ಒಂದು ಕೋಮು ಸಿದ್ದುಗೆ ಅನ್ಯಾಯ ಮಾಡಿದೆ..ಇದರಿಂದಾಗಿಯೇ ಜಲಪ್ರಳಯ!
Team Udayavani, Feb 9, 2019, 8:09 AM IST
ಮೈಸೂರು:ಎಲ್ಲ ರೀತಿಯ ಭಾಗ್ಯಗಳನ್ನು ನೀಡಿ, ಉತ್ತಮ ಆಡಳಿತ ಕೊಟ್ಟಿದ್ದ ಸಿದ್ದರಾಮಯ್ಯ ಅವರನ್ನು ಮೈಸೂರಿನಲ್ಲಿ ಒಂದು ಕೋಮುವಿನಿಂದಾಗಿ ಸೋಲುವಂತಾಗಿದೆ. ಹೀಗಾಗಿ ಸಿದ್ದರಾಮಯ್ಯನವರಿಗೆ ಅನ್ಯಾಯ ಮಾಡಿದ್ದಕ್ಕೆ ಕೊಡಗಿನಲ್ಲಿ ಜಲಪ್ರಳಯ ಆಯಿತು ಎಂದು ಕನಕ ಪೀಠದ ನಿರಂಜನಾನಂದಪುರಿ ಶ್ರೀ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಕನಕ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿಯೇ ಕಾಗಿನೆಲೆ ಶ್ರೀಗಳು ಈ ವಾಗ್ದಾಳಿ ನಡೆಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಸಿದ್ದರಾಮಯ್ಯನವರು ಒಳ್ಳೆಯ ಆಡಳಿತ ಕೊಟ್ಟಿದ್ದರು. ಒಂದು ಕೋಮಿನವರು(ಒಕ್ಕಲಿಗ) ಉದ್ದೇಶಪೂರ್ವಕವಾಗಿ ಸೋಲಿಸಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯನವರು ಜಿದ್ದು ಇಟ್ಟುಕೊಂಡಿದ್ದರೆ, ಇವತ್ತು ರಾಜ್ಯ ಸರ್ಕಾರವನ್ನು ಹಿಸುಕಿ ಹಾಕಬಹುದಿತ್ತು ಎಂದು ಹೇಳಿದರು.
ಸಿದ್ದರಾಮಯ್ಯ ಹಾಲುಮತ ಜನಾಂಗದಲ್ಲಿ ಹುಟ್ಟಿದವರು, ನೀರು ಕೇಳಿದವರಿಗೆ ಹಾಲು ಕೊಡುವ ಜನಾಂಗ ನಮ್ಮದು. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಅನ್ಯಾಯ ಮಾಡಿದ್ದಕ್ಕೆ ಕೊಡಗಿನಲ್ಲಿ ಜಲಪ್ರಳಯ ಆಗುವಂತಾಗಿದೆ. ಈ ಹಿಂದೆ ಉಡುಪಿಯಲ್ಲಿಯೂ ಕನಕದಾಸರಿಗೆ ಶ್ರೀಕೃಷ್ಣನ ದರ್ಶನ ಮಾಡಲು ಬಿಡದಿದ್ದಾಗ, ಅಂದು ಭೂಕಂಪನವಾಗಿತ್ತು. ಹಾಲುಮತದವರನ್ನು ಸೋಲಿಸಿದರೆ ಪ್ರಕೃತಿ ಕೂಡಾ ಸಹಿಸಲ್ಲ ಎಂದು ಕಾಗಿನೆಲೆಶ್ರೀಗಳು ವಾಗ್ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ