ಐಐಎಚ್‌ಆರ್‌ನಿಂದ ಶೀಘ್ರ “ಸೀಡ್‌ ವೆಂಡಿಂಗ್‌ ಮೆಷಿನ್‌’


Team Udayavani, Jan 20, 2019, 1:20 AM IST

50.jpg

ಬೆಂಗಳೂರು: ಹಣ ಹಾಕಿದರೆ ಕೋಲ್ಡ್‌ಡ್ರಿಂಕ್ಸ್‌ ಬಂದು ಬೀಳುವಂತೆಯೇ ಶೀಘ್ರದಲ್ಲೇ ಹಣ ಹಾಕಿದರೆ ತರಕಾರಿ ಬೀಜಗಳ ಪ್ಯಾಕೆಟ್‌ ದೊರೆಯು ವಂತಹ ವಿನೂತನ ವ್ಯವಸ್ಥೆ ನಗರದಲ್ಲಿ ಜಾರಿಗೆ ಬರಲಿದೆ. 

ನಗರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ತಾರಸಿಯಲ್ಲಿ ತರಕಾರಿ ಬೆಳೆಯುವ ಟ್ರೆಂಡ್‌ ಹೆಚ್ಚುತ್ತಿದೆ. ಗುಣಮಟ್ಟದ ಬೀಜಗಳು ಆ ಗ್ರಾಹಕರಿಗೆ ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸ್ವತಃಭಾರತೀಯ ತೋಟಗಾರಿಕಾ ಸಂಶೋ ಧನಾ ಸಂಸ್ಥೆ (ಐಐಎಚ್‌ಆರ್‌) ಅಭಿವೃದ್ಧಿ ಪಡಿಸಿದ ಗುಣಮಟ್ಟದ ಬೀಜಗಳು ಸುಲಭ ವಾಗಿ ಗ್ರಾಹಕರಿಗೆ ಸಿಗುವಂತೆ ಮಾಡುವ ಉದ್ದೇಶದಿಂದ  “ಸೀಡ್‌ ವೆಂಡಿಂಗ್‌ ಮೆಷಿನ್‌’

ಪರಿಚಯಿಸಲು ನಿರ್ಧರಿಸ ಲಾಗಿದೆ. ಜನಸಂದಣಿ ಹಾಗೂ ತರಕಾರಿ ಮಾರಾಟ ವಹಿವಾಟು ಹೆಚ್ಚಿರುವ ಸ್ಥಳ ಗಳಲ್ಲಿ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಅಳವಡಿಸ ಲಾಗುವುದು ಎಂದು ಸಂಸ್ಥೆ ನಿರ್ದೇಶಕ ಎಂ.ಆರ್‌. ದಿನೇಶ್‌ ಅವರು ಶನಿವಾರ ಸುದ್ದಿಗೋಷ್ಠಿ ಯಲ್ಲಿ ಮಾಹಿತಿ ನೀಡಿದರು. 

ಬೀಜಗಳ ದರ 20 ರೂ.
ಸುಮಾರು 36 ಪ್ರಕಾರದ 24 ತರಕಾರಿ ಪ್ಯಾಕೆಟ್‌ಗಳು ಪ್ರತಿ ಮೆಷಿನ್‌ನಲ್ಲಿ  ಇರು ತ್ತವೆ. ಲಾಲ್‌ಬಾಗ್‌, ಬಸ್‌ ನಿಲ್ದಾಣ, ರೈಲು ನಿಲ್ದಾಣ ಸಹಿತ ನಗರದ ಹತ್ತು ಕಡೆಗಳಲ್ಲಿ ಈ ವಿನೂತನ ಯಂತ್ರಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಪ್ರತಿ ಯಂತ್ರಕ್ಕೆ ಎರಡೂವರೆ ಲಕ್ಷ ರೂ. ವೆಚ್ಚ ಆಗುತ್ತದೆ. ಆದ್ದರಿಂದ ತೋಟಗಾರಿಕೆ ಇಲಾಖೆ ನೆರವು ಕೋರಲಾಗಿದ್ದು, ಪೂರಕ ಸ್ಪಂದನೆ ದೊರೆತಿದೆ. ಅಷ್ಟೇ ಅಲ್ಲ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಈ ಸೀಡ್‌ ವೆಂಡಿಂಗ್‌ ಮೆಷಿನ್‌ಗಳನ್ನು ಅಳವಡಿಸುವ ಚಿಂತನೆ ಇದೆ ಎಂದು ತಿಳಿಸಿದರು. 

ತರಕಾರಿ ಮತ್ತು ಹೂವಿನ ಬೀಜಗಳ ಪ್ಯಾಕೆಟ್‌ಗಳು ಈ ಯಂತ್ರದಲ್ಲಿ ಇರುತ್ತವೆ. ಜನ ಹಣ ಹಾಕಿ, ಸ್ಕ್ರೀನ್‌ ಮೇಲೆ ಇರುವ ಡಿಜಿಟಲ್‌ ಗುಂಡಿಗಳ ಮೂಲಕ ಬೀಜ ಆಯ್ಕೆ ಮಾಡಬೇಕು. ಕೇವಲ 20 ರೂ. ನಿಗದಿಪಡಿಸಲಾಗುವುದು ಎಂದರು. 

ಸೀಡ್‌ ಕಿಟ್‌ಗೆ ಭಾರೀ ಬೇಡಿಕೆ
ಭಾರತೀಯ ತೋಟಗಾರಿಕಾ ಸಂಶೋಧನ ಸಂಸ್ಥೆ ಪರಿಚಯಿಸಿದ “ಸೀಡ್‌ ಕಿಟ್‌’ (ತರಕಾರಿಗಳ ಬಾಕ್ಸ್‌)ಗೆ ವಿದೇಶಗಳಲ್ಲಿ ಈಗ ಭಾರೀ ಬೇಡಿಕೆ ಇದ್ದು, ಲಕ್ಷಕ್ಕೂ ಅಧಿಕ ಕಿಟ್‌ಗಳು ಇದುವರೆಗೆ ಮಾರಾಟ ಆಗಿವೆ ಎಂದು ಸಂಸ್ಥೆಯ ತರಕಾರಿ ವಿಭಾಗದ ಮುಖ್ಯಸ್ಥ ಹಾಗೂ ಪ್ರಧಾನ ವಿಜ್ಞಾನಿ ಡಾ| ಎ.ಟಿ. ಸದಾಶಿವ ತಿಳಿಸಿದರು. 

ದೇಶದಲ್ಲೇ ಮೊದಲ ಬಾರಿಗೆ ಈ ರೀತಿಯ ಸೀಡ್‌  ಕಿಟ್‌ಗಳನ್ನು ಐಐಎಚ್‌ಆರ್‌ ಪರಿಚಯಿಸಿದೆ. ಕಳೆದ ಎರಡು ವರ್ಷಗಳಿಂದ ಇವುಗಳಿಗೆ ದೇಶಾದ್ಯಂತ ಬೇಡಿಕೆ ಬರುತ್ತಿದೆ. ಇದರಲ್ಲಿ 8 ಪ್ರಕಾರದ ತರಕಾರಿ ಬೀಜಗಳಿದ್ದು, ಇದರ ಬೆಲೆ 140 ರೂ. ಗ್ರಾಹಕರು ಡಿಡಿಡಿ.ಜಿಜಿಜr.rಛಿs.ಜಿn ಮೂಲಕ ಆನ್‌ಲೈನ್‌ನಲ್ಲಿ ಕೂಡ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.