ಗದ್ದುಗೆಯಲ್ಲಿ ಕ್ರಿಯಾಸಮಾಧಿ ವಿಧಾನ ಶುರು; 4ಗಂಟೆವರೆಗೂ ಅಂತಿಮ ದರ್ಶನ
Team Udayavani, Jan 22, 2019, 6:59 AM IST
ತುಮಕೂರು: ಶಿವೈಕ್ಯರಾದ ತುಮಕೂರು ಸಿದ್ದಗಂಗಾಶ್ರೀಗಳ(111ವರ್ಷ) ಲಿಂಗಶರೀರದ ಕ್ರಿಯಾ ಸಮಾಧಿ ವಿಧಿ ವಿಧಾನ ಆರಂಭಗೊಂಡಿದೆ. ಸೋಮವಾರ ಸಂಜೆ 4ಗಂಟೆ ನಂತರ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ.
ಹಳೆ ಮಠದಲ್ಲಿ ಉದ್ದಾನ ಶಿವಯೋಗಿಗಳ ಗದ್ದುಗೆ ಪಕ್ಕದಲ್ಲೇ ಶ್ರೀಗಳ ಕ್ರಿಯಾ ಸಮಾಧಿಗೆ ಸುಮಾರು 20ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ವಿಧಿವಿಧಾನ ಆರಂಭಗೊಂಡಿದೆ.
ಮತ್ತೊಂದೆಡೆ ತುಮಕೂರು ಸಿದ್ದಗಂಗಾಮಠದತ್ತ ಲಕ್ಷಾಂತರ ಭಕ್ತರು ಹರಿದು ಬಡತೊಡಗಿದ್ದು, ಈ ಹಿನ್ನೆಲೆಯಲ್ಲಿ ಸಂಜೆ 6ಗಂಟೆವರೆಗೂ ಶ್ರೀಗಳ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ. ಆ ಬಳಿಕವೇ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ.
ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಭಕ್ತರು ಕೂಡಾ ಸಹಕರಿಸಬೇಕು. ಕ್ರಿಯಾ ವಿಧಿವಿಧಾನವನ್ನು ಎಲ್ ಇಡಿ ಪರದೆ ಮೇಲೆ ತೋರಿಸಲಾಗುತ್ತದೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ