಪ್ರಕಟಗೊಂಡ ಕೀ ಉತ್ತರ ನೋಡಿದವರೇ ಭ್ರಮನಿರಸನಗೊಂಡಿದ್ದಾರೆ. ಸಾಕಷ್ಟು ಪ್ರಶ್ನೆಗಳಿಗೆ ತಪ್ಪು ಉತ್ತರಗಳು ಕಂಡು ಬಂದಿದ್ದು, ಆಕಾಂಕ್ಷಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಅದರಲ್ಲಿ ರಾಜ್ಯಶಾಸOಉ ದ್ವಿತೀಯ ಪತ್ರಿಕೆ ಉತ್ತರಗಳು ಅದಕ್ಕೆ ಸಂಬಂಧಿ ಸಿಧ್ದೋ ಅಲ್ಲವೋ ಎನ್ನುವಷ್ಟರ ಮಟ್ಟಿಗೆ ತಪ್ಪಾಗಿದೆ ಎಂದು ದೂರುತ್ತಿದ್ದಾರೆ ಅಭ್ಯರ್ಥಿಗಳು. ಸಂವಿಧಾನದಲ್ಲೇ ಹಣಕಾಸು ಆಯೋಗದ ರಚನೆ ಕುರಿತಾದ ವಿ ಧಿಯನ್ನು 280ನೇ ವಿಧಿಯಲ್ಲಿ ನಮೂದಿಸಿದ್ದಾರೆ. ಕೀ ಉತ್ತರದಲ್ಲಿ 350-ಬಿ ಎಂದು ನೀಡಲಾಗಿದೆ. ಪ್ರಮುಖ ವ್ಯಕ್ತಿಗಳು, ಇಸ್ವಿಗಳನ್ನು ಕೂಡ ತಪ್ಪಾಗಿ ನಮೂದಿಸಲಾಗಿದೆ. ಬೇರೆ ವಿಷಯಗಳಲ್ಲೂ ಸಮಸ್ಯೆಗಳು ಕಂಡು ಬಂದಿವೆ.

ಈ ಹಿಂದೆ ಪಿಡಿಒ ನೇಮಕಾತಿಯಲ್ಲೂ ಇದೇ ರೀತಿಯ ತಪ್ಪುಗಳು ಕಂಡು ಬಂದಿದ್ದವು. ಆಗ ನೊಂದ ಅಭ್ಯರ್ಥಿಗಳು ನ್ಯಾಯಾಲಯ ಮೊರೆ ಹೋಗಿ ಗೊಂದಲವನ್ನು ಸರಿಪಡಿಸಿಕೊಂಡಿದ್ದರು. ಈಗ ಸಮಸ್ಯೆ ಕುರಿತು ಪ್ರಾಧಿಕಾರದ ಸಹಾಯವಾಣಿಗೆ ಕರೆ ಮಾಡಿ ವಿಚಾರಿಸಿದರೆ ಜ.17ರಿಂದ ಆಕ್ಷೇಪಣೆ ಸಲ್ಲಿಸಬಹುದು ಎನ್ನುವ ಸಿದ್ಧ ಉತ್ತರ ನೀಡಿದ್ದಾರೆ.

ಅಪ್‌ಲೋಡ್‌ನ‌ಲ್ಲಿ ಯಡವಟ್ಟು: ಈಗ ಪರೀಕ್ಷೆಗಳನ್ನು ಎ, ಬಿ, ಸಿ, ಡಿ ಮಾದರಿಯ ಪ್ರಶ್ನೆಪತ್ರಿಕೆಗಳಲ್ಲಿ ನೀಡು ವುದರಿಂದ ಕೀ ಉತ್ತರಗಳು ಕೂಡ ಅದೇ ಮಾದರಿ ಯಲ್ಲಿರುತ್ತವೆ. ಆನ್‌ಲೈನ್‌ನಲ್ಲಿ ಒಂದು ವಿಷಯಕ್ಕೆ ಮತ್ತೂಂದು ವಿಷಯದ ಉತ್ತರ ಅಳವಡಿಸಿದರೂ ಈ ಸಮಸ್ಯೆ ಎದುರಾಗಬಹುದು. ಆದರೆ, ಹಾಗೆ ಮಾಡುವುದರಿಂದ ಅಭ್ಯರ್ಥಿಗಳ ಜಂಘಾಬಲವೇ ಉಡುಗಿ ಹೋಗಲಿದೆ ಎಂಬುದನ್ನು ಪ್ರಾಧಿಕಾರ ತಿಳಿಯಬೇಕು. ಸತತ ಪ್ರಯತ್ನ ಮಾಡಿ ಹೇಗಾದರೂ ಕೆಲಸ ಪಡೆಯಬೇಕೆಂಬ ಮಹದಾಸೆ ಹೊಂದಿರುವವರಿಗೆ ಇದರಿಂದ ತುಂಬಾ ನಿರಾಸೆಯಾಗುತ್ತದೆ. ಇನ್ನಾದರೂ ಸೂಕ್ತ ಉತ್ತರಗಳನ್ನು ಪ್ರಕಟಿಸುವ ಮೂಲಕ ಆಗಿರುವ ಗೊಂದಲಗಳನ್ನು ನಿವಾರಿಸಲಿ ಎಂಬುದು ಉದ್ಯೋಗಾ ಕಾಂಕ್ಷಿಗಳ ಹಕ್ಕೊತ್ತಾಯ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಮ್ಮ ಜತೆ ಚೆಲ್ಲಾಟ ಆಡುತ್ತಿದೆ. ನಾಲ್ಕು ವರ್ಷಗಳಿಂದ ಸತಾಯಿಸಿ ಈಗ ಪರೀಕ್ಷೆ ನಡೆಸಿದೆ. ಈಗ ನೀಡಿರುವ ಕೀ ಉತ್ತರಗಳು ತಾಳೆ ಆಗುತ್ತಿಲ್ಲ. ಸಾಕಷ್ಟು ಉತ್ತರಗಳು ಸರಿ ಹೊಂದುತ್ತಿಲ್ಲ. ಇದರಿಂದ ಪರೀಕ್ಷಾರ್ಥಿಗಳಿಗೆ ನಿರಾಸೆಯಾಗಲಿದೆ. ಪ್ರಾಧಿಕಾರ ಕಾಟಾಚಾರಕ್ಕೆ ಏಕೆ ಪರೀಕ್ಷೆ ನಡೆಸಬೇಕು. ಕೂಡಲೇ ಸರಿ ಉತ್ತರಗಳನ್ನು ಪ್ರಕಟಿಸಲಿ.
● ನೊಂದ ವಿದ್ಯಾರ್ಥಿಗಳು

ಆಕ್ಷೇಪಣೆ ಸುಲಭವಲ್ಲ
ಪ್ರತಿ ಅಂಕವೂ ಕೆಲಸ ಗಿಟ್ಟಿಸಿಕೊಳ್ಳಲು ಬಹಳ ಮುಖ್ಯ. ಹೀಗಾಗಿ ಒಂದೆರಡು ಪ್ರಶ್ನೆಗಳು ತಪ್ಪಾದಲ್ಲಿ ಆಕ್ಷೇಪಣೆ ಸಲ್ಲಿಸುತ್ತಾರೆ. ಅಲ್ಲದೇ, ಆಕ್ಷೇಪಣೆ ಸಲ್ಲಿಸಬೇಕಾದರೆ ಆ ಉತ್ತರದ ನಿಖರತೆ ಪ್ರಸ್ತುತಪಡಿಸಬೇಕು. ಸರ್ಕಾರದ ಮಾನ್ಯತೆ ಹೊಂದಿದ ಕಡತಗಳಲ್ಲಿ ಅದರ ಉಲ್ಲೇಖದ
ವಿವರಣೆ ನೀಡಿದಾಗ ಆ ಆಕ್ಷೇಪಣೆ ಅಂಗೀಕೃತವಾಗುತ್ತದೆ. ಆದರೆ, ಈಗಾಗಿರುವ ಅಷ್ಟು ತಪ್ಪುಗಳಿಗೆ ಉತ್ತರಗಳನ್ನು ದಾಖಲೆ ಸಮೇತ ಹುಡುಕಿ ಆಕ್ಷೇಪಣೆ ಸಲ್ಲಿಸುವುದು ಕಷ್ಟದ ಕೆಲಸ ಎನ್ನುವುದು ಆಕಾಂಕ್ಷಿಗಳ ಅಳಲು

ಇದೆಲ್ಲ ವದಂತಿ
ಈ ಬಗ್ಗೆ ಸ್ಪಷ್ಟನೆ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇ ಶಕರು, ಉತ್ತರಗಳನ್ನು ಪರಿಶೀಲಿಸುವಾಗ ತಮ್ಮ ಪ್ರಶ್ನೆ ಪತ್ರಿಕೆ ವರ್ಷನ್‌ ಕೋಡ್‌ ಅನುಸಾರ ನೋಡಬೇಕು. ಕೆಲವರು ಉತ್ತರಗಳು ತಪ್ಪಿವೆ ಎಂದು ವದಂತಿ ಹಬ್ಬಿಸುತ್ತಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆಕ್ಷೇಪಣೆ ಇದ್ದಲ್ಲಿ ಆನ್‌ಲೈನ್‌ನಲ್ಲಿ ನಿಗದಿತ ದಿನಾಂಕದೊಳಗೆ ಸಲ್ಲಿಸುವಂತೆ ತಿಳಿಸಿದ್ದಾರೆ.

 ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.