ಮಹೇಶ ಕುಮಠಳ್ಳಿ ಅಕ್ರಮ ಬಂಧನ: ನೋಟಿಸ್
Team Udayavani, Feb 12, 2019, 12:30 AM IST
ಬೆಂಗಳೂರು: ‘ಅಥಣಿ ಶಾಸಕ ಮಹೇಶ ಕುಮಠಳ್ಳಿ ನಾಪತ್ತೆಯಾಗಿದ್ದಾರೆ, ಅವರನ್ನು ಯಾರೋ ಅಪಹರಿಸಿ ಅಕ್ರಮ ಬಂಧನದಲ್ಲಿ ಇಟ್ಟುಕೊಂಡಿದ್ದಾರೆ’ ಎಂದು ಆರೋಪಿಸಿ ಸಲ್ಲಿಸಲಾಗಿರುವ ಹೇಬಿಯಸ್ ಕಾರ್ಪಸ್ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿಗೊಳಿಸಿದೆ.
ಈ ಸಂಬಂಧ ಬೆಳಗಾವಿ ಜಿಲ್ಲೆ ಅಥಣಿಯ ನಿವಾಸಿ ವಕೀಲ ಹಾಗೂ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಮೋದ ದಯಾನಂದ ಹಿರೇಮನಿ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಯು ನ್ಯಾ. ಕೆ.ಎನ್. ಫಣೀಂದ್ರ ಹಾಗೂ ಕೆ. ನಟರಾಜನ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆ ಬಂದಿತ್ತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಅಥಣಿ ಪೊಲೀಸರಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?