ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು
Team Udayavani, Feb 11, 2019, 12:30 AM IST
ರಾಣಿಬೆನ್ನೂರ: ಶಾಲೆಗೆ ರಜೆ ಇದ್ದ ಕಾರಣ ಕುಮದ್ವತಿ ನದಿ ಬಾಂದಾರ ಬಳಿ ಆಟವಾಡಲು ತೆರಳಿದ್ದ ಮೂವರು ವಿದ್ಯಾರ್ಥಿನಿಯರು ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಕೂಲಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯರು ಅದೇ ಗ್ರಾಮದ 3ನೇ ತರಗತಿಯ ಸುಮನ್ ಫಕ್ರುಸಾಬ್ ತುಮ್ಮಿನಕಟ್ಟಿ (9), 6ನೇ ತರಗತಿಯ ನಿಷಾದ್ಖಾನಂ ಖಾದರ್ಸಾಬ್ ಪಾಟೀಲ (12), 7ನೇ ತರಗತಿಯ ಮಜ್ಮನೀಲ ಹುಸೇನ್ಸಾಬ್ ತೋಟದ (13) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆ ಇರುವುದರಿಂದ ಬುತ್ತಿ ಕಟ್ಟಿಕೊಂಡು ಊಟ ಮಾಡಲು ನದಿಗೆ ತೆರಳಿದ್ದರು. ನೀರಿಗಿಳಿದು ಆಟವಾಡುವಾಗ ಈ ದುರ್ಘಟನೆ ನಡೆದಿದೆ. ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ