ಕಲ್ಲಿನಿಂದ ಜಜ್ಜಿ ನವಜಾತ ಶಿಶು ಹತ್ಯೆ
Team Udayavani, Feb 3, 2019, 1:22 AM IST
ಚಿಕ್ಕಮಗಳೂರು: ಒಂದು ದಿನದ ನವಜಾತ ಶಿಶುವನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಅಮಾನವೀಯ ಕೃತ್ಯ ನಗರದಲ್ಲಿ ನಡೆದಿದೆ. ನಗರದ ಬೇಲೂರು ರಸ್ತೆಯ ಹಳೇ ತಾಲೂಕು ಕಚೇರಿಯ ಬಳಿ ನವಜಾತ ಶಿಶುವಿನ ಮೃತ ದೇಹ ಪತ್ತೆಯಾಗಿದೆ.
ಹೆಣ್ಣು ಶಿಶುವನ್ನು ಬಟ್ಟೆಯಿಂದ ಸುತ್ತಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮಗು ಯಾರಿಗೆ ಸೇರಿದ್ದು, ಯಾರು ಕೊಲೆ ಮಾಡಿದ್ದಾರೆ ಎಂಬ ಯಾವ ವಿವರವೂ ತಿಳಿದು ಬಂದಿಲ್ಲ. ಬಟ್ಟೆಯಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಸಾಡಿ ಹೋಗಿದ್ದ ಶಿಶುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿ ಶಿಶುವಿನ ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.