ಬಿಜೆಪಿಗೆ ಹೆದರಿ ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಶಿಫ್ಟ್
Team Udayavani, Jan 20, 2019, 12:35 AM IST
ಹುಬ್ಬಳ್ಳಿ: ನಮ್ಮ ಶಾಸಕರನ್ನು ಬಿಜೆಪಿಯವರು ಸೆಳೆಯುತ್ತಿದ್ದಾರೆ. ಆದ್ದರಿಂದ ಅವರನ್ನು ಹಿಡಿದಿಟ್ಟುಕೊಳ್ಳಬೇಕೆಂಬ ಕಾರಣಕ್ಕೆ ರೆಸಾರ್ಟ್ನಲ್ಲಿ ಉಳಿಸಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸಮರ್ಥಿಸಿಕೊಂಡರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ರೆಸಾರ್ಟ್ ಸಂಸ್ಕೃತಿ ಬೆಳೆದಿದೆ. ಇದು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಪ್ರತಿಯೊಂದು ಪಕ್ಷ ತನ್ನ ಶಾಸಕರಿಗೆ ಯಾರೂ ಗಾಳ ಹಾಕಬಾರದು, ಅವರಿಗೆ ತೊಂದರೆ ಆಗಬಾರದೆಂದು ಅವರ ಮೇಲೆ ನಿಗಾ ವಹಿಸಿ ಕ್ರಮ ಕೈಗೊಳ್ಳುತ್ತಿದೆ. ಬಿಜೆಪಿ ಶಾಸಕರು ಕಳೆದ ಒಂದು ವಾರದಿಂದ ರೆಸಾರ್ಟ್ನಲ್ಲಿ¨ªಾರೆ. ಅವರು, ಕಾಂಗ್ರೆಸ್ ಶಾಸಕರಿಗೆ ಗಾಳ ಹಾಕಿದ್ದಾರೆ. ನಮ್ಮ ಪಕ್ಷದ ಶಾಸಕರು ನಮಗೆ ಒತ್ತಡ ಇದೆ ಎಂದು ನಮ್ಮ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಕ್ಕೆ ಶುಕ್ರವಾರ ರಾತ್ರಿ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯಲಾಗಿದೆ. ಆದರೆ, ನಮ್ಮ ಶಾಸಕರ ಮೇಲೆ ನಮಗೆ ವಿಶ್ವಾಸವಿದೆ. ನಮ್ಮ ಶಾಸಕರ್ಯಾರೂ ಪಕ್ಷ ಬಿಡುವುದಿಲ್ಲ ಎಂದರು.
ಅತೃಪ್ತರು ಇರುವುದು ಸಹಜ. ಆದರೆ, ರಾಜ್ಯದ ಸಮ್ಮಿಶ್ರ ಸರ್ಕಾರ ಸ್ಥಿರವಾಗಿದೆ. ರಮೇಶ ಜಾರಕಿಹೊಳಿ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ಶಾಸಕ ಜಾಧವ ಅವರು ಸಿಎಲ್ಪಿ ಮೀಟಿಂಗ್ಗೆ ಪತ್ರ
ಬರೆದು ತಿಳಿಸಿದ್ದಾರೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…