ತಮಗೆ ಬೇಕಾದವರಿಗೆ ‘ಭಾರತ ರತ್ನ’: ಖರ್ಗೆ
Team Udayavani, Jan 27, 2019, 12:30 AM IST
ಕಲಬುರಗಿ: ಡಾ| ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿದ್ದರೂ ಕೇಂದ್ರ ಸರ್ಕಾರ ಗಮನಕ್ಕೆ ತೆಗೆದುಕೊಳ್ಳದೇ ತಮಗೆ ಬೇಕಾದವರಿಗೆ ಪ್ರಶಸ್ತಿ ನೀಡಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧಗಂಗಾ ಶ್ರೀಗಳಿಗೆ ‘ಭಾರತ ರತ್ನ’ ಸಿಗಬೇಕೆಂದು ರಾಜ್ಯದ ಸಂಸದರು ಹಾಗೂ ಇದಕ್ಕೂ ಮುನ್ನ ಕರ್ನಾಟಕ ಸರ್ಕಾರವೂ ಮನವಿ ಮಾಡಿತ್ತು. ಶಿವಕುಮಾರ ಸ್ವಾಮೀಜಿಗಳು ಶಿಕ್ಷಣ, ದಾಸೋಹದಂತಹ ಅನೇಕ ಮಹತ್ತರ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ಭಾರತ ರತ್ನ ಸಿಗಬೇಕೆಂಬುದು ನಮ್ಮೆಲ್ಲರ ಆಸೆಯಾಗಿತ್ತು. ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದೇ ಇರುವುದು ನೋವಿನ ಸಂಗತಿಯಾಗಿದೆ. ಅಷ್ಟೇ ಅಲ್ಲದೇ ಕರ್ನಾಟಕದ ಜನತೆಗೆ ಅವಮಾನ ಮಾಡಿದಂತಾಗಿದೆ ಎಂದರು.