ಕೇತೇಶ್ವರ ಮಹಾಮಠಕ್ಕೆ ನೂತನ ಸ್ವಾಮೀಜಿ
Team Udayavani, Jan 21, 2019, 1:47 AM IST
ದಾವಣಗೆರೆ: ಚಿತ್ರದುರ್ಗದ ಶ್ರೀ ಕೇತೇಶ್ವರ ಮಹಾಮಠದ ನೂತನ ಪೀಠಾಧಿಪತಿಗಳಾಗಿ ಇಮ್ಮಡಿ ಬಸವ ಮೇದಾರ ಕೇತೇಶ್ವರ ಶ್ರೀ ಭಾನುವಾರ ದೀಕ್ಷೆ ಸೀÌಕರಿಸಿದರು. ಮೇದಾರಸಮುದಾಯದ ಕುಲಗುರುಗಳನ್ನಾಗಿ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿಗೆ ಶ್ರೀ ಶಿವ ಮೂರ್ತಿ ಮುರುಘಾ ಶರಣರು ದಾವಣಗೆರೆಯ ಶಿವಯೋಗಾಶ್ರಮದಲ್ಲಿ ಭಾನುವಾರ ನಡೆದ ಸಹಜ ಶಿವ ಯೋಗ ಕಾರ್ಯ ಕ್ರಮದಲ್ಲಿ ಲಿಂಗದೀಕ್ಷೆ ನೀಡಿದರು.
ಆರಂಭದಲ್ಲಿ ಶ್ರೀ ಶಿವಮೂರ್ತಿ ಮುರು ಘಾಶರಣರಿಗೆ ದೀರ್ಘದಂಡ ನಮಸ್ಕಾರ ಹಾಕಿದ ನೂತನ ಶ್ರೀಗಳು, ನನಗೆ ಕಾವಿ ದೀಕ್ಷೆ ಕೊಡಿ ಎಂದು ಕೇಳಿಕೊಂಡರು. ನಂತರ ಕಾವಿಧಾರಣೆ, ವಿಭೂತಿ ಧಾರಣೆ ನಡೆಯಿತು.
ಆಮೇಲೆ ಪ್ರಣವ ಸಂಬಂಧ, ಆಜ್ಞಾಚಕ್ರ ಉದ್ದೀಪನ, ಲಿಂಗದೀಕ್ಷೆ, ಮಂತ್ರೋಪದೇಶ, ಲಿಂಗಮಜ್ಜನ, ಶಿವಯೋಗದ ವಿಧಿವಿಧಾನಗಳನ್ನು ತಿಳಿಸಿ ದೀಕ್ಷಾ ಸಂಸ್ಕಾರ ನೀಡಿದರು. ಪೂಜಾ ಕಾರ್ಯಕ್ರಮಗಳ ಬಗ್ಗೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ನಿರೂಪಣೆ ಮಾಡಿದರು.
ದೀಕ್ಷೆ ಸ್ವೀಕರಿಸಿದ ಶ್ರೀ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿ ಮಾತನಾಡಿ, ಚಿತ್ರದುರ್ಗ ತಮ್ಮ ಊರಾಗಿದ್ದು, ತಂದೆ ಭರಮಪ್ಪ, ತಾಯಿ ಶಾಂತವ್ವ ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ರಿಹೋಗಿದ್ದಾರೆ. ಈಗ ವಿರಕ್ತ ಮಠದಲ್ಲಿ ಇದ್ದುಕೊಂಡು ಬಿ.ಎ.ವ್ಯಾಸಂಗ ಮಾಡುತ್ತಿದ್ದು,ಮುಂದೆ ಬಸವತತ್ವ ಪ್ರಚಾರ ಮಾಡುವೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ