ಸಾಹಿತ್ಯ ಲೆಕ್ಕದ ಬುಕ್ಕಲ್ಲ, ಸಂಸ್ಕೃತಿ ಶ್ರೇಷ್ಠತೆಯ ಸೊಕ್ಕಲ್ಲ


Team Udayavani, Jan 19, 2019, 12:40 AM IST

14.jpg

ಧಾರವಾಡ: “ಜನರ ಬದುಕುವ ಸ್ವಾತಂತ್ರ್ಯಕ್ಕೆ ಬದ್ಧವಾಗಿರುವ ಸಾಮಾಜಿಕ, ರಾಜಕೀಯ ಪ್ರಜ್ಞೆ ನಮ್ಮದಾಗಬೇಕು. ಅದೇ ಸಾಮಾಜಿಕ ಸಂಭ್ರಮ, ರಾಜಕೀಯ ಸಂಭ್ರಮ, ಸಾಹಿತ್ಯ ಸಂಭ್ರಮ’ ಎಂದು ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ,ಕರ್ನಾಟಕ ವಿಶ್ವವಿದ್ಯಾಲಯ, ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ ಸಹಯೋಗದಲ್ಲಿ ಶುಕ್ರವಾರದಿಂದ 3 ದಿನ ಧಾರವಾಡ ಸಾಹಿತ್ಯ ಸಂಭ್ರಮ-2019ಕ್ಕೆ ಚಾಲನೆ ನೀಡಿ ಆಶಯ ಭಾಷಣ ಮಾಡಿ, “ನಾವು ಅಪವ್ಯಾಖ್ಯಾನಗಳನ್ನು ಅಳಿಸಬೇಕು. ಜನಗಳು ಬದುಕುವ ಸ್ವಾತಂತ್ರÂ ನಮ್ಮ ಆಯ್ಕೆಯಾಗಬೇಕು’ ಎಂದರು.

ಮಾನವೀಯತೆಯು ಸಾರ್ವಕಾಲಿಕ ಮೌಲ್ಯವಾಗಿದ್ದರಿಂದ ದೂರವನ್ನು ಸಮೀಪ ಮಾಡುವ ಆಶಯವಿಲ್ಲದ ಸಾಹಿತ್ಯ ಸಾಹಿತ್ಯವೇ ಅಲ್ಲ. ನಮ್ಮ ಸಾಹಿತ್ಯ ಮತ್ತು ಸಂಸ್ಕೃತಿ ಮನುಷ್ಯರೇ ಆದಲ್ಲಿ, ಜನರಿಗೆ ಸಮೀಪವಾಗಬೇಕು. ಜನರಿಗೆ ಜವಾಬ್ದಾರರಾಗಬೇಕು. ಸಂಭ್ರಮ ದೊಂದಿಗೆ ಸಂಕಟವೂ ಗೊತ್ತಾಗಬೇಕು. ಬದುಕು ವೈರುಧ್ಯಗಳ ಮೊತ್ತವಾಗಿದ್ದು, ಅದೇ ವಾಸ್ತವ. ನಮ್ಮ ನಾಡು ತುಂಬಿ ಹರಿವ ನದಿಗಳಿರುವ ಕರಾವಳಿಯೂ ಹೌದು, ಬತ್ತಿದ ಕೆರೆಗಳ ನಾಡೂ ಹೌದು. ಇದು ಕೋಗಿಲೆಗಳ ನಾಡು ಹೌದು, ಕಾಗೆಗಳ ನಾಡೂ ಹೌದು ಎಂದರು. ಸಾಹಿತ್ಯದ ಶ್ರೇಷ್ಠತೆಯು ಒಂದು ಶೋಧವೇ ಹೊರತು, ಮೋಕ್ಷ ಸ್ಥಿತಿಯಲ್ಲ. ಆದ್ದರಿಂದ ಹುಸಿ ಶ್ರೇಷ್ಠತೆ ಮತ್ತು ಹುಸಿ ಶುದ್ಧತೆಗಳಿಂದ ವಿಮೋಚನೆಗೊಂಡ ಮನಸು ಮಾತ್ರ ಮನುಷ್ಯತ್ವದ ಮೂಲ ಬೇರುಗಳನ್ನು ಬಲಗೊಳಿಸುತ್ತದೆ. ಮನುಷ್ಯತ್ವದ ಪ್ರಜ್ಞೆಯೇ ಸಾಮಾಜಿಕ ಹಾಗೂ ರಾಜಕೀಯ ಪ್ರಜ್ಞೆಯಾಗಬೇಕು.ಸಾಹಿತ್ಯ ಲೆಕ್ಕದ ಬುಕ್ಕಲ್ಲ, ಸಂಸ್ಕೃತಿ ಶ್ರೇಷ್ಠತೆಯ ಸೊಕ್ಕಲ್ಲ. ಇಲ್ಲಿ ಮೇಲು ಕೀಳುಗಳ ಮಾರಣ ಹೋಮಕ್ಕೆ ಅವಕಾಶವಿಲ್ಲ. ಆದ್ದರಿಂದ ಸಾಹಿತ್ಯ ಮತ್ತು ಸಂಸ್ಕೃತಿಗಳು ಸಮಾನತೆ, ಸೌಹಾರ್ದತೆಗಳ ಜೀವಶಕ್ತಿ ಒಳಗೊಳ್ಳಬೇಕು ಎಂದರು. ರಾಘವೇಂದ್ರ ಪಾಟೀಲ, ಸರೋಜಾ ಗಿರಡ್ಡಿ, ಉಮಾದೇವಿ ಕಲಬುರ್ಗಿ, ರಮಾಕಾಂತ ಜೋಶಿ ಇದ್ದರು.

ಕಲಬುರ್ಗಿ ಮರೆತ ಸರ್ಕಾರ ಕುರ್ಚಿ ಗಲಾಟೆ ಕಡಿಮೆಯಾದ ಮೇಲಾದರೂ ರಾಜಕಾರಣಿಗಳು ಡಾ|ಎಂ.ಎಂ.ಕಲಬುರ್ಗಿ ಅವರ ಹತ್ಯೆ ಮಾಡಿದವರನ್ನು ಪತ್ತೆ ಮಾಡಬೇಕು. ಸದ್ಯಕ್ಕೆ ರಾಜಕಾರಣಿಗಳು ಅಧಿ ಕಾರ ಉಳಿಸಿಕೊಳ್ಳುವಲ್ಲಿ ನಿರತ ರಾಗಿದ್ದಾರೆ. ಡಾ|ಎಂ.ಎಂ. ಕಲಬುರ್ಗಿ ಅವರ ಹತ್ಯೆಯಾಗಿ 4 ವರ್ಷಗಳು ಗತಿಸಿದರೂ ಆರೋಪಿ ಗಳನ್ನು ಪತ್ತೆ ಮಾಡುವಲ್ಲಿ ನಿರ್ಲಕ್ಷé ವಹಿಸಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಬೇಕಿದೆ ಎಂದು ಬರಗೂರು ಹೇಳಿದರು.

ಶಬರಿಮಲೆಯಲ್ಲಿ ಮಹಿಳೆ ಯರಿಗೆ ಪ್ರವೇಶ ನೀಡದಂತೆ ತಡೆಯವುದು ಸಾಮಾಜಿಕ ಹಿಂಸೆಯ ಫಲವಾಗಿದೆ. ಅಯ್ಯಪ್ಪನ ಸನ್ನಿಧಾನದಲ್ಲಿ ಈಗ ಭಕ್ತಿ ಇಲ್ಲ, ಕೇವಲ ರಾಜಕೀಯ ಶಕ್ತಿ ಇದೆ.
● ಬರಗೂರು ರಾಮಚಂದ್ರಪ್ಪ,ಸಾಹಿತಿ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.