ಶಾಸಕರ ಹೊಡೆದಾಟ: ಗೌರ್ನರ್ಗೆ ಮನವಿ ಸಲ್ಲಿಸಲು ಬಿಜೆಪಿ ಚಿಂತನೆ
Team Udayavani, Jan 21, 2019, 1:39 AM IST
ಬೆಂಗಳೂರು: ಈಗಲ್ಟನ್ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರ ಹೊಡೆದಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡಲೇ ರಾಜ್ಯಪಾಲರು ವರದಿ ಪಡೆಯಬೇಕೆಂದು ಒತ್ತಾಯಿಸಿರುವ ಬಿಜೆಪಿ, ಪರಿಸ್ಥಿತಿ ಅವಲೋಕಿಸಿ ಸೂಕ್ತ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಚಿಂತನೆ ನಡೆಸಿದೆ. ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರ ವರ್ತನೆಯನ್ನು ಖಂಡಿಸಿದ್ದು, ಕಾಂಗ್ರೆಸ್ ನಾಯಕರ ಬಗ್ಗೆ ತೀವ್ರ ವಾಗ್ಧಾಳಿ ನಡೆಸಿದರು.
ಬಿಜೆಪಿ ಶಾಸಕ ರಾಜುಗೌಡ ಸೇರಿ ಕೆಲವರು ಆನಂದ್ ಸಿಂಗ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ತೆರಳಿದರೂ ಭೇಟಿಗೆ ಅವಕಾಶ ಸಿಗಲಿಲ್ಲ. ಇದು ಇನ್ನಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತು. ಘಟನೆ ನಂತರ ಕಾಂಗ್ರೆಸ್ ನಾಯಕರು ನೀಡುತ್ತಿರುವ ವೈರುಧ್ಯದ ಹೇಳಿಕೆಗಳು, ಆಗಾಗ್ಗೆ ನೀಡುತ್ತಿರುವ ವ್ಯತಿರಿಕ್ತ ಸಮಜಾಯಿಷಿಗಳು, ಸಮಯ ಕಳೆದಂತೆಲ್ಲಾ ಹೊಸ ವಿಚಾರಗಳು ಬಹಿರಂಗವಾಗುತ್ತಿರುವುದನ್ನು ಬಿಜೆಪಿ ನಾಯಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಪೊಲೀಸರುಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿರುವ ಬಿಜೆಪಿ ನಾಯಕರು, ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಮನವಿ ಸಲ್ಲಿಸುವ ಬಗ್ಗೆಯೂ ಗಂಭೀರ ಚಿಂತನೆಯಲ್ಲಿದ್ದಾರೆ.
ಘಟನೆಯನ್ನು ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕಾಂಗ್ರೆಸ್ ಶಾಸಕರು ಪರಸ್ಪರ ಹೊಡೆದುಕೊಂಡಿದ್ದಾರೆ. ಇದು ಶಾಸಕರೆಲ್ಲ ತಲೆ ತಗ್ಗಿಸುವಂತಹ ಕೆಲಸ. ಶಾಸಕರ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಇದಕ್ಕೆ ಸಿದ್ದರಾಮಯ್ಯ ಅವರು ಉತ್ತರ ನೀಡಬೇಕೆಂದು ಆಗ್ರಹಿಸಿದರು. ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಕೂಡಲೇ ವರದಿ ಪಡೆದು ಕ್ರಮ ಜರುಗಿಸಬೇಕು.
ರಾಜ್ಯಪಾಲರು ಸಹ ಈ ಬಗ್ಗೆ ವರದಿ ಪಡೆಯಬೇಕು. ಆದರೆ, ನಾವು ರಾಜ್ಯಪಾಲರ ಬಳಿಗೆ ಹೋಗುವುದಿಲ್ಲ ಎಂದು ಹೇಳಿದರು.
ರಾಜ್ಯಪಾಲರಿಗೆ ಮನವಿ ಸಲ್ಲಿಕೆಗೆ ಚಿಂತನೆ: ಆಡಳಿತ ಪಕ್ಷದ ನಾಯಕರ ಮೇಲೆ ಗಂಭೀರ ಹಲ್ಲೆ ನಡೆದಿದ್ದರೂ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿಲ್ಲ. ಇದರಿಂದ ಸಾರ್ವಜನಿಕರಿಗೊಂದು ಕಾನೂನು, ಜನಪ್ರತಿನಿಧಿಗಳಿಗೆ ಒಂದು ಕಾನೂನು ಎಂಬಂತಾಗಿದೆ.
ಕೂಡಲೇ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಸರ್ಕಾರ ಹಾಗೂ ಪೊಲೀಸರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಸೋಮವಾರದವರೆಗೆ ಗಮನಿಸಲಾಗುವುದು. ಒಂದೊಮ್ಮೆ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಘಟನೆಗೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಿ ಮುಂದುವರಿಯಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂì ಆದ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು.
ಎಚ್ಚರಿಕೆಯ ಹೆಜ್ಜೆ: ಇನ್ನೊಂದೆಡೆ, ಕಾಂಗ್ರೆಸ್ ಶಾಸಕರ ಬಡಿದಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಚ್ಚರಿಕೆಯ ಹೆಜ್ಜೆಯನ್ನಿಡುತ್ತಿದೆ ಎನ್ನಲಾಗಿದೆ. ಹೊಡೆದಾಡಿಕೊಂಡಿರುವ ಮೂವರು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದವರೇ ಆಗಿದ್ದರಿಂದ ಪ್ರಕರಣದ ಬಗ್ಗೆ ವೈಯಕ್ತಿಕವಾಗಿ ಹೆಚ್ಚು ಟೀಕೆ-ವಾಗಾಟಛಿಳಿ ನಡೆಸುವುದು ಬೇಡ. ಅದಕ್ಕಿಂತ ಪಕ್ಷ ಹಾಗೂ ಸರ್ಕಾರದ ಮೇಲೆ ದಾಳಿ ಮಾಡುವುದು ಸೂಕ್ತ ಎಂಬ ಅಭಿಪ್ರಾಯವೂ ಪಕ್ಷದಲ್ಲಿ ಇದೆ ಎಂದು ಹೇಳಲಾಗಿದೆ. ಒಟ್ಟಾರೆ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರ ಬಡಿದಾಟ ಪ್ರಕರಣದಿಂದ ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ವಾಕ್ಸಮರಕ್ಕೆ ಹೊಸ ವಿಷಯ ಸಿಕ್ಕಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ