ರಾಜೀನಾಮೆ ನೀಡಿ ಬೆಂಬಲ ಸೂಚಿಸಿ: ಸಂತ್ರಸ್ತರ ಆಗ್ರಹ
Team Udayavani, Jan 20, 2019, 1:00 AM IST
ಮಡಿಕೇರಿ:ಅತಿವೃಷ್ಟಿ ಹಾನಿ ಸಂತ್ರಸ್ತರಿಗೆ ಮನೆ ನಿರ್ಮಾಣ ಸೇರಿದಂತೆ ಪರಿಹಾರ ಕಾರ್ಯಗಳು ವಿಳಂಬವಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೊಡಗು ಪ್ರಕೃತಿ ವಿಕೋಪ ಪರಿಹಾರ ಹೋರಾಟ ಸಮಿತಿ, ಜಿಲ್ಲೆಯ ಜನಪ್ರತಿನಿಧಿಗಳು ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಸಂತ್ರಸ್ತರ ಹೋರಾಟಕ್ಕೆ ಬೆಂಬಲ ಸೂಚಿಸಬೇಕೆಂದು ಒತ್ತಾಯಿಸಿದೆ.
ಮಳೆಹಾನಿ ಸಂತ್ರಸ್ತರನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಸಮಿತಿಯು ಸಂತ್ರಸ್ತರೊಂದಿಗೆ ನಗರದಲ್ಲಿ ಪ್ರತಿಭಟನೆ ನಡೆಸಿತು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಕಾರರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ, ಸಮಿತಿಯ ಅಧ್ಯಕ್ಷ ಎಂ.ಬಿ.ದೇವಯ್ಯ, ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟವನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಹೋರಾಟವನ್ನು ತೀವ್ರ ಗೊಳಿಸಿದಾಗ ಮಾತ್ರ ಸರ್ಕಾರ ಎಚ್ಚೆತುಕೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟ ಅವರು ರೈತಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮಳೆಹಾನಿಯಿಂದ ಎಲ್ಲವನ್ನು ಕಳೆದುಕೊಂಡು ಅನಾಥ ಪ್ರಜ್ಞೆಯನ್ನು ಅನುಭವಿಸುತ್ತಿರುವ ಸಂತ್ರಸ್ತರ ಬಗ್ಗೆ ಚಿಂತೆ ಮಾಡುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ಜನಪ್ರತಿನಿಧಿಗಳು ರಾಜಿ àನಾಮೆ ನೀಡಿ ಸಂತ್ರಸ್ತರ ಹೋರಾಟಕ್ಕೆ ಬೆಂಬಲ ಸೂಚಿಸಬೇಕೆಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ