ಉದಯವಾಣಿ ಜನಪರ: ರಾಜಕೀಯ ಬಿಡಿ, ಜನರತ್ತ ನೋಡಿ… 


Team Udayavani, Feb 11, 2019, 12:30 AM IST

vidana-souda.jpg

ರಾಜ್ಯ ಹಲವು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ ನಮ್ಮ ಜನಪ್ರತಿನಿಧಿಗಳು “ಅಧಿಕಾರ’ ಉಳಿಸಲು, ಗಳಿಸಲು ನಡೆಸುತ್ತಿರುವ ಹೋರಾಟದ ನಡುವೆ ಜನರು ಅನಾಥರಾಗಿಬಿಟ್ಟಿದ್ದಾರೆ. ಸೋಮವಾರದಿಂದ ಮುಂದುವರಿಯುವ ಬಜೆಟ್‌ ಅಧಿವೇಶನದಲ್ಲಾದರೂ ರಾಜಕೀಯ ಬಿಟ್ಟು ಜನರ ಸಮಸ್ಯೆಗಳತ್ತ ಚರ್ಚೆಯಾಗಲಿ ಎನ್ನುವ ಆಶಯ ಇಡೀ ರಾಜ್ಯದ ಜನರದ್ದು. 

ಬರ ಗಂಭೀರ
ರಾಜ್ಯದ 156 ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರಕಾರ ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಸಂಪುಟ ಉಪ ಸಮಿತಿ ರಚಿಸಿ ನಾಲ್ಕು ತಂಡಗಳಾಗಿ ರಾಜ್ಯ ಪ್ರವಾಸ ಮಾಡಿ ಮಾಹಿತಿ ಪಡೆದುಕೊಂಡಿದೆ. ಆದರೆ ಈವರೆಗೂ ಪರಿಹಾರ ಕಾಮಗಾರಿ ಆರಂಭವಾಗಿಲ್ಲ. ಈ ಕುರಿತು ತುರ್ತಾಗಿ ಗಮನ ಹರಿಸಿ ವ್ಯಾಪಕ ಚರ್ಚೆ ನಡೆಯಬೇಕಿದೆ.

ಮಂಗನ ಕಾಯಿಲೆ
ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಜನರ ಜೀವಕ್ಕೆ ಕುತ್ತು ತರುತ್ತಿರುವ ಮಂಗನ ಕಾಯಿಲೆಯಿಂದ ಆ ಭಾಗದ ಸಾಮಾನ್ಯ ಜನರು ಕೈಯಲ್ಲಿ ಜೀವ ಹಿಡಿದುಕೊಂಡು ಬದುಕುತ್ತಿದ್ದಾರೆ. ಸಮರೋಪಾದಿಯಲ್ಲಿ ರೋಗ ತಡೆಗಟ್ಟಲು ರಾಜ್ಯ ಸರಕಾರ ವಿಫ‌ಲವಾಗಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಸರಕಾರ ಇದರತ್ತ ಗಮನ ನೀಡಬೇಕಾಗಿದೆ.

ಸಾಲ ಮನ್ನಾ
ರಾಜ್ಯ ಸಮ್ಮಿಶ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಯೋಜನೆ ಘೋಷಣೆ ಮಾಡಿ 8 ತಿಂಗಳು ಕಳೆದರೂ ರಾಜ್ಯದ ಎಲ್ಲ ರೈತರಿಗೆ ಇನ್ನೂ ತಲುಪಿಸಲು ಸಾಧ್ಯವಾಗಿಲ್ಲ ಎಂಬ ಆರೋಪಗಳಿವೆ. ಇದುವರೆಗೂ 5 ಲಕ್ಷ ರೈತರಿಗೆ ಮನ್ನಾ ಸೌಲಭ್ಯ ದೊರೆತಿದೆ ಎಂಬುದು ಸರಕಾರದ ಲೆಕ್ಕಾಚಾರ. ಸಾಲ ಮನ್ನಾ ಯೋಜನೆ ಎಲ್ಲರಿಗೂ ತಲುಪುವ ಬಗ್ಗೆ ಚರ್ಚೆಯಾಗಲಿ.

ರೈತರ ಆತ್ಮಹತ್ಯೆ
ರಾಜ್ಯ ಸರಕಾರ ರೈತರ ಸಾಲ ಮನ್ನಾ ಘೋಷಣೆ ಮಾಡಿದರೂ ರಾಜ್ಯದಲ್ಲಿ ಅನ್ನದಾತರ ಆತ್ಮಹತ್ಯೆ ನಿಂತಿಲ್ಲ. ಸಾಲ ಮನ್ನಾ ಘೋಷಣೆ ಮಾಡಿದ ಮೇಲೂ 30 ಜನ ಅನ್ನದಾತರು ಅಸು ನೀಗಿರುವುದು ಕಳವಳಕಾರಿ ವಿಷಯ. ಸಾಲ ಮನ್ನಾ ಆತ್ಮಹತ್ಯೆಗೆ ಪರಿಹಾರವಾಗದಿರುವುದರಿಂದ ರೈತರಲ್ಲಿ ಆತ್ಮ ವಿಶ್ವಾಸ ಮೂಡಿಸಲು ಪರಿಹಾರೋಪಾಯ ಕಂಡುಕೊಳ್ಳಬೇಕು.

ಬಜೆಟ್‌ ಅನುಷ್ಠಾನ
ಬಜೆಟ್‌ ಅನುದಾನಗಳ ಬಗ್ಗೆ ಸದಸ್ಯರು ಗಂಭೀರ ಗಮನ ನೀಡಿ, ಚರ್ಚಿಸಬೇಕು. ಸಾಲ ಮನ್ನಾದಿಂದಾಗಿ ಉಳಿದ ಯೋಜನೆಗಳು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಂಡಿಲ್ಲ. ಆಮೆಗತಿಯಲ್ಲಿ ಸಾಗುತ್ತಿರುವ ನೀರಾವರಿ ಯೋಜನೆಗಳು, ಘೋಷಿಸಿರುವ ಯೋಜನೆಗಳು ಆರಂಭವಾಗದೇ ಇರುವುದು, ಆಶ್ರಯ ಮನೆಗಳಿಗೆ ಹಣ ಬಿಡುಗಡೆ ಮಾಡದಿರುವುದರ ಬಗ್ಗೆ ಸಾಕಷ್ಟು ಆಕ್ಷೇಪಗಳಿವೆ. 

ಟಾಪ್ ನ್ಯೂಸ್

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.