ಬಾದಾಮಿ ಬನಶಂಕರಿ ಮಹಾರಥೋತ್ಸವ ಇಂದು
Team Udayavani, Jan 21, 2019, 2:00 AM IST
ಬಾದಾಮಿ: ಇಲ್ಲಿಯ ಇತಿಹಾಸ ಪ್ರಸಿದ್ಧ ಬಾದಾಮಿ ಬನಶಂಕರಿ ಜಾತ್ರಾ ಮಹೋತ್ಸವ ನಿಮಿತ್ತ ಜ.21ರಂದು ಸಂಜೆ 5 ಗಂಟೆಗೆ ನಾಡಿನ ಲಕ್ಷಾಂತರ ಭಕ್ತ ಸಮೂಹದ ಮಧ್ಯೆ ಮಹಾರಥೋತ್ಸವ ಜರುಗಲಿದೆ. ಜ.25ರಂದು ಕಳಸ ಇಳಿಯುವ ಕಾರ್ಯಕ್ರಮ ಜರುಗಲಿದೆ. ನಿರಂತರ ಒಂದು ತಿಂಗಳ ಕಾಲ ನಡೆಯುವ ಜಾತ್ರೆಗೆ ಉತ್ತರ ಕರ್ನಾಟಕ ಸೇರಿ ಆಂಧ್ರ, ಮಹಾರಾಷ್ಟ್ರ, ತಮಿಳುನಾಡು ರಾಜ್ಯದಿಂದಲೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಬಾದಾಮಿಯಿಂದ 5 ಕಿ.ಮೀ. ದೂರದಲ್ಲಿರುವ ಬನಶಂಕರಿ ಕ್ಷೇತ್ರ, ಪ್ರಾಚೀನ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಕ್ರಿ.ಶ.1019ರ ರಾಷ್ಟ್ರಕೂಟರ ಕಾಲದ ಶಾಸನದಲ್ಲಿ ಇದನ್ನು “ಬನದದೇವಿ’ ಎಂದು ಬಣ್ಣಿಸಲಾಗಿದೆ. ಈ ದೇವಾಲಯ ಇದಕ್ಕೂ ಮೊದಲೇ ಅಸ್ತಿತ್ವದಲ್ಲಿರುವ ಸಾಧ್ಯತೆಯಿದೆ. ಕ್ರಿ.ಶ.1533ರ ವಿಜಯನಗರ ಅಚ್ಯುತರಾಯನ ಶಾಸನದಲ್ಲೂ ದೇವಿಯನ್ನು “ಬನದ ಮಹಾಮಾಯೆ’ಎಂದು ಕರೆಯಲಾಗಿದೆ. ಬನಶಂಕರಿಯಲ್ಲಿ ನಿತ್ಯ ಅನ್ನದಾಸೋಹ ವ್ಯವಸ್ಥೆಯಿದೆ.
ಜಾತ್ರೆಯಲ್ಲಿ 12 ನಾಟಕ ಕಂಪನಿಗಳು ನಾಟಕಪ್ರದರ್ಶನ ನೀಡಲಿದ್ದು, ಅನೇಕ ಸಿನೆಮಾಗಳೂ ಪ್ರದರ್ಶನಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ