ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತಸಾಗರ; 60ಕ್ಕೂ ಹೆಚ್ಚು ಕಡೆ ಅನ್ನದಾಸೋಹ
Team Udayavani, Jan 22, 2019, 6:05 AM IST
ತುಮಕೂರು:ಕಾಯಕಯೋಗಿ, ಸಾಮಾಜಿಕ ನ್ಯಾಯದ ಹರಿಹಾರ, ತ್ರಿವಿಧ ದಾಸೋಹಿ, ಶೈಕ್ಷಣಿಕ ಜ್ಯೋತಿ, ನಡೆದಾಡುವ ದೇವರು ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ(111ವರ್ಷ) ಲಿಂಗಶರೀರದ ಅಂತಿಮ ದರ್ಶನ ಪಡೆಯಲು ಭಕ್ತಸಾಗರವೇ ಹರಿದು ಬರತೊಡಗಿದೆ. ಸಿದ್ದಗಂಗಾ ಮಠದತ್ತ ಅಪಾರ ಜನಸ್ತೋಮ ಹರಿದು ಬರುತ್ತಿದ್ದ ಹಿನ್ನೆಲೆಯಲ್ಲಿ ಸಂಜೆ 6ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.
ಬೆಂಗಳೂರಿನಿಂದ ವಿಶೇಷ ರೈಲುಗಳಲ್ಲಿ, ತುಮಕೂರಿನ ಹಾಗೂ ಸುತ್ತಮುತ್ತ ಹಳ್ಳಿಗಳಿಂದ ಜನರು ಬಸ್ ಗಳಲ್ಲಿ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ತುಮಕೂರಿನ ಹೊರವಲಯದಲ್ಲಿಯೇ ವಾಹನಗಳಿಗೆ ತಡೆಯೊಡ್ಡಲಾಗುತ್ತಿದ್ದು, ಅಲ್ಲಿಂದ ಜನ ಮಠದತ್ತ ಆಗಮಿಸುತ್ತಿದ್ದಾರೆ.
ಅಂತಿಮ ದರ್ಶನ ಪಡೆಯಲು ಐದು ಕಿಲೋ ಮೀಟರ್ ಗಿಂತಲೂ ಹೆಚ್ಚು ಉದ್ದದ ಭಕ್ತರ ಸಾಲು ಕಂಡು ಬಂದಿದೆ. ತುಮಕೂರಿನ ಹೈವೇಯ ಇಕ್ಕೆಲಗಳಲ್ಲಿಯೂ 60ಕ್ಕೂ ಹೆಚ್ಚು ಕಡೆ ಅನ್ನ ದಾಸೋಹ ನಡೆಸಲಾಗುತ್ತಿದೆ. ಬೆಳಗ್ಗೆ ಕೂಡಾ ಯಾವುದೇ ಭಕ್ತರಿಗೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಉಪ್ಪಿಟ್ಟು, ಕೇಸರಿಬಾತ್, ಅನ್ನಸಾಂಬಾರ್, ರೈಸ್ ಬಾತ್ ವ್ಯವಸ್ಥೆ ಬೆಳಗ್ಗೆ ಭಕ್ತರಿಗೆ ಮಾಡಿಕೊಡಲಾಗಿತ್ತು. ತುಮಕೂರಿನಾದ್ಯಂತ ಅಂಗಡಿ, ಮುಂಗಟ್ಟು ಮುಚ್ಚಿದ್ದು ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ