ಸಚಿವ ಸಾ.ರಾ.ಮಹೇಶ್ ದರ್ಪ
Team Udayavani, Jan 24, 2019, 1:12 AM IST
ತುಮಕೂರು: ಸಿದ್ಧಗಂಗಾ ಶ್ರೀಗಳ ಅಂತಿಮ ದರ್ಶನ ಹಾಗೂ ಅಂತ್ಯಸಂಸ್ಕಾರದ ವೇಳೆ ನೀಡಿದ ಪೊಲೀಸ್ ಬಂದೋಬಸ್ತ್ ಕುರಿತು ಸ್ವತ: ಸಿಎಂ ಕುಮಾರಸ್ವಾಮಿಯವರೇ ಮೆಚ್ಚುಗೆ ವ್ಯಕ್ತಪಡಿಸಿ ಪೊಲೀಸರ ಕಾರ್ಯ ಶ್ಲಾಘಿಸಿದ್ದರು. ಆದರೆ, ಸಮರ್ಥವಾಗಿ ಬಂದೋಬಸ್ತ್ ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಐಪಿಎಸ್ ಅಧಿಕಾರಿಯ ಮೇಲೆ ಸಚಿವ ಸಾ.ರಾ.ಮಹೇಶ್ ನಾಲಿಗೆ ಹರಿ ಬಿಟ್ಟು, ಅವಾಚ್ಯ ಪದಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಮಹಿಳಾ ಅಧಿಕಾರಿ ಸಚಿವರ ಮಾತಿಗೆ ಕಣ್ಣೀರು ಹಾಕಿದ್ದಾರೆ.
ಮಂಗಳವಾರ ನಡೆದ ಶ್ರೀಗಳ ಅಂತ್ಯ ಸಂಸ್ಕಾರದ ವೇಳೆ ಗದ್ದುಗೆ ಬಳಿ ಸೀಮಿತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿತ್ತು. ಈ ವೇಳೆ ಶ್ರೀಗಳ ಪಾರ್ಥಿವ ಶರೀರ ಕ್ರಿಯಾ ಸಮಾಧಿ ಪ್ರವೇಶಿಸುತ್ತಿದ್ದಂತೆಯೇ ವಿಐಪಿಗಳ ಬರುವಿಕೆ ಹೆಚ್ಚಾಗಿತ್ತು. ಈ ನೂಕು ನುಗ್ಗಲಿನಲ್ಲಿ ಗೊಂದಲ ಉಂಟಾಯಿತು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಸಚಿವ ಸಾ.ರಾ.ಮಹೇಶ್ ಹಾಗೂ ಐಪಿಎಸ್ ಅಧಿಕಾರಿ ಡಾ.ದಿವ್ಯಾ ವಿ.ಗೋಪಿನಾಥ್ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ಈ ವೇಳೆ, ಸಚಿವರ ಮಾತಿಗೆ ಡಾ.ದಿವ್ಯಾ ವಿ.ಗೋಪಿನಾಥ್ ಕಣ್ಣೀರು ಹಾಕುತ್ತಲೇ ಕರ್ತವ್ಯ ನಿರ್ವಹಿಸಿದರು. ನಂತರ ಈ ವಿಚಾರ ಎಲ್ಲೆಡೆ ಹರಡಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ದಿವ್ಯಾ ವಿ.ಗೋಪಿನಾಥ್, ಒಳಗಡೆ 50 ವಿಐಪಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಆ ಪಟ್ಟಿಯಲ್ಲಿ ಸಚಿವರಾದ ಸಾ.ರಾ.ಮಹೇಶ್ ಅವರ ಹೆಸರು ಇರಲಿಲ್ಲ. ನಂತರ ಅವರು ಸಚಿವರು ಎಂದು ತಿಳಿದ ಮೇಲೆ ಎಲ್ಲಾ ಸರಿಹೋಯಿತು. ನನ್ನ ಬಗ್ಗೆ ಅವರು ಏನು ಹೇಳಿದರೋ ನನಗೆ ಗೊತ್ತಿಲ್ಲ ಎಂದು ಹೇಳಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಲಯ ಐಜಿಪಿ ಬಿ.ದಯಾನಂದ್, ಇಂಥ ದೊಡ್ಡ ಕಾರ್ಯಕ್ರಮದಲ್ಲಿ ಈ ರೀತಿಯ ಘಟನೆ ನಡೆಯುವುದು ಸಾಮಾನ್ಯ. ಈಗ ಎಲ್ಲವೂ ಸರಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ