ದಾಸೋಹ ಮೂಲಕ ಭಾವಪೂರ್ಣ ವಿದಾಯ


Team Udayavani, Jan 23, 2019, 12:40 AM IST

9.jpg

ತುಮಕೂರು: ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯರ ಮಹದಾಸೆಯಂತೆ ಅವರ ಲಿಂಗಕಾಯದ ಅಂತಿಮ ದರ್ಶನಕ್ಕೆ ಬಂದಿರುವ ಲಕ್ಷಾಂತರ ಭಕ್ತರಿಗೂ ದಾಸೋಹದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.

ದಾಸೋಹದ ನಂತರವೇ ಸಾವಿನ ಸುದ್ದಿಯನ್ನು ಘೋಷಿಸುವಂತೆ ಸೂಚಿಸಿದ್ದ ಮಹಾನ್‌ ಸಂತನಿಗೆ ದಾಸೋಹ ಸೇವೆಯ ಮೂಲಕವೇ ಅತ್ಯಂತ ಭಾವಪೂರ್ಣವಾದ ವಿದಾಯ ಮಂಗಳವಾರ ನೀಡಲಾಯಿತು.

ಗೋಸಲ ಸಿದ್ದೇಶ್ವರ ವೇದಿಕೆಯ ಮೈದಾನದಲ್ಲಿ ಶ್ರೀಗಳ ಲಿಂಗಶರೀರದ ಅಂತಿಮ ದರ್ಶನ ಪಡೆದ ಭಕ್ತರಿಗೆ ಮಠದ ಆವರಣದಲ್ಲಿ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ರೈಲು ನಿಲ್ದಾಣದ ದ್ವಾರದ ಮೂಲಕ ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಸಿದ್ಧಗಂಗಾ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಬೃಹತ್‌ ಶಾಮಿಯಾನ ಹಾಕಿ ದಾಸೋಹ ನೀಡಲಾಗಿತ್ತು. ದರ್ಶನ ಪಡೆದು ಹಳೇ ಮಠದ ಮುಖ್ಯದ್ವಾರದಿಂದ ವಾಪಸ್‌ ಹೋಗುತ್ತಿದ್ದ ಭಕ್ತರಿಗೆ ಮಠದ ಪ್ರಸಾದ ಮಂದಿರದಲ್ಲಿ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು.

ಅನ್ನ, ವಿವಿಧ ತರಕಾರಿ ಹಾಕಿರುವ ಬೇಳೆ ಸಾರು, ಪಾಯಸ ಹಾಗೂ ಮಜ್ಜಿಗೆ ಪ್ರಸಾದ ರೂಪದಲ್ಲಿ ದಾಸೋಹದಲ್ಲಿ ಭಕ್ತರಿಗೆ ನೀಡಲಾಯಿತು. ಸರಿಸುಮಾರು 12 ಲಕ್ಷ ಭಕ್ತರು ದಾಸೋಹ ಸ್ವೀಕರಿಸಿದ್ದು, ಯಾರೊಬ್ಬರಿಗೂ ತೊಂದರೆ ಆಗದಂತೆ ಅಚ್ಚುಕಟ್ಟಾಗಿ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

ದಾಸೋಹದ ವ್ಯವಸ್ಥೆಯಲ್ಲಿ ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧಿಸಲಾಗಿತ್ತು. ಅಡಕೆ ಹಾಳೆಯ ತಟ್ಟೆಗಳಲ್ಲಿ ಊಟ ನೀಡಲಾಯಿತು. ನೀರು ಮತ್ತು ಮಜ್ಜಿಗೆಯನ್ನು ಪೇಪರ್‌ ಕಪ್‌ಗ್ಳಲ್ಲಿ ವಿತರಿಸಲಾಯಿತು. ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆಯ ತನಕ ಸರತಿ ಸಾಲಿನಲ್ಲಿ ಲಿಂಗ ಕಾಯದ ದರ್ಶನಕ್ಕೆ ನಿಂತಿದ್ದ ಭಕ್ತರಿಗೆ ಮಠದ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಕುಡಿಯುವ ನೀರಿನ ಪೂರೈಕೆ ಮಾಡುತ್ತಿದ್ದರು.

ನಗರಾದ್ಯಂತ ದಾಸೋಹ: ತುಮಕೂರು ನಗರದಾದ್ಯಂತ ವಿವಿಧ ಸಂಘಟನೆಗಳು, ಹೋಟೆಲ್‌ಗ‌ಳ ಮಾಲೀಕರು ಸಾರ್ವಜನಿಕರಿಗೆ, ಅಂತಿಮ ದರ್ಶನಕ್ಕೆ ಬಂದಿರುವ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಿದ್ದರು. ಮಂಗಳವಾರ ನಗರದ ವಿವಿಧ ಬಡವಾಣೆ, ಮುಖ್ಯರಸ್ತೆ, ಅಡ್ಡರಸ್ತೆಗಳಲ್ಲಿ ಯುವಕರ ತಂಡ, ಸಂಘ ಸಂಸ್ಥೆಗಳು ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟ ನೀಡಿದರು.

ಅಡ್ಡಿಯಾಗದಂತೆ ಪಾರ್ಕಿಂಗ್‌ ವ್ಯವಸ್ಥೆ

ಶ್ರೀಗಳ ಅಂತಿಮ ದರ್ಶನಕ್ಕೆ ಸಾಗರದಂತೆ ಭಕ್ತ ಸಮೂಹ ಸೇರಿತ್ತು. ರಾಜ್ಯದ ಬೇರೆ ಬೇರೆ ಭಾಗದಿಂದ ಬಂದವರಿಗೆ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಮಠದ ಹೊಲ, ಜ್ಯೂನಿಯರ್‌ ಕಾಲೇಜು ಮೈದಾನ, ಎಪಿಎಂಸಿ ಯಾರ್ಡ್‌, ಬಸವೇಶ್ವರ ದೇವಾಲಯ ಹಿಂಭಾಗ, ಇಸ್ರೋ ಅವರಣ ಮೊದಲಾದ ಭಾಗದಲ್ಲಿ ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿತ್ತು. ಇಲ್ಲಿಂದ ಭಕ್ತರನ್ನು ಶ್ರೀ ಮಠಕ್ಕೆ ಕರೆದುಕೊಂಡು ಹೋಗಲು ಪ್ರತ್ಯೇಕ ಬಸ್‌ಗಳನ್ನು ಜಿಲ್ಲಾಡಳಿತದಿಂದ ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.