ಬಿಜೆಪಿ ಸಭಾತ್ಯಾಗ , ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ
Team Udayavani, Feb 9, 2019, 12:40 AM IST
ಬೆಂಗಳೂರು: ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ದ ವಿಪಕ್ಷ ಬಿಜೆಪಿ ಬಜೆಟ್ಗೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿತ್ತಾ ದರೂ ಬಜೆಟ್ ಪ್ರತಿ ಮೊದಲೇ ನೀಡದ ಕಾರಣ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ತೋರಿತು.
ಸದಸ್ಯರಿಗೆ ಬಜೆಟ್ ಪ್ರತಿ ನೀಡದೆ ಮುಖ್ಯಮಂತ್ರಿಯವರು ಬಜೆಟ್ ಭಾಷಣ ಮುಂದುವರಿಸಿದ್ದರಿಂದ ‘ಅಯ್ಯಯ್ಯೋ ಆನ್ಯಾಯ’ ಎಂದು ಘೋಷಣೆ ಹಾಕಿ ಸರಕಾರದ ವಿರುದ್ಧ ಬಿಜೆಪಿ ಅತೃಪ್ತಿ ವ್ಯಕ್ತಪಡಿಸಿತು. ಜತೆಗೆ ಕುಮಾರಸ್ವಾಮಿ ಬೆಳಗ್ಗೆ ಆಡಿಯೋ ಬಿಡುಗಡೆ ಮಾಡಿದ್ದನ್ನು ಪ್ರಸ್ತಾವಿಸಿ, ಅದರಲ್ಲಿ ಸ್ಪೀಕರ್ ವಿರುದ್ಧವೇ ಆರೋಪ ಮಾಡಲಾಗಿದೆ. ಸ್ಪೀಕರ್ ಅವರು ಉತ್ತರಿಸಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.
ಇದ್ಯಾವುದನ್ನೂ ಲೆಕ್ಕಿಸದೆ ಕುಮಾರಸ್ವಾಮಿ ಯವರು ಬಜೆಟ್ ಭಾಷಣ ಓದುವುದರಲ್ಲಿ ನಿರತರಾಗಿದ್ದರು. ಅನಂತರ ಯಡಿಯೂರಪ್ಪ ಅವರು, ಬಜೆಟ್ ಪ್ರತಿ ಸಹ ಕೊಡದೆ ಬಜೆಟ್ ಓದುತ್ತಿರುವುದು ಸರಿಯಲ್ಲ. ಇದನ್ನು ಖಂಡಿಸಿ ನಾವು ಸಭಾತ್ಯಾಗ ಮಾಡುತ್ತೇವೆ ಎಂದು ಹೊರಟರು. ಸರಕಾರದ ವಿರುದ್ಧ ಘೋಷಣೆ ಹಾಕುತ್ತಲೇ ಬಿಜೆಪಿ ಸದಸ್ಯರು ನಿರ್ಗಮಿಸಿದರು.
ಈ ಮಧ್ಯೆ ಮುಖ್ಯಮಂತ್ರಿಯವರು ಬಜೆಟ್ ಭಾಷಣ ಓದುವಾಗ ಅಪರಾಹ್ನ 2.30ರ ಸಮಯದಲ್ಲಿ ಬಿಜೆಪಿಯ ಮಾಧುಸ್ವಾಮಿ, ಕುಮಾರ ಬಂಗಾರಪ್ಪ ಅವರು ಸದನಕ್ಕೆ ಆಗಮಿಸಿ, ಬಜೆಟ್ ಪ್ರತಿ ಸೋರಿಕೆಯಾಗಿದೆ. ಆದರೂ ನೀವು ಸದಸ್ಯರಿಗೆ ನೀಡಿಲ್ಲ ಎಂದು ದೂರಿದರು. ಆದರೆ ಸ್ಪೀಕರ್ ಅವರು ಅದಕ್ಕೆ ಪ್ರತಿಕಿಯಿಸದೆ ಕುಳಿತುಕೊಳ್ಳಿ ಇಲ್ಲವೇ ಹೊರಗೆ ಹೋಗಿ ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ