ಸ್ಪೀಕರ್ಗೆ ಸಿಡಿ ಸಲ್ಲಿಸಿದ ಬಿಜೆಪಿ
Team Udayavani, Feb 12, 2019, 12:45 AM IST
ಬೆಂಗಳೂರು: ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೋಗೆ ಪ್ರತಿಯಾಗಿ ಬಿಜೆಪಿಯಿಂದಲೂ ಸೋಮವಾರ ಸ್ಪೀಕರ್ಗೆ ಆಡಿಯೋ ಸಿಡಿಯೊಂದನ್ನು ಸಲ್ಲಿಸಿರುವುದು ಕುತೂಹಲ ಮೂಡಿಸಿದೆ.
ವಿಧಾನಸಭೆಯಲ್ಲಿ ಸೋಮವಾರ ಮಧ್ಯಾಹ್ನ ನಂತರದ ಕಲಾಪದ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ರೇಣುಕಾಚಾರ್ಯ, 40 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಕ್ಕೆ ಸಂಬಂಧಪಟ್ಟಂತೆ ನನ್ನ ಬಳಿ ಸಿಡಿ ಇದ್ದು, ಈ ಬಗ್ಗೆಯೂ ತನಿಖೆ ನಡೆಸಬೇಕೆಂದು ಮನವಿ ಮಾಡಿದರು. ಬಳಿಕ ಆ ಸಿಡಿ ಯನ್ನು ಸ್ಪೀಕರ್ಗೆ ರವಾನಿಸಿದರು.
ರೇಣುಕಾಚಾರ್ಯ ಸ್ಪೀಕರ್ಗೆ ಸಲ್ಲಿಸಿದ್ದಾರೆ ಎನ್ನಲಾದ ಆಡಿಯೋದಲ್ಲಿ ವಿಧಾನ ಪರಿಷತ್ಗೆ ನಾಮಕರಣ ಸಂಬಂಧ ವಿಜಯಪುರದ ವಿಜುಗೌಡ ಪಾಟೀಲ್ ಅವರೊಂದಿಗೆ ಕುಮಾರಸ್ವಾಮಿ ನಡೆಸಿದ ಸಂವಾದ ಹಾಗೂ ಹಣಕಾಸಿನ ವಿಚಾರ ಕುರಿತ ಮಾತುಕತೆ ವಿವರ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ಸದನದಲ್ಲಿ ಬಿಡುಗಡೆ ಮಾಡಿದ ಸಿಡಿ ರಾತ್ರಿ ವೇಳೆಗೆ ವಾಟ್ಸ್ಆ್ಯಪ್ಗ್ಳಲ್ಲಿ ಹರಿದಾಡುತ್ತಿತ್ತು.
ವಿಧಾನ ಪರಿಷತ್ಗೆ ನಾನೊಬ್ಬನೇ ನಾಮಕರಣ ಮಾಡಲು ಸಾಧ್ಯವಿಲ್ಲ. ನಮಗೂ ನೂರಾರು ಕಷ್ಟವಿದೆ. ನಾನು ನಿಮ್ಮ ಹೆಸರು ಪ್ರಸ್ತಾಪಿಸಿದರೂ ಯಾವ ಶಾಸಕರು ಸಹಿ ಮಾಡಲು ಸಿದ್ಧರಿಲ್ಲ. ಎಲ್ಲ ಶಾಸಕರು ಒಂದೊಂದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ. 40 ಜನ 40 ಕೋಟಿ ರೂ. ಕೇಳುತ್ತಾರೆ.ಒಬ್ಬ ಅಭ್ಯರ್ಥಿ ಗೆಲ್ಲಲು 29 ಮತ ಬೇಕು. ಇನ್ನು 11 ಹೆಚ್ಚುವರಿ ಮತಗಳಿದ್ದು, ಅದಕ್ಕೆ 18 ಸೇರಿಸಿದರೆ ಮತ್ತೂಂದು ಸ್ಥಾನ ಪಡೆಯಬಹುದು. ಆಗ ವ್ಯಾಪಾರ ನಡೆಯುತ್ತದೆ. ವಿಜುಗೌಡ ಅವರ ಬಗ್ಗೆ ಪ್ರೀತಿ ಇದೆ ಎಂಬುದಾಗಿ ಕುಮಾರಸ್ವಾಮಿ ಮಾತನಾಡಿದ್ದಾರೆ ಎನ್ನಲಾಗಿದೆ.
ರಾಜ್ಯಸಭಾ, ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಕೋಟಿ ರೂ. ಕೊಡಿಸಿ ಎಂದು ಶಾಸಕರು ಕೇಳುತ್ತಿದ್ದಾರೆ. ಕೇವಲ ಶಾಸಕರಷ್ಟೇ ಅಲ್ಲ 40 ತಿಂಗಳು ಸಚಿವರಾಗಿ ಕಾರ್ಯ ನಿರ್ವಹಿಸಿದವರೂ ಹಣ ಕೇಳುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರ ಬಳಿಯೂ ವ್ಯಾಪಾರ ಮಾಡಿಕೊಂಡು ಬಂದಿದ್ದಾರೆ. ಎಲ್ಲರೂ ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಇದು ನನ್ನ ಹಣೆ ಬರಹ. 2016ರವರೆಗೆ ಕಾಯಿರಿ ಎಂದು ಕುಮಾರಸ್ವಾಮಿ ಚರ್ಚಿಸಿದ್ದಾರೆ ಎಂದು ಆಡಿಯೋದಲ್ಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ