ರಾಜ್ಯದ ತನಿಖಾ ಸಂಸ್ಥೆ ಮೇಲೆ ನಂಬಿಕೆ ಇಲ್ಲ, SIT ತನಿಖೆಗೆ BJP ವಿರೋಧ
Team Udayavani, Feb 11, 2019, 9:54 AM IST
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ವಾಕ್ಸಮರಕ್ಕೆ ಕಾರಣವಾಗಿದ್ದ ಆಪರೇಷನ್ ಕಮಲದ ಆಡಿಯೋ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಲ್ಲದೇ ಸರ್ಕಾರದ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ತನಿಖೆಗೆ ನಮ್ಮ ಅಭ್ಯಂತರ ಇಲ್ಲ. ಆದರೆ ಎಸಿಬಿ, ಎಸ್ ಐಟಿ ಮೇಲೆ ನಮಗೆ ನಂಬಿಕೆ ಇಲ್ಲ. ಎಲ್ಲಾ ತನಿಖಾ ಸಂಸ್ಥೆಗಳು ಸಿಎಂ ಹಿಡಿತದಲ್ಲಿದೆ ಎಂದು ಬಿಜೆಪಿ ನಾಯಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಆಡಿಯೋ ಪ್ರಕರಣವನ್ನು ಎಸ್ ಐಟಿ ತನಿಖೆ ನಡೆಸುವುದನ್ನು ಒಪ್ಪಲು ಸಾಧ್ಯವೇ ಇಲ್ಲ. ಈ ಹಿಂದಿನ ಪ್ರಕರಣಗಳು ಕೂಡಾ ತನಿಖೆಯಾಗಲಿ. ಆಡಿಯೋ ಪ್ರಕರಣದ ಬಗ್ಗೆ ಸದನ ಸಮಿತಿ, ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಆಡಿಯೋ ಸಂಭಾಷಣೆಯ ಸಮಗ್ರ ತನಿಖೆಗೆ ನಮ್ಮ ವಿರೋಧವಿದೆ ಎಂದು ಹೇಳಿದೆ.
ಎಸ್ ಐಟಿ ತನಿಖೆಗೆ ನಮ್ಮ ವಿರೋಧವಿದೆ ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಆರ್.ಅಶೋಕ್ ಸೇರಿದಂತೆ ಎಲ್ಲಾ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶೇಷ ತನಿಖೆಗೆ ಸಹಮತವಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ