ಮಾ. 5ರೊಳಗೆ ಸರ್ಕಾರ ಪತನ
Team Udayavani, Feb 5, 2019, 12:30 AM IST
ಹುಬ್ಬಳ್ಳಿ: ರಾಜ್ಯದಲ್ಲಿನ ಸಮ್ಮಿಶ್ರ ಸರಕಾರ ಕಂಟಕದಲ್ಲಿದ್ದು, ಸರಕಾರದಲ್ಲಿನ ಮಿತ್ರರೇ ಶತ್ರುಗಳಾಗಿ ಸರಕಾರಕ್ಕೆ ಗಂಡಾಂತರ ತರುವ ಸಾಧ್ಯತೆಯಿದೆ. ಮಾರ್ಚ್ 5ರೊಳಗೆ ಇದು ಪತನಗೊಳ್ಳಲಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಖೀಲ ಕರ್ನಾಟಕ ಜ್ಯೋತಿರ್ವಿಜ್ಞಾನ ಸಂಶೋಧನಾ ಸಂಸ್ಥೆ ಅಧ್ಯಕ್ಷ ವಿದ್ವಾನ್ ಗಣೇಶ ಹೆಗಡೆ ಭವಿಷ್ಯ ನುಡಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಯಡಿಯೂರಪ್ಪ ಜಾತಕದಲ್ಲಿ ರಾಶಾಧಿಪತಿ ಕುಜನು ಸ್ವಕ್ಷೇತ್ರದಲ್ಲಿ ಶುಭಸ್ಥಾನಕ್ಕೆ ಫೆ. 6ರಂದು ಬರಲಿದ್ದು, ಅವರಿಗೆ ಸದ್ಯ ಸಾಡೇಸಾತ್ ಶನಿ ಪೀಡೆ ಇದ್ದರೂ ರವಿಯು ಶುಭಸ್ಥನಾಗಿ ಬಂದಿರುವುದರಿಂದ ಅಧಿಕಾರ ಹೊಂದುವ ಎಲ್ಲಾ ಯೋಗಗಳಿವೆ. ಅವರು ಸಿಎಂ ಆದರೂ ಅಕ್ಟೋಬರ್ ಅಂತ್ಯವರೆಗೆ ಅನೇಕ ಕಂಟಕ, ತೊಂದರೆ ಅನುಭವಿಸಬೇಕಾಗುತ್ತದೆ. ಅಕ್ಟೋಬರ್ ನಂತರ ಸಿಎಂ ಸ್ಥಾನ ಬದಲಾವಣೆಗೆ ಒತ್ತಡ ಬಂದರೂ ನಂತರ ಅವರೇ ಸುಸೂತ್ರವಾಗಿ ಅಧಿಕಾರ ನಡೆಸಲಿದ್ದಾರೆ. ಈ ನನ್ನ ಹೇಳಿಕೆ ಸುಳ್ಳಾದರೆ ಮಾಧ್ಯಮದ ಎದುರು ಮತ್ತೆ ಬರಲ್ಲ. ಸಾರ್ವಜನಿಕವಾಗಿ ಬಹಿರಂಗ ಕ್ಷಮೆ ಕೋರುವೆ ಎಂದರು.
ಮತ್ತೆ ಮೋದಿ ಪ್ರಧಾನಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 285ಕ್ಕೂ ಅಧಿಕ ಸ್ಥಾನ ಪಡೆಯುವ ಮೂಲಕ ನರೇಂದ್ರ ಮೋದಿ ಮತ್ತೆ ಪ್ರಧಾನ ಮಂತ್ರಿ ಆಗುವುದು ಖಚಿತ. ಮಾರ್ಚ್ ನಂತರ ಎಲ್ಲರೂ ಆಶ್ಚರ್ಯ ಪಡುವ ರೀತಿಯಲ್ಲಿ ಪ್ರಧಾನಿ ಮೋದಿ ಅವರ ಪ್ರತಿಭೆ ಶೇ.75 ಜನಪ್ರಿಯತೆ ಬೆಳೆಯಲಿದೆ. ಏ.5ರಿಂದ ಮೇ 15ರೊಳಗೆ ಲೋಕಸಭೆ ಚುನಾವಣೆ ನಡೆದರೆ ಖಂಡಿತಾ ಮೋದಿ ಪ್ರಧಾನಿಯಾಗುವ ಸಾಧ್ಯತೆಯನ್ನು ಅವರ ಜಾತಕ ಸೂಚಿಸುತ್ತದೆ. ರಾಜ್ಯದಲ್ಲಿ ಬಿಜೆಪಿ 15ಕ್ಕಿಂತ ಅಧಿಕ ಸ್ಥಾನ ಪಡೆಯಲಿದೆ. ಧಾರವಾಡ ಸಂಸದ ಪ್ರಹ್ಲಾದ ಜೋಶಿ ಈ ಬಾರಿಯ ಚುನಾವಣೆಯಲ್ಲಿ ಸುಲಭವಾಗಿ ಗೆಲುವು ಸಾಧಿಸುವ ಅವಕಾಶ ಕಡಿಮೆ. ಅವರು ಹೆಚ್ಚಿನ ಪರಿಶ್ರಮ ಪಡಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ