ನಿಮಗೂ ನಾನು ಅಡ್ಜಸ್ಟ್ ಮಾಡಿಕೊಂಡಿರಬಹುದು ಅಂತ ಅನುಮಾನ ಇದೆಯಾ?
Team Udayavani, Feb 11, 2019, 8:38 AM IST
ಬೆಂಗಳೂರು:ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಆಪರೇಷನ್ ಕಮಲ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ವಿಧಾನಸಭೆಯ ಕಲಾಪದಲ್ಲಿ ಗಂಭೀರ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು, ನಿಮಗೂ ನನ್ನ ಮೇಲೆ ಅನುಮಾನವೇ? ಯಾಕೆ ಒಂದೂ ಮಾತನಾಡಿಲ್ಲ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸುವ ಮೂಲಕ ಸದನದಲ್ಲಿ ನಗೆಯ ಅಲೆಯುಕ್ಕಿಸಿದ ಪ್ರಸಂಗ ನಡೆಯಿತು. ಅಲ್ಲದೇ ಸಿದ್ದರಾಮಯ್ಯ ಅವರು ಕೂಡಾ ಚರ್ಚೆಯಲ್ಲಿ ಪಾಲ್ಗೊಂಡು ಅಭಿಪ್ರಾಯವ್ಯಕ್ತಪಡಿಸಿದರು.
ಆಡಿಯೋ ಕುರಿತ ಚರ್ಚೆಯ ಸಂದರ್ಭದಲ್ಲಿ ಹಿಂಭಾಗದಲ್ಲಿ ಕುಳಿತಿದ್ದ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಮಾತನಾಡಿದ ಸ್ಪೀಕರ್, ಎಲ್ಲರೂ ಮಾತನಾಡಿದ್ದಾರೆ, ಆದರೆ ನಿಮಗೂ ನನ್ನ ಮೇಲೆ ಅನುಮಾನ ಇದೆಯಾ? ಇಂತಹ ಪರಿಸ್ಥಿತಿಯಲ್ಲಿ ನೀವು ಸಹಾನುಭೂತಿ, ಧೈರ್ಯ ಹೇಳದೆ ಹೋದರೆ ಹೇಗೆ?ಅಥವಾ ಇವ್ನು ಏನಾದರೂ ಅಡ್ಜಸ್ಟ್ ಮಾಡಿಕೊಂಡಿರಬುದು ಅಂತಾನಾ ಎಂಬುದಾಗಿ ಹೇಳಿದರು.
ಬಳಿಕ ಎದ್ದು ನಿಂತು ಮಾತನಾಡಿದ ಸಿದ್ದರಾಮಯ್ಯ, ನನಗೆ ನಿಮ್ಮ ಮೇಲೆ ಎಳ್ಳಷ್ಟು ಅನುಮಾನ ಬರಲು ಸಾಧ್ಯವೇ ಇಲ್ಲ. ನಾನು ಬಹಳ ವರ್ಷಗಳಿಂದ ನಿಮ್ಮ ವೈಯಕ್ತಿಕ, ಸಾರ್ವಜನಿಕ ಬದುಕು ನೋಡುತ್ತ ಬಂದಿದ್ದೇನೆ. ಹೇಗೆ ಬದುಕಿದ್ದೀರಿ ಅಂತ ಬಹಳ ಹತ್ತಿರದಿಂದ ನೋಡಿದ್ದೇನೆ. ಈ ವಿಚಾರದಲ್ಲಿ ಜನರು ಏನು ಹೇಳುತ್ತಾರೆ ಎಂಬುದು ಮುಖ್ಯ. ನಿಮ್ಮ ಸ್ಥಾನದ ಗೌರವ ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾನು ಮನವಿ ಮಾಡುವುದು ಏನೆಂದರೆ ನೀವು ಯಾವುದೇ ರೀತಿಯಿಂದಲೂ ವೈಯಕ್ತಿಕವಾಗಿ ಈ ಘಟನೆಯನ್ನು ನೋಡದೇ ಸದನದ ಗೌರವ ಎತ್ತಿಹಿಡಿಯುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?