ಸಾರ್ವಜನಿಕರಿಗೆ ದೇವರ ದರ್ಶನ ಸಮಾಪ್ತಿ; 15 ನಿಮಿಷಗಳ ಅಂತಿಮ ಮೆರವಣಿಗೆ


Team Udayavani, Jan 22, 2019, 11:32 AM IST

devaru.jpg

ತುಮಕೂರು: ತ್ರಿವಿಧ ದಾಸೋಹದ ಕಾಯಕ ಯೋಗಿ, ಶತಾಯುಷಿ, ಡಾ.ಶಿವಕುಮಾರಸ್ವಾಮೀಜಿಯ ಲಿಂಗ ಶರೀರದ ಸಾರ್ವಜನಿಕರ ಅಂತಿಮ ದರ್ಶನ ಮುಕ್ತಾಯಗೊಂಡಿದೆ. ಆದರೆ ಇನ್ನೂ ಸಾವಿರಾರು ಭಕ್ತರು ಅಂತಿಮ ದರ್ಶನ ಪಡೆಯಲು ಸಾಧ್ಯವಾಗಿಲ್ಲ. ಏತನ್ಮಧ್ಯೆ ರುದ್ರಾಕ್ಷಿ ರಥದಲ್ಲಿ ತ್ರಿವಿಧ ದಾಸೋಹಿ, ಡಾ.ಸಿದ್ದಗಂಗಾಶ್ರೀಗಳ ಲಿಂಗಶರೀರದ ಅಂತಿಮ ಮೆರವಣಿಗೆ ಪ್ರಾರಂಭವಾಗಿದೆ.

ಯಾರೂ ನೂಕುನುಗ್ಗಲು ಮಾಡದೇ ತಾಳ್ಮೆಯಿಂದ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡ ಮಠದ ಆಡಳಿತ ಮಂಡಳಿಯವರು ಒಳಗಡೆ ಇದ್ದ ಸಾರ್ವಜನಿಕರಿಗೆ ಮಾತ್ರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು, ಶ್ರೀಗಳು ಎಲ್ಲರ ಮನದಲ್ಲಿಯೇ ನೆಲೆಸಿದ್ದಾರೆ ಎಂದು ಸಾರ್ವಜನಿಕ ದರ್ಶನ ಮುಕ್ತಾಯಗೊಳಿಸಿದ್ದಾರೆ.

ಆರು ಅಡಿ ಎತ್ತರದ ತೇರಿನಲ್ಲಿ ರುದ್ರಾಕ್ಷಿ ಪಲ್ಲಕ್ಕಿ ಒಳಗೆ ಸಿದ್ದಗಂಗಾಶ್ರೀಗಳ ಲಿಂಗಶರೀರವನ್ನು ಇಟ್ಟು ಸುಮಾರು 400 ಮೀಟರ್ ದೂರದವರೆಗೆ ಮೆರವಣಿಗೆ ಮೂಲಕ ಕ್ರಿಯಾ ಸಮಾಧಿ ಸ್ಥಳಕ್ಕೆ ತರಲಾಯಿತು. ಶಿವೈಕ್ಯ ಶರೀರದ ಮೆರವಣಿಗೆ ಮುಂದೆ ಸುಮಾರು 400ಕ್ಕೂ ಅಧಿಕ ಸ್ವಾಮೀಜಿಗಳು ಭಾಗವಹಿಸಿದ್ದರು.

ಮಠದ ಗೇಟ್ ಬಳಿ ಭಕ್ತರು, ಪೊಲೀಸರ ನಡುವೆ ವಾಗ್ವಾದ:

ಲಿಂಗೈಕ್ಯರಾದ ಡಾ.ಶಿವಕುಮಾರಸ್ವಾಮೀಜಿಗಳ ಲಿಂಗಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ 4.30ರವರೆಗೂ ಅವಕಾಶ ಮಾಡಿಕೊಡಲಾಗಿತ್ತು. ಆದರೂ ಸಹಸ್ರಾರು ಭಕ್ತರು ಇದ್ದಿದ್ದರಿಂದ ಸಾರ್ವಜನಿಕರ ದರ್ಶನ ಅವಕಾಶವನ್ನು ಅಂತ್ಯಗೊಳಿಸಲಾಗಿತ್ತು. ಈ ನಿಟ್ಟಿನಲ್ಲಿ ತಮಗೆ ಬುದ್ದಿಗಳ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಿ ಎಂದು ಮಠದ ಗೇಟ್ ಹೊರಭಾಗದಲ್ಲಿ ಜಮಾಯಿಸಿದ್ದ ಭಕ್ತರು ಪೊಲೀಸರು ಜತೆ ವಾಗ್ವಾದ ನಡೆಸಿದ ಘಟನೆ ನಡೆಯಿತು.

ಶ್ರೀಗಳಿಗೆ ಸರ್ಕಾರಿ ಗೌರವ ಸಲ್ಲಿಕೆ:

ಸಿದ್ದಲಿಂಗಶ್ರೀಗಳ ಲಿಂಗಶರೀರ ಗದ್ದುಗೆ ತಲುಪಿದ ಬಳಿಕ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಶ್ರೀಗಳ ಲಿಂಗಶರೀರದ ಮೇಲೆ ರಾಷ್ಟ್ರಧ್ವಜವನ್ನು ಹೊದೆಸಿ, ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.