ನಿಮಗೂ ನಾನು ಅಡ್ಜಸ್ಟ್ ಮಾಡಿಕೊಂಡಿರಬಹುದು ಅಂತ ಅನುಮಾನ ಇದೆಯಾ?
Team Udayavani, Feb 11, 2019, 8:38 AM IST
ಬೆಂಗಳೂರು:ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಆಪರೇಷನ್ ಕಮಲ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ವಿಧಾನಸಭೆಯ ಕಲಾಪದಲ್ಲಿ ಗಂಭೀರ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು, ನಿಮಗೂ ನನ್ನ ಮೇಲೆ ಅನುಮಾನವೇ? ಯಾಕೆ ಒಂದೂ ಮಾತನಾಡಿಲ್ಲ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸುವ ಮೂಲಕ ಸದನದಲ್ಲಿ ನಗೆಯ ಅಲೆಯುಕ್ಕಿಸಿದ ಪ್ರಸಂಗ ನಡೆಯಿತು. ಅಲ್ಲದೇ ಸಿದ್ದರಾಮಯ್ಯ ಅವರು ಕೂಡಾ ಚರ್ಚೆಯಲ್ಲಿ ಪಾಲ್ಗೊಂಡು ಅಭಿಪ್ರಾಯವ್ಯಕ್ತಪಡಿಸಿದರು.
ಆಡಿಯೋ ಕುರಿತ ಚರ್ಚೆಯ ಸಂದರ್ಭದಲ್ಲಿ ಹಿಂಭಾಗದಲ್ಲಿ ಕುಳಿತಿದ್ದ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಮಾತನಾಡಿದ ಸ್ಪೀಕರ್, ಎಲ್ಲರೂ ಮಾತನಾಡಿದ್ದಾರೆ, ಆದರೆ ನಿಮಗೂ ನನ್ನ ಮೇಲೆ ಅನುಮಾನ ಇದೆಯಾ? ಇಂತಹ ಪರಿಸ್ಥಿತಿಯಲ್ಲಿ ನೀವು ಸಹಾನುಭೂತಿ, ಧೈರ್ಯ ಹೇಳದೆ ಹೋದರೆ ಹೇಗೆ?ಅಥವಾ ಇವ್ನು ಏನಾದರೂ ಅಡ್ಜಸ್ಟ್ ಮಾಡಿಕೊಂಡಿರಬುದು ಅಂತಾನಾ ಎಂಬುದಾಗಿ ಹೇಳಿದರು.
ಬಳಿಕ ಎದ್ದು ನಿಂತು ಮಾತನಾಡಿದ ಸಿದ್ದರಾಮಯ್ಯ, ನನಗೆ ನಿಮ್ಮ ಮೇಲೆ ಎಳ್ಳಷ್ಟು ಅನುಮಾನ ಬರಲು ಸಾಧ್ಯವೇ ಇಲ್ಲ. ನಾನು ಬಹಳ ವರ್ಷಗಳಿಂದ ನಿಮ್ಮ ವೈಯಕ್ತಿಕ, ಸಾರ್ವಜನಿಕ ಬದುಕು ನೋಡುತ್ತ ಬಂದಿದ್ದೇನೆ. ಹೇಗೆ ಬದುಕಿದ್ದೀರಿ ಅಂತ ಬಹಳ ಹತ್ತಿರದಿಂದ ನೋಡಿದ್ದೇನೆ. ಈ ವಿಚಾರದಲ್ಲಿ ಜನರು ಏನು ಹೇಳುತ್ತಾರೆ ಎಂಬುದು ಮುಖ್ಯ. ನಿಮ್ಮ ಸ್ಥಾನದ ಗೌರವ ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾನು ಮನವಿ ಮಾಡುವುದು ಏನೆಂದರೆ ನೀವು ಯಾವುದೇ ರೀತಿಯಿಂದಲೂ ವೈಯಕ್ತಿಕವಾಗಿ ಈ ಘಟನೆಯನ್ನು ನೋಡದೇ ಸದನದ ಗೌರವ ಎತ್ತಿಹಿಡಿಯುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ