ಹಣ ಕೊಡುವೆ ನಿಲ್ಲಿಸು ಎಂದರೂ ಬೋಟ್ ನಿಲ್ಲಿಸಲಿಲ್ಲ!


Team Udayavani, Jan 23, 2019, 1:10 AM IST

5.jpg

ಕಾರವಾರ: ‘ನಾನು ಹದಿನೈದು ವರ್ಷದಿಂದ ಫಿಶಿಂಗ್‌ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದೇನೆ. ಪರ್ಶಿಯನ್‌ ಬೋಟ್‌ನಲ್ಲಿ ಕೆಲಸ ಮಾಡಿದ ಅನುಭವವಿದೆ. ಸಂಬಂಧಿಕರಾದ ಪರುಶುರಾಮ ಮತ್ತು ಪತ್ನಿ ಭಾರತಿ, ಸಹೋದರನ ಪತ್ನಿ ನಿರ್ಮಿಲಾ ತಮ್ಮ ಮಕ್ಕಳೊಂದಿಗೆ ಆಗಮಿಸಿದ್ದರು. ಎಲ್ಲರೂ ಸೇರಿ ಹತ್ತು ಜನ. ಜೊತೆಗೆ ನಾನು, ನನ್ನ ಪತ್ನಿ ಸೌಭಾಗ್ಯ ಇದ್ದೆವು. ಆದರೆ ನಾನು, ಪತ್ನಿ ಹಾಗೂ ಸಂಬಂಧಿ ಪರುಶುರಾಮ್‌ ಅವರ ಮಗ ಗಣೇಶ್‌ ಬಿಟ್ಟರೆ ಉಳಿದವರ್ಯಾರೂ ಬದುಕಿ ಉಳಿಯಲಿಲ್ಲ’ ಎಂದು ಮೃತ ಪರುಶುರಾಮ ಅವರ ಅತ್ತೆ ಮಗ ಕನಕ್ಕಪ್ಪ ಬಾಳಲಕೊಪ್ಪ ಕಣ್ಣೀರಾದರು.

‘ನನ್ನ ಕಣ್ಣೆದುರೇ ಎಲ್ಲರೂ ತೇಲಿ ಹೋದರು. ಪರುಶುರಾಮ ಅವರ ಪತ್ನಿ ಭಾರತಿ ನೀರಲ್ಲಿ ಮುಳುಗಿ ಮೃತಪಟ್ಟರು. ಏನೂ ಮಾಡಲಾಗದ ಸ್ಥಿತಿಯಲ್ಲಿ ನಾವಿದ್ದೆವು. ಸಮುದ್ರದ ಅಲೆಯ ರಭಸಕ್ಕೆ ನಾವು ಬದುಕಿ ಉಳಿದದ್ದೇ ಹೆಚ್ಚು’ ಎಂದು ಕರಾಳ ಘಟನೆ ವಿವರಿಸಿದರು.

ಹೆಚ್ಚು ಜನರನ್ನು ಹಾಕಿದ್ದೇ ಕಾರಣ: ‘ನಾವು ಕೂರ್ಮಗಡ ನರಸಿಂಹ ದೇವರ ಜಾತ್ರೆಗೆ ಬೈತಖೋಲದಿಂದ ತೆರಳಿದ್ದೆವು. ದೇವರ ದರ್ಶನದ ನಂತರ ಕಾರವಾರಕ್ಕೆ ಮರಳಲು ದೋಣಿಗಾಗಿ ಕಾಯುತ್ತಿದ್ದೆವು. ಸಣ್ಣ ಡಿಂಗಿಯಲ್ಲಿ 15 ಜನ ಹತ್ತಿರುವುದು ಕಂಡ ನನ್ನ ಅತ್ತಿಗೆ ಭಾರತಿ ಅವರು ಸಣ್ಣ ಮಕ್ಕಳಿದ್ದಾರೆ. ಚಿಕ್ಕ ದೋಣಿ ಬೇಡ ಎಂದರು. ಅಷ್ಟರಲ್ಲಿ ಯಾಂತ್ರಿಕೃತ ಬೋಟ್ ಬಂತು. ಅದರಲ್ಲಿ ಸೀಟ್ ಕುಳಿತುಕೊಳ್ಳುವಂತೆ ಇದ್ದ ಕಾರಣ ಕುಟುಂಬದವರೆಲ್ಲಾ ದೇವಭಾಗ ಅಡ್ವೆಂಚರ್‌ ಬೋಟಿಂಗ್‌ ಸೆಂಟರ್‌ ಎಂದು ಬರೆದಿರುವ ಬೋಟ್ ಹತ್ತಿದೆವು. ಅದರಲ್ಲಿ 12ಕ್ಕೂ ಹೆಚ್ಚು ಜನ ಇದ್ದರು. ಆ ಬೋಟ್ ಕೋಡಿಭಾಗ ಧಕ್ಕೆಗೆ ಹೋಗುವುದಿತ್ತು. ನಾವು ಬೈತಖೋಲ್‌ಗೆ ಬರಬೇಕಿತ್ತು.’

‘ನಾನು ಬೋಟ್ ಇಳಿಯುವಂತೆ ಪರುಶುರಾಮ ಮತ್ತು ಭಾರತಿ ಅವರಿಗೆ ಹೇಳಿದೆ. ಆದರೆ ಬೋಟ್ ಚಾಲಕ ಕೆಲವು ಪ್ರಯಾಣಿಕರನ್ನು ಕೋಡಿಭಾಗದಲ್ಲಿ ಇಳಿಸಿ, ಬೈತಖೋಲ್‌ಕ್ಕೆ ಬಿಡುವುದಾಗಿ ಹೇಳಿದ. ಸ್ವಲ್ಪ ದೂರ ಬೋಟ್ ಚಲಿಸಿದ ನಂತರ ಬೈತಖೋಲ್‌ಗೆ ಹೋಗುವ ದೊಡ್ಡ ಬೋಟ್ ಬಂತು. ಆಗ ಹಣ ಕೊಡುವೆ. ಬೋಟ್ ನಿಲ್ಲಿಸಿ, ನಾವು ಬೈತಖೋಲ್‌ಕ್ಕೆ ಹೋಗುವ ಬೋಟ್ ಹತ್ತುವುದಾಗಿ ವಿನಂತಿಸಿದೆ. ಆದರೂ ಬೋಟ್ ಚಾಲಕ ಕೇಳಲಿಲ್ಲ. ನಾನೇ ಬಿಡುತ್ತೇನೆ ಎನ್ನುತ್ತಾ ದೋಣಿಯನ್ನು ವೇಗವಾಗಿ ಚಲಾಯಿಸಿದ. ಸಮುದ್ರದ ಅಲೆ ರಭಸವಿದ್ದ ಕಾರಣ ದೊಡ್ಡ ಅಲೆಗೆ ಸಿಕ್ಕ ಬೋಟ್ ಪಲ್ಟಿಯಾಯಿತು. ಬೋಟ್ ಮೇಲ್ಛಾವಣಿಗೆ ಕಟ್ಟಿದ ರೂಫ್‌ ಭಾರತಿ ಅವರ ತಲೆಗೆ ಬಡಿಯಿತು. ಮಕ್ಕಳು ಸಮುದ್ರದಲ್ಲಿ ಮುಳುಗಿದರು. ಕ್ಷಣಾರ್ಧದಲ್ಲಿ ಎಲ್ಲವೂ ದುರಂತಮಯವಾಯಿತು. ಮಕ್ಕಳನ್ನು ಬದುಕಿಸಲು ಯತ್ನಿಸಿದೆ. ಆದರೆ, ಆಗಲಿಲ್ಲ. ಇನ್ನೊಂದು ಬೋಟ್‌ನವರು ಗಣೇಶ್‌ ಹಾಗೂ ನನ್ನ ಪತ್ನಿ ಸೌಭಾಗ್ಯಳನ್ನು ರಕ್ಷಿಸಿದ್ದರು. ನಾನು ಸಹ ಸೋತು ಹೋಗಿದ್ದೆ. ಬೋಟ್ನಿಂದ ಬೀಸಿದ ಹಗ್ಗ ಹಿಡಿದು ಬದುಕಿಕೊಂಡೆ’ ಎಂದು ಕರಾಳ ಘಟನೆಯನ್ನು ನೆನಪು ಮಾಡಿಕೊಂಡರು.

ನಾಗರಾಜ್‌ ಹರಪನಹಳ್ಳಿ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.