ಬಂಟರ ಸಂಘ ಪಿಂಪ್ರಿ-ಚಿಂಚ್ವಾಡ್: ವಾರ್ಷಿಕ ವಿಹಾರಕೂಟ
Team Udayavani, Jan 20, 2019, 3:39 PM IST
ಪುಣೆ: ಬಂಟರ ಸಂಘ ಪಿಂಪ್ರಿ-ಚಿಂಚ್ವಾಡ್ ಇದರ ವಾರ್ಷಿಕ ವಿಹಾರಕೂಟವು ಜ. 3 ರಂದು ಲೋನಾವಾಲಾ ಹತ್ತಿರದ ಕಾರ್ಲಾದಲ್ಲಿರುವ ಎಂಟಿಡಿಸಿ ರೆಸಾರ್ಟ್ನಲ್ಲಿ ಆಯೋಜಿಸಲಾಗಿತ್ತು.
ಸಂಘದ ಅಧ್ಯಕ್ಷ ವಿಜಯ್ ಎಸ್. ಶೆಟ್ಟಿ ಕಟ್ಟನಿಗೆ ಮನೆ ಬೋರ್ಕಟ್ಟೆ ಇವರ ನೇತೃತ್ವದಲ್ಲಿ ಬೆಳಗ್ಗೆ ಪಿಂಪ್ರಿ- ಚಿಂಚಾÌಡ್ ಪರಿಸರದ ಸುಮಾರು 350 ಸದಸ್ಯರು ಬಸ್ಸುಗಳ ಮೂಲಕ ವಿಹಾರಕೂಟಕ್ಕೆ ತೆರಳಿದರು.
ಬೆಳಗ್ಗಿನಿಂದ ಸಂಜೆಯವರೆಗೆ ವಿಹಾರಕೂಟದಲ್ಲಿ ಸದಸ್ಯರು ಸಂಭ್ರಮಪಟ್ಟರು. ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಭೋಜನ, ಸಂಜೆಯ ಚಹಾ, ಹಣ್ಣು ಹಂಪಲುಗಳ ವ್ಯವಸ್ಥೆಯನ್ನು ಮಾಡಲಾಗಿತ್ತು.
ಸಂಘದ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಸದಸ್ಯರು ವಿಹಾರಕೂಟದಲ್ಲಿ ಭಾಗವಹಿಸಿದ್ದರು.
ಸಂಘದ ಪದಾಧಿಕಾರಿಗಳು ವಿಹಾರ ಕೂಟದ ಪ್ರಾಯೋಜಕತ್ವವನ್ನು ವಹಿಸಿದ್ದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ